ಎಸ್ಪಿಯನ್ನೇ ಮನೆಯೊಳಗೆ ಕೂಡಿ ಹಾಕಿ ದರೋಡೆ ಮಾಡಿದ ಕಳ್ಳರು!


Team Udayavani, Jun 4, 2018, 5:09 PM IST

theft-big-sp.jpg

ಭೋಪಾಲ್: ಇದೊಂದು ಹುಬ್ಬೇರಿಸುವಂತಹ ಪ್ರಕರಣ…ಹೌದು ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ)ಯನ್ನೇ ಮನೆಯೊಳಗೆ ಕೂಡಿ ಹಾಕಿ ಕಳ್ಳತನ ಮಾಡಿರುವ ಘಟನೆ ಶನಿವಾರ ಬೆಳಗ್ಗಿನ ಜಾವ ಇಂಧೋರ್ ನಲ್ಲಿ ನಡೆದಿದೆ.

ಇಂಧೋರ್ ನ ಬಂಗಾಂಗ್ ಪ್ರದೇಶದಲ್ಲಿರುವ ಎಂಪಿಇಬಿ ಕಾಲೋನಿಯಲ್ಲಿನ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ರಾಜೌರಿ ಅವರ ಮನೆಗೆ ಶನಿವಾರ ಬೆಳಗ್ಗಿನ ಜಾವ 2.30ರ ಹೊತ್ತಿಗೆ ನಾಲ್ವರು ವ್ಯಕ್ತಿಗಳು ಬಂದಿದ್ದರು.

ಅವರಲ್ಲಿ ಇಬ್ಬರು ಮನೆ ಕಿಟಕಿಯ ಕಬ್ಬಿಣದ ಜಾಲರಿಯನ್ನು ಕತ್ತರಿಸಿ ಒಳಗೆ ಬಂದಿದ್ದು, ಇಬ್ಬರು ಮನೆಯ ಹೊರಗೆ ಕಾವಲು ಕಾಯಲು ನಿಂತಿದ್ದರು! ಒಳಗೆ ಬಂದವರು ಮೊದಲು ಹಿಂಬಾಗಿಲನ್ನು ತೆರೆದಿಟ್ಟಿದ್ದರು. ತದನಂತರ ಒಂದು ಕೋಣೆಯಲ್ಲಿ ರಾಜೌರಿ ಅವರ ತಾಯಿ, ತಂಗಿ ಹಾಗೂ ಇಬ್ಬರು ಮಕ್ಕಳು ಮಲಗಿರುವುದನ್ನು ಪತ್ತೆಹಚ್ಚಿದ್ದರು.

ನಂತರ ಎಸ್ಪಿ ರಾಜೌರಿ ಅವರು ಮಲಗಿದ್ದ ಕೋಣೆಯ ಹೊರಗಿನಿಂದ ಲಾಕ್ ಮಾಡಿದ್ದರು. ಇದಾದ ಮೇಲೆ ಕಳ್ಳರಿಬ್ಬರು ಎಸ್ಪಿ ಅವರ ತಂಗಿ ಮಲಗಿದ್ದ ಕೋಣೆಗೆ ತೆರಳಿ ಎಲ್ಲಾ ಜಾಲಾಡಿದ್ದರು. ಅಲ್ಲಿ ಅವರಿಗೆ ಏನೂ ಸಿಗಲಿಲ್ಲವಾಗಿತ್ತು. ಪಕ್ಕದಲ್ಲೇ ನೇತು ಹಾಕಿದ್ದ ಪ್ಯಾಂಟ್ ಪರ್ಸ್ ನೊಳಗಿದ್ದ ಹಣ ಮತ್ತು ಡೆಬಿಟ್ ಕಾರ್ಡ್ ಗಳನ್ನು ತೆಗೆದುಕೊಂಡಿದ್ದರು.  ಆ ವೇಳೆ ಮನೆಯಲ್ಲಿ ಏನೋ ನಡೆಯುತ್ತಿದೆ ಎಂಬುದು ಎಸ್ಪಿಯವರಿಗೆ ಅನ್ನಿಸತೊಡಗಿ, ರೂಂನಿಂದ ಹೊರಗೆ ಬರಲು ಯತ್ನಿಸಿದಾಗ ಹೊರಗಿನಿಂದ ಲಾಕ್ ಮಾಡಿರುವುದು ಗೊತ್ತಾಗುತ್ತದೆ.

ಅಂತೂ ಕೊನೆಗೂ ಎಸ್ಪಿಯವರು ತಮ್ಮ ತಾಯಿ ಹಾಗೂ ಸಹೋದರಿಯನ್ನು ಮೊಬೈಲ್ ನಲ್ಲೇ ಸಂಪರ್ಕಿಸಿ ವಿಷಯ ತಿಳಿಸಿ ಎಚ್ಚರಿಸುತ್ತಾರೆ. ಜೊತೆಗೆ ಪೊಲೀಸರಿಗೂ ಮಾಹಿತಿ ನೀಡುತ್ತಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದರು, ಇದನ್ನು ಅರಿತ ಕಳ್ಳರು ಓಡಿ ಹೋಗಿದ್ದರು. ಆದರೆ ಅದರೊಬ್ಬ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ನಾಲ್ವರಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದೇವೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಬಂಗಾಂಗ್ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ಅಧಿಕಾರಿ ತಾರೇಶ್ ಸೋನಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.