ಕೋರ್ಟ್ಗೆ ಹೋಗುವಂತಿಲ್ಲ
Team Udayavani, May 17, 2018, 6:25 AM IST
ಹೊಸದಿಲ್ಲಿ: ಸಾರ್ವಜನಿಕ ವಲಯದ ಕಂಪನಿಗಳು ಮತ್ತು ಸರಕಾರದ ವಿವಿಧ ಇಲಾಖೆಗಳ ಮಧ್ಯೆ ಇರುವ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಕೋರ್ಟ್ಗೆ ಹೋಗುವಂತಿಲ್ಲ. ಇಂತಹ ಭಿನ್ನಾಭಿಪ್ರಾಯಗಳಿಗೆ ಸಂಪುಟ ಕಾರ್ಯದರ್ಶಿಯ ನಿರ್ಧಾರವೇ ಅಂತಿಮವಾಗಿರುತ್ತದೆ ಎಂಬ ಹೊಸ ನೀತಿ ಜಾರಿಗೆ ತರಲು ಕೇಂದ್ರ ನಿರ್ಧರಿಸಿದೆ.
ರೈಲ್ವೇ ಆದಾಯ ತೆರಿಗೆ,ಕಂದಾಯ,ಸೀಮಾ ಸುಂಕ ಇಲಾಖೆಗಳಿಗೆ ಈ ನೀತಿ ಅನ್ವಯ ಆಗುವುದಿಲ್ಲ. ಸರ್ಕಾರದ ಇಲಾಖೆಗಳ ಜತೆ ಹಾಗೂ ಇತರ ಸರ್ಕಾರಿ ಕಂಪನಿಗಳ ಜೊತೆಗೆ ವಿವಾದಗಳಿದ್ದರೂ ಈ ನೀತಿ ಅನ್ವಯವಾಗಲಿದೆ. ಹೊಸ ನೀತಿಯಿಂದ ಅನಗತ್ಯ ಸಂಘರ್ಷಗಳು ಹಾಗೂ ಯೋಜನೆಗಳ ಜಾರಿಯಲ್ಲಿ ವಿಳಂಬವನ್ನು ತಡೆಯಬಹುದು.
ಮೊದಲ ಹಂತದಲ್ಲಿ ಇಂತಹ ವಿವಾದಗಳನ್ನು, ಆಡಳಿತಾತ್ಮಕ ಇಲಾಖೆಗಳ ಕಾರ್ಯದರ್ಶಿಗಳನ್ನು ಒಳಗೊಂಡ ಸಮಿತಿಗೆ ವಹಿಸಲಾಗುತ್ತದೆ. ಈ ಸಮಿತಿಯಲ್ಲಿ ಸಮಸ್ಯೆ ಪರಿಹಾರವಾಗದಿದ್ದರೆ, ಇದನ್ನು ಸಂಪುಟ ಕಾರ್ಯದರ್ಶಿಗೆ ವಹಿಸಲಾಗುತ್ತದೆ. ಅವರ ನಿರ್ಧಾರವೇ ಅಂತಿಮವಾಗಿರುತ್ತದೆ. ಮೂರು ತಿಂಗಳೊಳಗಾಗಿ ಈ ಪ್ರಕ್ರಿಯೆ ಮುಗಿಯಬೇಕು ಎಂದು ನಿಗದಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ