ನೇಪಾಲಕ್ಕೆ ನಾವೇ ಶೆರ್ಪಾ


Team Udayavani, May 13, 2018, 8:55 AM IST

nepal.png

ಕಠ್ಮಂಡು: ನೇಪಾಲಕ್ಕೆ ಯಶಸ್ಸಿನ ಶಿಖರವನ್ನೇರಲು ಭಾರತ ಶೆರ್ಪಾಗಳ ಮಾದರಿಯಲ್ಲಿ ಅನನ್ಯ ಸಹಕಾರ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ, ನೆರೆರಾಷ್ಟ್ರಕ್ಕೆ ಆಶ್ವಾಸನೆ ನೀಡಿದ್ದಾರೆ. ಕಠ್ಮಂಡುವಿನಲ್ಲಿ ಇಲ್ಲಿನ ನಗರಾಡಳಿತ ತಮಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. 

“”ಹಿಮಾಲಯ ಪರ್ವತಾರೋಹಿಗಳಿಗೆ ಶೆರ್ಪಾ ಜನಾಂಗ ಗುರುತರ ಸಹಕಾರ ನೀಡುತ್ತದೆ. ಅದೇ ರೀತಿಯ ಸಹಕಾರವನ್ನು ಭಾರತ, ನೇಪಾಲಕ್ಕೆ ನೀಡುತ್ತದೆ” ಎಂದ ಅವರು, ಇತ್ತೀಚಿನ ವರ್ಷಗಳಲ್ಲಿ ನೇಪಾಲ, ಬದಲಾವಣೆಯ ಹಾದಿಗೆ ಹೊರಳಿದ್ದನ್ನು ಶ್ಲಾಸಿದರು. ನೇಪಾಲ, ಯುದ್ಧವನ್ನು ಬಿಟ್ಟು ಬುದ್ಧನನ್ನು ಆಲಿಂಗಿಸಿದೆ.

ಬಂದೂಕನ್ನು ಬಿಟ್ಟು ಬ್ಯಾಲೆಟ್‌ ಕಡೆಗೆ ಸಾಗಿ ಬಂದಿದ್ದು ಶ್ಲಾಘನೀಯ. ಆದರೆ, ಈವರೆಗಿನ ಪಯಣ, ಗೌರೀ ಶಂಕರ ಶಿಖರದ ತಪ್ಪಲನ್ನು ತಲುಪಿದಂತಷ್ಟೆ. ನಿಜವಾದ ಆರೋಹಣ ಇಲ್ಲಿಂದ ಶುರುವಾಗಲಿದೆ. ಯಶಸ್ಸಿನ ಶಿಖರದ ತುತ್ತತುದಿಗೆ ತಲುಪಲು ನೇಪಾಲ ಕೈಗೊಳ್ಳುವ ಎಲ್ಲಾ ಪ್ರಯತ್ನಗಳಿಗೆ ಭಾರತ ಹೆಗಲು ಕೊಡಲಿದೆ ಎಂದು ಅವರು ಹೇಳಿದರು. 

ಪ್ರಧಾನಿಯವರ ಈ ಹೇಳಿಕೆಗೆ ನೆರೆದಿದ್ದ ಜನಸಾಗರ ಜೋರಾಗಿ ಕರತಾಡನ ಮಾಡಿ ಸಂತಸ ವ್ಯಕ್ತಪಡಿಸಿತು. ಇದರ ನಡುವೆಯೇ ಮೋದಿ, “”ಭಾರತ- ನೇಪಾಲ ಮೈತ್ರಿ ಅಮರವಾಗಲಿ” ಎಂದು ಉದ್ಘೋಷಿಸಿದರು. ಆನಂತರ, ಕಠ್ಮಂಡುವಿನ ಸೌಂದರ್ಯ ಬಣ್ಣಿಸಿದ ಅವರು, ಕಠ್ಮಂಡು ನಗರ ಪುರಾತನ ಮತ್ತು ಆಧುನಿಕತೆಯ ಸಮ್ಮಿಶ್ರಣವಾಗಿದ್ದು, ತನ್ನದೇ ಆದ ವೈವಿಧ್ಯತೆ ಹೊಂದಿದೆ ಎಂದರು. ಇನ್ನು, ಹಿಂದೆ ನೇಪಾಲಕ್ಕೆ ಭೇಟಿ ನೀಡಿದ್ದಾಗ ಪಶುಪತಿನಾಥ ದೇಗುಲಕ್ಕೆ ಭೇಟಿ ನೀಡಿದ್ದು, ಈ ಬಾರಿ ಪಶುಪತಿನಾಥ ದೇಗುಲದ ಜತೆಗೆ ಜನಕಪುರಿ, ಮುಕ್ತಿನಾಥ ದೇಗುಲಗಳಿಗೂ ಭೇಟಿ ನೀಡಿದ್ದು ಧನ್ಯತೆಯನ್ನು ತಂದಿದೆ ಎಂದರು. ಸನ್ಮಾನದ ವೇಳೆ, ಕಠ್ಮಂಡು ಮೇಯರ್‌ ಸುಂದರ್‌ ಶಕ್ಯ ಅವರು ನಗರದ ಸಾಂಕೇತಿಕ ಕೀಲಿ ಕೈಯನ್ನು ಮೋದಿಯವರಿಗೆ ಪ್ರದಾನ ಮಾಡಿದರು.

ಕ್ರಿಕೆಟ್‌ ಅನುಬಂಧಕ್ಕೆ ಮೆಚ್ಚುಗೆ: ಕ್ರಿಕೆಟ್‌ ಕ್ರೀಡೆಯು ಭಾರತ ಮತ್ತು ನೇಪಾಲ ನಾಗರಿಕರ ಬಾಂಧವ್ಯವನ್ನು ವೃದ್ಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು. ನೇಪಾಲದ ಯುವ ಕ್ರಿಕೆಟಿಗ ಸಂದೀಪ್‌ ಲಮಿಚ್ಚಾನೆ, ಪ್ರಸ್ತುತ ನಡೆಯುತ್ತಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ (ಐಪಿಎಲ್‌) ಡೆಲ್ಲಿ ಡೇರ್‌ಡೆವಿಲ್ಸ್‌ ತಂಡದಲ್ಲಿ ಸ್ಥಾನ ಪಡೆದಿದ್ದಾನೆ. ಆ ಮೂಲಕ, ಐಪಿಎಲ್‌ಗೆ ಕಾಲಿಟ್ಟ ಮೊದಲ ನೇಪಾಲಿಗ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ. ತಮ್ಮ ಮಾತುಗಳಲ್ಲಿ ಸಂದೀಪ್‌ ಹೆಸರು ಉಲ್ಲೇಖೀಸಿದ ಮೋದಿ, ಈ ಕ್ರಿಕೆಟ್‌ ಅನುಬಂಧ ನೇಪಾಲ ಹಾಗೂ ಭಾರತದ ಬಾಂಧವ್ಯವವನ್ನೂ ವೃದ್ಧಿಸುತ್ತದೆ ಎಂದು ಆಶಿಸಿದರು.

ಪ್ರಧಾನಿ ಪ್ರವಾಸ ಪೂರ್ವ ನಿರ್ಧರಿತ  
ಪ್ರಧಾನಿ ಮೋದಿಯವರ ನೇಪಾಲ ಪ್ರವಾಸ, ಮೊದಲೇ ನಿರ್ಧಾರವಾಗಿತ್ತು ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಜಯ್‌ ಗೋಖಲೆ ಸ್ಪಷ್ಟಪಡಿಸಿದ್ದಾರೆ. ಕರ್ನಾಟಕದ ವಿಧಾನ ಸಭೆ ಚುನಾವಣೆಯ ಸಂದರ್ಭದಲ್ಲಿ ನೇಪಾಲ ಪ್ರವಾಸ ಕೈಗೊಂಡಿರುವ ಪ್ರಧಾನಿ, ಕರ್ನಾಟಕದ ಮತದಾರರ ಮೇಲೆ ಪ್ರಭಾವ ಬೀರಲು ನೇಪಾಲದ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆಂದು ಕಾಂಗ್ರೆಸ್‌ ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಗೋಖಲೆ, ನೇಪಾಲದ ಚುನಾವಣೆಯಲ್ಲಿ ಕೆ.ಪಿ. ಶರ್ಮಾ ಒಲಿ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಪ್ರಧಾನಿಯವರ ನೇಪಾಲ ಪ್ರವಾಸ ನಿಗದಿಯಾಗಿತ್ತು ಎಂದಿದ್ದಾರೆ. 

ಐತಿಹಾಸಿಕ ಭೇಟಿ: ಮೋದಿ ಬಣ್ಣನೆ
ತಮ್ಮ ನೇಪಾಲ ಭೇಟಿ ಐತಿಹಾಸಿಕ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ತಮ್ಮ 2 ದಿನಗಳ ಪ್ರವಾಸ ಮುಗಿಸಿ ಶನಿವಾರ ಸ್ವದೇಶಕ್ಕೆ ವಾಪಸಾದ ವೇಳೆ ಟ್ವೀಟ್‌ ಮಾಡಿರುವ ಅವರು, “”ಈ ಬಾರಿ ನೇಪಾಲದ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಜತೆ ನಡೆಸಿದ ಮಾತುಕತೆ ಫ‌ಲಪ್ರದವಾಗಿದ್ದು, ಚೈತನ್ಯದಾಯಕವೂ ಆಗಿತ್ತು” ಎಂದು ಹೇಳಿದ್ದಾರೆ.

ಮುಕ್ತಿನಾಥದಲ್ಲಿ ಪ್ರಾರ್ಥನೆ
ನೇಪಾಲದ ಅತ್ಯಂತ ಪ್ರಸಿದ್ಧವಾದ ಮುಕ್ತಿನಾಥ ದೇಗುಲಕ್ಕೆ ಪ್ರಧಾನಿ ಮೋದಿ, ಶನಿವಾರ ಬೆಳಗ್ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. 

ಈ ಮೂಲಕ, ಈ ದೇಗುಲಕ್ಕೆ ಭೇಟಿ ನೀಡಿದ ಮೊದಲ ವಿಶ್ವ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಆನಂತರ, ಮತ್ತೂಂದು ಪ್ರಸಿದ್ಧ ದೇಗುಲ, ಬಾಗ¾ತಿ ನದಿ ತಟದಲ್ಲಿರುವ ಪಶುಪತಿನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ, ಅವರಿಗೆ ದೇಗುಲದ ಪ್ರತಿರೂಪವೊಂದನ್ನು ನೆನಪಿನ ಕಾಣಿಕೆಯಾಗಿ ನೀಡ‌ಲಾಯಿತು. ಭೇಟಿಯಿಂದ ತಮ್ಮಲ್ಲಿ ಪಶುಪತಿನಾಥನ ಆಶೀರ್ವಾದ ಸಿಕ್ಕ ಅನುಭೂತಿ ಉಂಟಾಗಿದೆ ಎಂದು ಟ್ವಿಟರ್‌ನಲ್ಲಿ ಪ್ರಧಾನಿ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.