ಅಮರನಾಥ ಯಾತ್ರಿಕರ ಮೇಲೆ ದಾಳಿಗೆ 450 ಪಾಕ್ ಉಗ್ರರು ಸಜ್ಜು: ವರದಿ
Team Udayavani, Jun 7, 2018, 11:48 AM IST
ಜಮ್ಮು : ಅಮರನಾಥ ಯಾತ್ರಿಕರ ಮೇಲೆ ದಾಳಿ ನಡೆಸುವ ಉದ್ದೇಶದೊಂದಿಗೆ ಸುಮಾರು 450 ಪಾಕ್ ಉಗ್ರರು ಎಲ್ಓಸಿ ದಾಟಿ ಕಾಶ್ಮೀರದೊಳಗೆ ನುಸುಳಿ ಬರಲು ಸಿದ್ಧರಾಗಿ ನಿಂತಿರುವುದಾಗಿ ಗುಪ್ತಚರ ದಳ ಮುನ್ನೆಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಗಡಿಯಲ್ಲಿ ಭಾರತೀಯ ಪಡೆಗಳು ಕಟ್ಟೆಚ್ಚರ ವಹಿಸಿವೆ. ಗುಪ್ತಚರ ದಳ ತನ್ನ ತಾಜಾ ವರದಿಯನ್ನು ಕೇಂದ್ರ ಸರಕಾರಕ್ಕೂ ಕಳುಹಿಸಿದೆ.
ಇದೇ ಜೂನ್ 28ರಿಂದ ಆರಂಭಗೊಳ್ಳುವ ಅಮರನಾಥ ಯಾತ್ರೆಯನ್ನು ಗುರಿ ಇರಿಸಿಕೊಂಡು ದಾಳಿ ನಡೆಸಲು ಪಾಕ್ ಬೆಂಬಲಿತ ಹಿಜ್ಬುಲ್ ಮುಜಾಹಿದೀನ್ ಮತ್ತು ಲಷ್ಕರ್ ಎ ತಯ್ಯಬ ಉಗ್ರ ಸಂಘಟನೆಯ ಸುಮಾರು 450 ಉಗ್ರರು ಎಲ್ಓಸಿಯ ಆಚೆ ಸಿದ್ಧರಾಗಿ ನಿಂತಿರುವ ಬಗ್ಗೆ ಗುಪ್ತಚರ ದಳ ಮಾಹಿತಿ ಕಲೆ ಹಾಕಿದೆ.
ರಮ್ಜಾನ್ ಪ್ರಯುಕ್ತ ಜಮ್ಮು ಕಾಶ್ಮೀರದಲ್ಲಿ ಭಾರತೀಯ ಯೋಧರು ಸರಕಾರಣ ಆಣತಿಯಂತೆ ಸೇನಾ ಕಾರ್ಯಾಚರಣೆಯನ್ನು ನಿಲ್ಲಿಸಿರುವುದರಿಂದ ಉಗ್ರರಿಗೆ ಮತ್ತೆ ಒಂದಾಗಲು, ಹೊಸ ಉಗ್ರರನ್ನು ನೇಮಿಸಿಕೊಳ್ಳಲು, ಮತ್ತು ದಾಳಿ ತಂತ್ರಗಳನ್ನು ರೂಪಿಸಲು ಸಾಕಷ್ಟು ಸಮಯಾವಕಾಶ ದೊರಕಿದಂತಾಗಿದೆ ಎಂದು ಗುಪ್ತಚರ ದಳ ಸೇನೆ ಮತ್ತು ಸರಕಾರವನ್ನು ಎಚ್ಚರಿಸಿದೆ.
ಎಲ್ಓಸಿ ಉದ್ದಕ್ಕೂ ಇರುವ ಪಾಕ್ ಬೆಂಬಲಿತ ಉಗ್ರರ ಲಾಂಚ್ ಪ್ಯಾಡ್ಗಳಲ್ಲಿ, ಸರ್ಜಿಕಲ್ ಸ್ಟ್ರೈಕ್ ಬಳಿಕ, ಉಗ್ರರ ಇಷ್ಟೊಂದು ಚಟುವಟಿಕೆ ಕಂಡುಬರುತ್ತಿರುವುದು ಇದೇ ಮೊದಲಾಗಿದೆ.
ಪಾಕ್ ಉಗ್ರರನ್ನು ಭಾರತದ ಗಡಿಯೊಳಗೆ ನುಸುಳಿಸಲು ನೆರವಾಗುವ ಪಾಕಿಸ್ಥಾನದ ವಿಶೇಷ ಭದ್ರತಾ ಸಮೂಹದ (ಎಸ್ಎಸ್ಜಿ) ಇರುವಿಕೆ ಎಲ್ಓಸಿಯಲ್ಲಿ ಕಂಡುಬಂದಿರುವುದು ದೃಢಪಟ್ಟಿದೆ ಎಂಬುದಾಗಿ ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೋರ್ವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ