10 ದಿನಗಳಲ್ಲಿ ರೈತರ ಸಾಲ ಮನ್ನಾ: ರಾಹುಲ್ ಭರವಸೆ
Team Udayavani, Jun 7, 2018, 6:25 AM IST
ಮಂದಸೌರ್/ಹೊಸದಿಲ್ಲಿ: ‘ಮಧ್ಯಪ್ರದೇಶದಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಹತ್ತು ದಿನಗಳಲ್ಲಿ ರೈತರ ಸಾಲ ಮನ್ನಾ ಮಾಡುತ್ತೇವೆ’ ಹೀಗೆಂದು ವಾಗ್ಧಾನ ಕೊಟ್ಟದ್ದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ. ಮಧ್ಯಪ್ರದೇಶದಲ್ಲಿ ಒಂದು ವರ್ಷದ ಹಿಂದೆ ಪೊಲೀಸ್ ಗೋಲಿಬಾರ್ ನಲ್ಲಿ ಅಸುನೀಗಿದ ಐವರು ರೈತರ ಸ್ಮರಣಾರ್ಥ ಮತ್ತು ಮುಂದಿನ ವಿಧಾನಸಭೆ ಚುನಾವಣೆ ಪ್ರಯುಕ್ತ ಬುಧವಾರ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಧ್ಯಪ್ರದೇಶದಲ್ಲಿನ ರೈತರ ಪರಿಸ್ಥಿತಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳೇ ಕಾರಣ ಎಂದು ರಾಹುಲ್ ಟೀಕಿಸಿದ್ದಾರೆ. ‘ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಹತ್ತು ದಿನಗಳ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಲಾಗುತ್ತದೆ’ ಎಂದು ಘೋಷಿಸಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ಟೀಕಾ ಪ್ರಕಾರ ನಡೆಸಿದ ಅವರು ‘ಮೇಕ್ ಇನ್ ಇಂಡಿಯಾ ವಿಫಲವಾಗಿದೆ ಎಂದರು.
ತಿರುಗೇಟು: ರಾಹುಲ್ ಹೇಳಿರುವ 15 ಉದ್ಯಮಪತಿಗಳ 2.5 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ ವಿಚಾರ ಸುಳ್ಳು ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಫೇಸ್ ಬುಕ್ ನಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
MUST WATCH
ಹೊಸ ಸೇರ್ಪಡೆ
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ