ಮಧ್ಯ ಪ್ರದೇಶದಲ್ಲಿ ಬಿಎಸ್ಪಿ-ಕಾಂಗ್ರೆಸ್‌ ಮೈತ್ರಿ?


Team Udayavani, Jun 3, 2018, 6:00 AM IST

ss-26.jpg

ಭೋಪಾಲ್‌/ಲಕ್ನೋ: ಕರ್ನಾಟಕದಲ್ಲಿ ಜೆಡಿಎಸ್‌ ಜತೆಗೆ ಚುನಾವಣೋತ್ತರ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ ಕಾಂಗ್ರೆಸ್‌, ಅದೇ ರೀತಿ ಮಧ್ಯಪ್ರದೇಶದಲ್ಲಿ ವರ್ಷಾಂತ್ಯದಲ್ಲಿ ಅಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಾಗಿ ಅಲ್ಲಿನ ಪ್ರಾದೇಶಿಕ ಪಕ್ಷವಾದ ಬಿಎಸ್‌ಪಿ ಜತೆ ಹೊಂದಾಣಿಕೆಗೆ  ಮುಂದಾಗಿದೆ. ಪ್ರತಿ ರಾಜ್ಯಗಳ ಚುನಾವಣೆಗಳಲ್ಲೂ ಬಿಜೆಪಿ ತನಗೆ ಒಡ್ಡುತ್ತಿರುವ ಕಠಿಣ ಸವಾಲುಗಳನ್ನು ಮೆಟ್ಟಲು ಕಾಂಗ್ರೆಸ್‌ ಪಾಲಿಗೆ ಆಯಾ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ಜತೆಗೆ ಕೈ ಜೋಡಿಸುವುದು ಅನಿವಾರ್ಯವಾಗಿರುವುದರಿಂದ ಈ ಹೊಂದಾಣಿಕೆಗೆ ಪಕ್ಷ ಮುಂದಾಗಿದೆ. 

ಮಧ್ಯಪ್ರದೇಶದಲ್ಲಿ ಚುನಾವಣೆ ಘೋಷಣೆಗೆ ಮೊದಲೇ ಕಾಂಗ್ರೆಸ್‌ ವತಿಯಿಂದಲೇ ಬಿಎಸ್‌ಪಿ ನಾಯಕಿ ಮಾಯಾವತಿಗೆ ಮೈತ್ರಿ ಪ್ರಸ್ತಾಪ ಸಲ್ಲಿಸಲಾಗಿದೆ. ಆದರೆ ಬಿಎಸ್‌ಪಿ ನಾಯಕಿ ಪ್ರತಿಕ್ರಿಯೆ ನೀಡಿಲ್ಲ. ಆದರೆ “ದ ವೈರ್‌’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಕೇಂದ್ರದ ಮಾಜಿ ಸಚಿವ ಕಮಲ್‌ನಾಥ್‌, ಮಧ್ಯಪ್ರದೇಶದಲ್ಲಿ ಬಿಎಸ್‌ಪಿ ಜತೆಗಿನ ಮೈತ್ರಿ ಅಂತಿಮವಾಗಿದೆ ಎಂದಿದ್ದಾರೆ. ಇಷ್ಟೇ ಅಲ್ಲ, ರಾಜಸ್ಥಾನ ಮತ್ತು ಛತ್ತೀಸ್‌ಗಡ ವಿಧಾನಸಭೆ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಳ್ಳಲಾಗುತ್ತದೆ ಎಂದಿದ್ದಾರೆ. 20 ವರ್ಷಗಳಿಂದ ಮಧ್ಯಪ್ರದೇಶದಲ್ಲಿ ಬಿಎಸ್ಪಿಗೆ ಶೇ.7ರಷ್ಟು, ಕಾಂಗ್ರೆಸ್‌ಗೆ ಶೇ.36ರಷ್ಟು ಮತಗಳು ಸಿಕ್ಕಿವೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೆ ದಲಿತ ಸಮುದಾಯದ ಮತಗಳನ್ನು ಸೆಳೆಯು ವುದು ಮತ್ತು ಶೇ.45ರಷ್ಟು ಮತ ಪಡೆದಿ ರುವ ಬಿಜೆಪಿಗೆ ಪ್ರಬಲ ಸವಾಲೊಡ್ಡುವುದು ಕಾಂಗ್ರೆಸ್‌ ಲೆಕ್ಕಾಚಾರ. 

80 ಸ್ಥಾನ ಕೇಳಿದ ಬಿಎಸ್ಪಿ?: ಮತ್ತೂಂದು ಬೆಳವಣಿಗೆಯಲ್ಲಿ 2019ರ ಲೋಕಸಭೆ ಚುನಾವಣೆಗಾಗಿ ಉತ್ತರ ಪ್ರದೇಶದ ಒಟ್ಟು 80 ಸ್ಥಾನಗಳ ಪೈಕಿ 40 ಕ್ಷೇತ್ರಗಳನ್ನು ತನಗೇ ಬಿಟ್ಟುಕೊಡಬೇಕು ಎಂದು ಮಾಯಾವತಿ ಬೇಡಿಕೆ ಮುಂದಿಟ್ಟಿದ್ದಾರೆ ಎಂದು ಹೇಳಲಾ ಗಿದೆ. ಇತ್ತೀಚಿನ ಲೋಕಸಭೆ, ವಿಧಾನಸಭೆ ಉಪಚುನಾವಣಾ ಫ‌ಲಿತಾಂಶದಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟದ ಅಭ್ಯರ್ಥಿಗಳು ಜಯ ಗಳಿಸಿದ್ದರೂ ಮಾಯಾಮತಿ ಮೌನವಾಗಿಯೇ ಇದ್ದಾರೆ. ಫ‌ಲಿತಾಂಶಕ್ಕೆ ಮುನ್ನ ನಡೆದಿದ್ದ ಪಕ್ಷದ ಸಭೆಯಲ್ಲಿ ತನಗೆ ಗೌರವಯುತ ಸ್ಥಾನಗಳನ್ನು ಬಿಟ್ಟುಕೊಟ್ಟರೆ ಮಾತ್ರ ಮೈತ್ರಿಕೂಟ. ಇಲ್ಲದೇ ಇದ್ದರೆ ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಎಂದಿದ್ದರು ಮಾಯಾವತಿ. ಅದು ಈ ಅಂಶವನ್ನು ಪುಷ್ಟೀಕರಿಸುತ್ತದೆ ಎಂದು ಹೆಸರು ಬಹಿರಂಗ ಪ ಡಿಸಲಿಚ್ಛಿದ ಬಿಎಸ್‌ಪಿ ನಾಯಕ “ದ ಟೈಮ್ಸ್‌ ಆಫ್ ಇಂಡಿಯಾ’ಕ್ಕೆ ತಿಳಿಸಿದ್ದಾರೆ. 

ಮತ್ತೂಂದೆಡೆ ದೆಹಲಿಯಲ್ಲಿ ಮುಂದಿನ ಚುನಾವಣೆಗಾಗಿ ಆಮ್‌ ಆದ್ಮಿ ಪಕ್ಷದ ಜತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಕ್ಷದ ಕಾರ್ಯಕರ್ತರು, ನಾಯಕರಿಗೆ ಅದು ಸಮ್ಮತವಿಲ್ಲವೆಂದು ದೆಹಲಿ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಅಜಯ್‌ ಮಕೇನ್‌ ತಿಳಿಸಿದ್ದಾರೆ.

ಕರ್ನಾಟಕ ಮಾದರಿಯಲ್ಲಿ  ಕೊಂಚ ಬದಲು ಮಾಡಿ ಅನುಸರಿಸಿದ ಕಾಂಗ್ರೆಸ್‌

ಉಪ ಚುನಾವಣಾ ಫ‌ಲಿತಾಂಶದ ಬಳಿಕ ಇದುವರೆಗೆ ಮೌನವಾಗಿರುವ ಮಾಯಾವತಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.