12 ಕೋಟಿ ಜನಕ್ಕೆ 6ಲಕ್ಷ ಕೋ.ರೂ. ಸಾಲ
Team Udayavani, May 30, 2018, 10:23 AM IST
ಹೊಸದಿಲ್ಲಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದಾದ “ಮುದ್ರಾ ಬ್ಯಾಂಕ್’ನ ಲಾಭವನ್ನು ದೇಶದ 12 ಕೋಟಿ ಯುವ ಜನರು ಪಡೆದಿದ್ದು, ಈವರೆಗೆ ಸುಮಾರು 6 ಲಕ್ಷ ಕೋಟಿ ರೂ.ಗಳನ್ನು ಸಾಲದ ರೂಪದಲ್ಲಿ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಕರ್ನಾಟಕ ಸೇರಿದಂತೆ ದೇಶಾದ್ಯಂತ ಆಯ್ದ ಫಲಾನುಭವಿಗಳ ಜತೆಗೆ ಮಂಗಳವಾರ, ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಮೋದಿ, ಮುದ್ರಾ ಯೋಜನೆಯ ಯಶಸ್ಸನ್ನು ಮನಸಾರೆ ಹಾಡಿ ಹೊಗಳಿದರು. ಕಳೆದ ಮೂರು ವರ್ಷಗಳಲ್ಲಿ 5.73 ಲಕ್ಷ ಕೋಟಿ ರೂ.ಗಳಷ್ಟು ಸಾಲ ನೀಡಲಾಗಿದೆ. ಕಳೆದ ಆರ್ಥಿಕ ವರ್ಷವೊಂದರಲ್ಲೇ, 2.53 ಲಕ್ಷ ಕೋಟಿ ರೂ. ನೀಡಿದ್ದೇವೆ. ಇವರಲ್ಲಿ ಶೇ. 74ರಷ್ಟು ಅಥವಾ 9 ಕೋಟಿಯಷ್ಟು ಮಂದಿ ಮಹಿಳೆಯರಾಗಿದ್ದು, ಒಟ್ಟಾರೆ ಫಲಾನುಭವಿಗಳಲ್ಲಿ ಶೇ. 55ರಷ್ಟು ಜನರು ಎಸ್ಸಿ, ಎಸ್ಟಿ ಹಾಗೂ ಒಬಿಸಿಗೆ ಸೇರಿದರು ಎಂದರು.
ವಿಪಕ್ಷಗಳ ವಿರುದ್ಧ ಟೀಕಾಸ್ತ್ರ: ಇದೇ ವೇಳೆ, ಹಿಂದಿನ ಸರ್ಕಾರಗಳ ಸಾಲ ನೀತಿಯನ್ನು ಟೀಕಿಸಿದ ಮೋದಿ, “”ಹಿಂದೆಲ್ಲಾ ರಾಜಕೀಯ ವ್ಯಕ್ತಿಗಳಿಗೆ ಹತ್ತಿರವಾಗಿರುವವರು ಮಾತ್ರ ಸಾಲ ಪಡೆಯಲು ಅರ್ಹರಾಗಿರುತ್ತಿದ್ದರು. ಆದರೆ, ಆ ಸಾಲಗಳು ಮರುಪಾವತಿಯಾಗುತ್ತಿರಲಿಲ್ಲ. ಆದರೆ, ಈಗ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ, ಬ್ಯಾಂಕುಗಳಿಂದ ನೇರವಾಗಿ ಫಲಾನುಭವಿಗಳಿಗೆ ಸಾಲ ಸಿಗುತ್ತಿದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್