ನಕಲಿ ನಿರ್ದೇಶಕರಿಗೆ ಕೆವೈಸಿ ಕಪಿಮುಷ್ಟಿ


Team Udayavani, Jun 9, 2018, 6:00 AM IST

vv-30.jpg

ಹೊಸದಿಲ್ಲಿ: ವಿಜಯ್‌ ಮಲ್ಯ ಹಾಗೂ ನೀರವ್‌ ಮೋದಿಯಂಥ ಉದ್ಯಮಿಗಳು ಬ್ಯಾಂಕ್‌ಗಳಿಗೆ ಮೋಸ ಮಾಡಿ, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ವಿದೇಶಕ್ಕೆ ಪರಾರಿಯಾದಂತಹ ಪ್ರಕರಣಗಳು ಪುನರಾವರ್ತನೆಯಾಗುವುದನ್ನು ತಪ್ಪಿಸಲು ಕೇಂದ್ರ ಸರಕಾರ ಈಗ ಮಹತ್ವದ ಯೋಜನೆ ಜಾರಿಗೊಳಿಸಲು ನಿರ್ಧರಿಸಿದೆ. ಅಷ್ಟೇ ಅಲ್ಲ, ಇದು ನಕಲಿ ಕಂಪೆನಿಗಳನ್ನು ನಿಯಂತ್ರಿಸಲೂ ನೆರವಾಗಲಿದೆ. ಕಂಪೆನಿ ನಿರ್ದೇಶಕರ  ಕೆವೈಸಿ (ನಿಮ್ಮ ಗ್ರಾಹಕರನ್ನು ತಿಳಿಯಿರಿ) ದಾಖಲೆಗಳನ್ನು ಸಂಗ್ರಹಿಸುವ ಬೃಹತ್‌ ಅಭಿಯಾನವನ್ನು ಕಾರ್ಪೊರೇಟ್‌ ವ್ಯವಹಾರಗಳ ಸಚಿವಾಲಯ ಆರಂಭಿಸಲಿದೆ. 

ಇದರ ಅಡಿಯಲ್ಲಿ ಕಂಪೆನಿ ನಿರ್ದೇಶಕರ ಪಾಸ್‌ಪೋರ್ಟ್‌, ಪಾನ್‌ ಸಂಖ್ಯೆ ಮತ್ತು ಸಂಪರ್ಕ ವಿವರಗಳನ್ನು ದಾಖಲಿಸಲಾಗುತ್ತದೆ. ಪ್ರತಿ ವರ್ಷವೂ ವಾರ್ಷಿಕ ವಿತ್ತ ವರದಿಯನ್ನು ಸಲ್ಲಿಸುವಾಗ ಕಂಪೆನಿ ಕಾರ್ಯದರ್ಶಿ ಅಥವಾ ಚಾರ್ಟರ್ಡ್‌ ಅಕೌಂಟಂಟ್‌ಗಳು ಇದನ್ನು ಸಲ್ಲಿಸಬೇಕಿರುತ್ತದೆ.
ಇದರ ಜತೆಗೆ ಕಂಪೆನಿಯ ವಿಳಾಸವನ್ನೂ ಇನ್ನೊಂದು ನಮೂನೆಯಲ್ಲಿ ಸಲ್ಲಿಸಬೇಕಿರುತ್ತದೆ. ಇದನ್ನು ಕೂಡ ಪ್ರತಿ ವರ್ಷ ಅಪ್‌ಡೇಟ್‌ ಮಾಡಬೇಕು. ಈ ಮೂಲಕ ನಕಲಿ ಕಂಪೆನಿ ಸ್ಥಾಪಿಸುವುದನ್ನು ತಡೆಯಲು ಸಾಧ್ಯವಾಗುತ್ತದೆ. ಕಾರ್ಪೊರೇಟ್‌ ವಹಿವಾಟುಗಳ ಸಚಿವಾಲಯದ ಕಾರ್ಯದರ್ಶಿ ಇಂಜೆತಿ ಶ್ರೀನಿವಾಸ್‌ ಈ ಬಗ್ಗೆ ವಿವರಣೆ ನೀಡಿದ್ದು, ಈ ಕೆವೈಸಿ ಅಭಿಯಾನದಲ್ಲಿ ಸುಮಾರು 33 ಲಕ್ಷ ಕಂಪೆನಿ ನಿರ್ದೇಶಕರ ವಿವರಗಳನ್ನು ನವೀಕರಿಸಲಾಗುತ್ತದೆ ಎಂದಿದ್ದಾರೆ.

ಶೀಘ್ರದಲ್ಲೇ ಈ ಅಭಿಯಾನವನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ. ವಿದೇಶಿಯರಿಗೂ ಪ್ರತ್ಯೇಕ ನಮೂನೆಯಿದ್ದು, ಅವರೂ ಕೂಡ ಸಚಿವಾಲಯದಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕಿರುತ್ತದೆ. ಭೌತಿಕ ವಿಳಾಸದ ವಿವರಗಳು ಮತ್ತು ನಿರ್ದೇಶಕರಿಗೆ ಸಂಬಂಧಿಸಿದ ವಿವರಗಳನ್ನು ಕಂಪೆನಿ ಕಾರ್ಯದರ್ಶಿ ಅಥವಾ ಚಾರ್ಟರ್ಡ್‌ ಅಕೌಂಟೆಂಟ್‌ ಕಡ್ಡಾಯವಾಗಿ ಭರ್ತಿ ಮಾಡಬೇಕಿದೆ.

ಈಗಾಗಲೇ ನೋಟು ಅಮಾನ್ಯದ ಅನಂತರದಲ್ಲಿ ವ್ಯಾಪಕ ಪ್ರಮಾಣದಲ್ಲಿ ಹಣ ಜಮೆ ಮಾಡಿದ ಹಲವು ಕಂಪೆನಿಗಳ ಮೇಲೆ ನಿಗಾ ಇಟ್ಟಿರುವ ವಿವಿಧ ತನಿಖಾ ಸಂಸ್ಥೆಗಳು, ನಕಲಿ ಕಂಪೆನಿಗಳನ್ನು ರದ್ದುಗೊಳಿಸಿದ್ದವು. ಕೆವೈಸಿ ಅಭಿಯಾನದ ಮೂಲಕ ಮತ್ತೂಂದು ಸುತ್ತಿನಲ್ಲಿ ನಕಲಿ ಕಂಪೆನಿಗಳ ಮೇಲೆ ಕೇಂದ್ರ ಸರಕಾರ ಕಡಿವಾಣ ಹಾಕಲಿದೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.