ಕಾವೇರಿ ಬಗ್ಗೆ ಕಮಲ್ ಹಾಸನ್ ಚರ್ಚೆ
Team Udayavani, May 20, 2018, 6:00 AM IST
ಚೆನ್ನೈ: ಕಾವೇರಿ ಸ್ಕೀಮ್ನ ಕರಡು ನಿಯಮಗಳಿಗೆ ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದ ಮಾರನೇ ದಿನವೇ ತಮಿಳುನಾಡಿನಲ್ಲಿ ಚಟುವಟಿಕೆಗಳು ಬಿರುಸಾಗಿವೆ. ರಾಜಕಾರಣಿಯಾಗಿ ಬದಲಾಗಿರುವ ಕಮಲ್ಹಾಸನ್ರ ಮಕ್ಕಳ್ ನೀಧಿ ಮಯ್ಯಮ್ (ಎಂಎನ್ಎಂ) ಶನಿವಾರ ವಿವಿಧ ರಾಜಕೀಯ ಪಕ್ಷಗಳು ಮತ್ತು ರೈತರ ಸಂಘಟನೆಗಳ ಜತೆಗೆ ಮಾತುಕತೆ ನಡೆಸಿದರು. ಪ್ರತಿಪಕ್ಷ ಡಿಎಂಕೆ ಮತ್ತು ತಮಿಳು ಸೂಪರ್ಸ್ಟಾರ್ ರಜನಿಕಾಂತ್ ಈ ಪ್ರಕ್ರಿಯೆಗಳಿಂದ ದೂರ ಉಳಿದಿದ್ದಾರೆ. ಸಭೆಯಲ್ಲಿ ಕಾವೇರಿ ನದಿ ಮುಖಜ ಭೂಮಿ ಪ್ರದೇಶವನ್ನು ಸಂರಕ್ಷಿತ ಕೃಷಿ ವಲಯ ಎಂದು ಘೋಷಿಸಬೇಕು ಎಂಬುದು ಸೇರಿದಂತೆ ಪ್ರಮುಖ ವಿಚಾರಗಳನ್ನು ಚರ್ಚಿಸಲಾಗಿದೆ.
ಆರ್.ಕೆ.ನಗರ ಕ್ಷೇತ್ರದ ಶಾಸಕ ಟಿ.ಟಿ.ವಿ.ದಿನಕರನ್, ಡಾ.ಎಸ್.ರಾಮದಾಸ್ ಅವರ ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಮಾತುಕತೆಯಲ್ಲಿ ಪಾಲ್ಗೊಂಡಿದ್ದವು. ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್ ಗೈರು ಹಾಜರಾದ ಬಗ್ಗೆ ಪ್ರತಿಕ್ರಿಯೆ ನೀಡಿದ ಕಮಲ್ಹಾಸನ್ “ಶನಿವಾರದ ಕಾರ್ಯಕ್ರಮಗಳ ಬಗ್ಗೆ ಅವರಿಗೆ ತಿಳಿದಿರಲಿಲ್ಲ. ಅವರಿಗೆ ಗೊತ್ತಿದ್ದರೆ ಆಗಮಿಸಿರುತ್ತಿದ್ದರು’ ಎಂದು ಹೇಳಿದ್ದಾರೆ.
ರಜನಿಕಾಂತ್ ಕಾರ್ಯಕ್ರಮದಿಂದ ದೂರು ಉಳಿದಿರುವ ಬಗ್ಗೆ ಮಾತನಾಡಿದ ಕಮಲ್ಹಾಸನ್ “ಅವರಿಗೆ ಆಹ್ವಾನ ನೀಡಿದಾಗ, ನೀವು ಈಗಾಗಲೇ ಹೊಸ ರಾಜಕೀಯ ಪಕ್ಷ ಆರಂಭಿಸಿಯಾಗಿದೆ. ನಾನು ಆರಂಭಿಸಬೇಕಷ್ಟೆ. ಹೀಗಾಗಿ ನಾನು ಹೇಗೆ ಬರಲಿ ಎಂದು ಪ್ರಶ್ನೆ ಮಾಡಿದರು. ಅದು ಅವರ ಅಭಿಪ್ರಾಯವಾಗಿದ್ದರೂ, ಕಾವೇರಿ ವಿಚಾರವಾದ್ದರಿಂದ ರಜನಿ ಬರಬಹುದಿತ್ತು’ ಎಂದಷ್ಟೇ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್