ಪ್ಲಾಸ್ಟಿಕ್, ಪಾಲಿಥಿನ್ ಬಳಕೆ ಕೈಬಿಡಿ
Team Udayavani, May 28, 2018, 2:12 PM IST
ಹೊಸದಿಲ್ಲಿ: ದೇಶದ ಜನರು ಪ್ಲಾಸ್ಟಿಕ್ ಮತ್ತು ಪಾಲಿಥಿನ್ ಬಳಕೆಯನ್ನು ಕೈಬಿಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ರವಿವಾರ 44ನೇ ಆವೃತ್ತಿಯ “ಮನ್ ಕಿ ಬಾತ್’ನಲ್ಲಿ ಮಾತನಾಡಿದ ಅವರು, ಅದರಿಂದಾಗಿ ಪರಿಸರ, ಜೀವ ವೈವಿಧ್ಯ ಮತ್ತು ಆರೋಗ್ಯಕ್ಕೆ ತೊಂದರೆಯಾಗುತ್ತದೆ ಎಂದು ಹೇಳಿದ್ದಾರೆ. ಅದಕ್ಕಾಗಿ ಜೂ.5ರಂದು ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ಕರೆ ನೀಡಿದ್ದಾರೆ. ಆ ದಿನ ಕೇವಲ ಸಸಿ ನೆಟ್ಟರೆ ಸಾಲದು, ಅದು ಬೆಳೆದು ಮರವಾಗುವ ತನಕ ಜೋಪಾನವಾಗಿ ಕಾಪಾಡಬೇಕು ಎಂದಿದ್ದಾರೆ. ಪ್ರಸಕ್ತ ಸಾಲಿನ ವಿಶ್ವ ಪರಿಸರ ದಿನವನ್ನು ಭಾರತವೇ ಆಯೋಜಿಸುತ್ತಿರುವುದು ಹೆಮ್ಮೆಯ ವಿಚಾರ ಎಂದರು.
ಇತ್ತೀಚೆಗೆ ಉತ್ತರ ಭಾರತದಲ್ಲಿ ಮಳೆ ಸಹಿತ ಧೂಳು ಬಿರುಗಾಳಿ ಬೀಸಿದೆ. ಇದು ಹವಾಮಾನದಲ್ಲಿ ಬದಲಾವಣೆಯಾ ಗಿರುವುದನ್ನು ತೋರಿಸುತ್ತದೆ. ಅದರಿಂದಾಗಿಯೇ ಜೀವ ಹಾನಿ ಉಂಟಾಗಿದೆ ಎಂದೂ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಸಾಂಪ್ರದಾಯಿಕ ಕ್ರೀಡೆಗಳ ಮರೆ: ದೇಹದ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆ ಅಗತ್ಯ ಎಂದು ಹೇಳಿರುವ ಪ್ರಧಾನಿ ಮೋದಿ, ಸಾಂಪ್ರದಾಯಿಕ ಕ್ರೀಡೆಗಳನ್ನು ಮರೆಯಬಾರದು. ಖೋಖೋ, “ಪಿತ್ತು’, “ಲತ್ತು’, “ಗಿಲ್ಲಿ ದಾಂಡು’ ಸೇರಿದಂತೆ ಹಲವು ಸಾಂಪ್ರದಾಯಿಕ ಆಟಗಳು ಮರೆಯಾಗುತ್ತಿವೆ. ಇದು ಸರಿಯಲ್ಲ. ಸಾಂಪ್ರದಾಯಿಕ ಆಟಗಳು ನಾಶವಾದರೆ ಬಾಲ್ಯವೇ ನಷ್ಟವಾದಂತೆ. ಶಾಲೆಗಳು, ಯುವ ಸಂಘಟನೆಗಳು, ನೆರೆಹೊರೆಯವರು ಸೇರಿಕೊಂಡು ಅವುಗಳನ್ನು ರಕ್ಷಿಸಲು ಮುಂದಾಗಬೇಕು. ಜನರ ಬೆಂಬಲದಿಂದ ಸಾಂಪ್ರದಾಯಿಕ ಕ್ರೀಡೆಗಳನ್ನು ರಕ್ಷಿಸಿ ಅವುಗಳನ್ನು ಪೋಷಿಸಿಕೊಂಡು ಬರಲು ಸಾಧ್ಯವಿದೆ ಎಂದು ಹೇಳಿದ್ದಾರೆ. ಅವುಗಳನ್ನು ಆಡುವ ಬಗೆ ಮತ್ತು ನಿಯಮಗಳ ಬಗ್ಗೆ ವೀಡಿಯೋ ಚಿತ್ರೀಕರಣ ಮಾಡಿಕೊಳ್ಳಬಹುದು. ಜತೆಗೆ ಅನಿಮೇಷನ್ ಸಿನಿಮಾಗಳನ್ನೂ ಮಾಡಿಕೊಳ್ಳಬಹುದು ಎಂದು ಸಲಹೆ ಮಾಡಿದ್ದಾರೆ.
ಇದೇ ವೇಳೆ, ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯಿಂದ ಫಿಟ್ನೆಸ್ ಚಾಲೆಂಜ್ ಸ್ವೀಕರಿಸಿದ್ದು ಸಂತೋಷವಾಗಿದೆ ಎಂದು ಹೇಳಿದ್ದಾರೆ ಪ್ರಧಾನಿ. ಜತೆಗೆ, 250 ದಿನಗಳ ಕಾಲ ಐಎನ್ಎಸ್ ತಾರಿಣಿಯಲ್ಲಿ ವಿಶ್ವ ಪರ್ಯಟನೆ ಮಾಡಿದ ನೌಕಾಪಡೆಯ ಮಹಿಳಾ ಯೋಧರನ್ನೂ ಅವರು ಕೊಂಡಾಡಿದ್ದಾರೆ. ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ ಜವಾಹರ್ಲಾಲ್ ನೆಹರೂ ಮತ್ತು ವೀರ ಸಾವರ್ಕರ್ ಅವರನ್ನೂ ಸ್ಮರಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ