ನಾಗ್ಪುರಕ್ಕೆ ಪ್ರಣವ್‌ ಕಾಂಗ್ರೆಸ್‌ಗೆ ಅಚ್ಚರಿ


Team Udayavani, May 30, 2018, 10:54 AM IST

pranab.jpg

ಹೊಸದಿಲ್ಲಿ/ನಾಗ್ಪುರ: ನಾಗ್ಪುರದಲ್ಲಿ ನಡೆಯಲಿರುವ ಆರ್‌ಎಸ್‌ಎಸ್‌ ಕಾರ್ಯಕ್ರಮದ ಆಹ್ವಾನಕ್ಕೆ ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ಒಪ್ಪಿರುವುದು ಕಾಂಗ್ರೆಸ್‌ನಲ್ಲಿ ಅಚ್ಚರಿ ಮೂಡಿಸಿದೆ. ಸಂಘಟನೆಯ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ಭಾಗವಹಿಸಲಿದ್ದಾರೆಯೇ ಎಂಬ ಪ್ರಶ್ನೆಗೆ ಕಾಂಗ್ರೆಸ್‌ ನಾಯಕ ಟಾಮ್‌ ವಡಕ್ಕನ್‌ “ಪ್ರಣವ್‌ ಅವರನ್ನೇ ಕೇಳಿ’ ಎಂದು ಹೇಳಿದ್ದಾರೆ.

ಜೂ. 7ರಂದು ನಾಗ್ಪುರದಲ್ಲಿ ನಡೆಯುವ ಆರ್‌ಎಸ್‌ಎಸ್‌ನ ತೃತೀಯ ವರ್ಷದ ಶಿಬಿರಾರ್ಥಿಗಳ ಸಮಾರೋಪ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ, ಕಾಂಗ್ರೆಸ್‌ ನಾಯಕ ಪ್ರಣವ್‌ ಮುಖರ್ಜಿ ಮುಖ್ಯ ಅತಿಥಿಯಾಗಲು ಒಪ್ಪಿಕೊಂಡಿದ್ದಾರೆ. ಅವರ ಹೆಸರು ಆಹ್ವಾನ ಪತ್ರಿಕೆಯಲ್ಲಿ ಮುದ್ರಣ ವಾಗಿದ್ದು, ರಾಷ್ಟ್ರೀಯವಾದದ ಕುರಿತು ಅವರು ಮಾತನಾಡಲಿದ್ದಾರೆ. ಮತ್ತೂಂದು ಕುತೂಹಲಕಾರಿ ಅಂಶವೆಂದರೆ, ಮುಖರ್ಜಿ ರಾಷ್ಟ್ರಪತಿ ಹುದ್ದೆಯಿಂದ ನಿರ್ಗಮಿಸಿದ ಬಳಿಕ ಕನಿಷ್ಠ ನಾಲ್ಕು ಬಾರಿ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ರನ್ನು ಭೇಟಿಯಾಗಿದ್ದಾರೆ ಎಂದು ಆರೆಸ್ಸೆಸ್‌ ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಲು ನಕಾರ: ಆರ್‌ಎಸ್‌ಎಸ್‌ ಆಹ್ವಾನ ಪ್ರಣವ್‌ ಒಪ್ಪಿರುವುದು ಕಾಂಗ್ರೆಸ್‌ನಲ್ಲಿ ಇರುಸು ಮುರುಸಿಗೆ ಕಾರಣವಾಗಿದ್ದು, ಕೆಲವು ನಾಯಕರಂತೂ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಪಕ್ಷದ ವಕ್ತಾರ ಟಾಮ್‌ ವಡಕ್ಕನ್‌ ಬಳಿ ಪ್ರತಿಕ್ರಿಯೆ ಕೇಳಿದಾಗ “ಪ್ರಣವ್‌ರನ್ನೇ ಕೇಳಿ’ ಎಂದು ಹೇಳಿದ್ದು, “ಕಾಂಗ್ರೆಸ್‌ ತತ್ವ-ಸಿದ್ಧಾಂತಗಳಿಗೂ, ಆರೆಸ್ಸೆಸ್‌ ನಿಲುವುಗಳಿಗೂ ಬಹಳಷ್ಟು ವ್ಯತ್ಯಾಸವಿದೆ’ ಎಂದಿದ್ದಾರೆ. ಇದೇ ವೇಳೆ ಸದ್ಯ ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಅಭಿಪ್ರಾಯವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ.

2010ರಲ್ಲಿ ಬುರಾರಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಮಹಾಧಿವೇಶನದಲ್ಲಿ ಭಯೋತ್ಪಾದಕರಿಗೂ ಆರ್‌ಎಸ್‌ಎಸ್‌ ಮತ್ತು ಇತರ ಸಂಘ ಪರಿವಾರಗಳಿಗೆ  ಲಿಂಕ್‌ ಇದೆ ಎಂದು ಹೇಳಲಾಗಿರುವ ಬಗ್ಗೆ ತನಿಖೆ ನಡೆಸಬೇಕು ಎಂಬ ರಾಜಕೀಯ ನಿರ್ಣಯವನ್ನು ಅವರೇ ಮಂಡಿಸಿದ್ದರು ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ. ಕೇಂದ್ರದ ಮಾಜಿ ಸಚಿವ ಎ.ಕೆ.ಆ್ಯಂಟನಿ, “ಮುಖರ್ಜಿ ಬುದ್ಧಿವಂತರು. ಅವರು ಜಾತ್ಯತೀತ ಮನಃಸ್ಥಿತಿಯವರು. ಅವರು ತಮ್ಮ ನಿಲುವು ಬದಲಿಸಲಿಕ್ಕಿಲ್ಲ’ ಎಂದಿದ್ದಾರೆ.

ಆರೆಸ್ಸೆಸ್‌ ಕಾರ್ಯಕ್ರಮದಲ್ಲಿ ಪ್ರಣವ್‌ ಪಾಲ್ಗೊಳ್ಳುವಿಕೆ ರಾಜಕೀಯ ಅಸ್ಪೃಶ್ಯತೆ ನಿವಾರಿಸುವ ನಿಟ್ಟಿನಲ್ಲಿ ಉತ್ತಮ ಬೆಳವಣಿಗೆ. ಆರೆಸ್ಸೆಸ್‌ ಪಾಕಿಸ್ಥಾನದ ಐಎಸ್‌ಐ ಅಲ್ಲ, ಅದೊಂದು ರಾಷ್ಟ್ರೀಯವಾದಿಗಳ ಸಂಘಟನೆ.
– ನಿತಿನ್‌ ಗಡ್ಕರಿ, ಕೇಂದ್ರ ಸಾರಿಗೆ ಸಚಿವ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.