ಅಮೆರಿಕ ಜತೆ ತೆರಿಗೆ ಯುದ್ಧ: ಶೇ.50 ಸುಂಕ ವಿಧಿಸಿದ ಮೋದಿ ಸರ್ಕಾರ


Team Udayavani, Jun 17, 2018, 6:00 AM IST

q-12.jpg

ನವದೆಹಲಿ: ಈ ವರ್ಷದ ಮಾರ್ಚ್‌ನಲ್ಲಿ ಅಮೆರಿಕ ಭಾರತದ ಉಕ್ಕಿನ ಉತ್ಪನ್ನಗಳಿಗೆ ಶೇ. 25 ಮತ್ತು ಅಲ್ಯುಮಿನಿಯಂ ಉತ್ಪನ್ನಗಳಿಗೆ ಶೇ.10ರಷ್ಟು ಸುಂಕ ವಿಧಿಸಿತ್ತು. ಈ ಬಗ್ಗೆ ಕೇಂದ್ರ ಸರ್ಕಾರ ಪ್ರಬಲ ಆಕ್ಷೇಪ ಸಲ್ಲಿಸಿದ್ದರೂ, ಡೊನಾಲ್ಡ್‌ ಟ್ರಂಪ್‌ ಸರ್ಕಾರ ಕಿವಿಗೇ ಹಾಕಿಕೊಂಡಿರಲಿಲ್ಲ. ಅದಕ್ಕೆ ಸರಿಯಾಗಿ ತಿರುಗೇಟು ನೀಡಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಅಮೆರಿಕದ ಮೂವತ್ತು ಉತ್ಪನ್ನಗಳಿಗೆ ಶೇ.50ರಷ್ಟು ಕಸ್ಟಮ್ಸ್‌ ಸುಂಕ  ವಿಧಿಸಿದೆ.  ಈ ಬಗ್ಗೆ ಜೂ.14ರಂದು ಕೇಂದ್ರ ಸರ್ಕಾರ ವಿಧ್ಯುಕ್ತವಾಗಿ ವಿಶ್ವ ವಾಣಿಜ್ಯ ಸಂಘಟನೆ (ಡಬ್ಲೂಟಿಒ)ಗೆ ಪ್ರಸ್ತಾವನೆ ಸಲ್ಲಿಸಿದೆ. ಈ ಮೂಲಕ ವಿಶ್ವದ ದೊಡ್ಡಣನ ಜತೆಗೆ ಭಾರತ ತೆರಿಗೆ ಯುದ್ಧಕ್ಕೆ ಮುಂದಾಗಿದೆ.

ಇದರಿಂದಾಗಿ ಆ್ಯಪಲ್‌ ಕಂಪನಿಯ ಉತ್ಪನ್ನಗಳು, ಹರ್ಲೆ ಡೇವಿಡ್‌ಸನ್‌ ಬೈಕ್‌ಗಳು, ಅಮರಿಕದಿಂದ ಭಾರತಕ್ಕೆ ಬರಲಿರುವ ಬಾದಾಮಿ, ವಾಲ್‌ನಟ್‌ (ಆಕ್ರೋಡು), ಆ್ಯಪಲ್‌ಗ‌ಳು ಸೇರಿದಂತೆ ಒಟ್ಟು ಮೂವತ್ತು ಮಾದರಿಯ ಉತ್ಪನ್ನಗಳಿಗೆ ತೆರಿಗೆ ವಿಧಿಸಲು ಮುಂದಾಗಿದೆ. ಈ ಬಗ್ಗೆ ಡಬ್ಲೂéಟಿಒಗೆ ಸಲ್ಲಿಸಲಾಗಿರುವ ಪ್ರಸ್ತಾವನೆಯಲ್ಲಿ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಬಲವಾಗಿಯೇ ಸಮರ್ಥಿಸಿಕೊಂಡಿದೆ. 

“ಅಮೆರಿಕ ಸರ್ಕಾರ ತನ್ನ ಉದ್ದಿಮೆಗಳ ರಕ್ಷಣೆಗಾಗಿ ಹೆಚ್ಚುವರಿ ತೆರಿಗೆ ವಿಧಿಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಕೂಡ ದೇಶೀಯವಾಗಿ  ಉತ್ಪಾದನೆಯಾಗುವ ವಸ್ತುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದೆ’ ಎಂದು ಹೇಳಿದೆ. ಭಾರತದ ಉಕ್ಕು ಮತ್ತು ಅಲ್ಯುಮಿನಿಯಂ ಉತ್ಪನ್ನಗಳಿಗೆ ಸುಂಕ ವಿಧಿಸುವ ಮೂಲಕ  ಅಮೆರಿಕ ಸರ್ಕಾರ 241 ಮಿಲಿಯನ್‌ ಡಾಲರ್‌  (1,566 ಕೋಟಿ ರೂ.) ಮೊತ್ತ ಸಂಗ್ರಹಿಸುತ್ತದೆ. ಅದೇ ಮಾದರಿಯಲ್ಲಿ ನಾವು ಅಮೆರಿಕದಿಂದ ಆಮದು ಮಾಡಿಕೊಳ್ಳುವ 30 ವಸ್ತುಗಳಿಗೆ ನೀಡಲಾಗುವ ವಸ್ತುಗಳಿಗೆ ನೀಡಲಾಗಿರುವ ರಿಯಾಯಿತಿ ಹಿಂಪಡೆಯಲು ಮುಂದಾಗಿದ್ದೇವೆ’ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಮೂಲಕ ಕೇಂದ್ರ ಸರ್ಕಾರ ಉಕ್ಕು ಮತ್ತು ಅಲ್ಯುಮಿನಿಯಂ ಉತ್ಪನ್ನಗಳ ಮೇಲೆ ಸುಂಕ ವಿಧಿಸಿದ ಅಮೆರಿಕ ಸರ್ಕಾರದ ಕ್ರಮಕ್ಕೆ ಮುಯ್ಯಿಗೆ ಮುಯ್ಯಿ ತೀರಿಸಿದೆ. ಅಲ್ಲದೆ ರಾಜತಾಂತ್ರಿಕ ಮಾರ್ಗದ ಮೂಲಕವೇ ವಿಚಾರವನ್ನು ನಿಭಾಯಿಸುವ ಮೂಲಕ ಮುತ್ಸದ್ದಿತನವನ್ನು ಮೆರೆದಿದೆ.   

ಡಬ್ಲೂಟಿಒ ಒಪ್ಪಂದದ ಅನ್ವಯವೇ ಈ ಕ್ರಮ ಕೈಗೊಂಡಿರುವುದಾಗಿ ಹೇಳಿರುವ ಕೇಂದ್ರ ಸರ್ಕಾರ ಈ ಬಗ್ಗೆ ಈ ವರ್ಷದ ಮೇ 18ರಂದು ಹೊರಡಿಸಲಾದ ನಿಯಮದ ಅನ್ವಯವೇ ಕ್ರಮ ಕೈಗೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದೆ. ಭಾರತದ ಮಾರುಕಟ್ಟೆ ಮೇಲೆ 

ಪರಿಣಾಮ: ಅಮೆರಿಕದ ಸರಕುಗಳ ಮೇಲೆ ಶೇ.50ರಷ್ಟು ಕಸ್ಟಮ್ಸ್‌ ಸುಂಕ ವಿಧಿಸುವ ಪ್ರಸ್ತಾಪದಿಂದಾಗಿ ಐ ಫೋನ್‌ಗಳು, ಆ ದೇಶದಿಂದ ಆಮದಾಗುವ ಹಣ್ಣುಗಳು ದುಬಾರಿಯಾಗಲಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಾ.9ರಂದು ಭಾರತದ ಉಕ್ಕು ಮತ್ತು ಅಲ್ಯುಮಿನಿಯಂ ಉತ್ಪನ್ನಗಳ ಮೇಲೆ ಕ್ರಮವಾಗಿ ಶೇ.25 ಮತ್ತು ಶೇ.10ರಷ್ಟು ತೆರಿಗೆ ವಿಧಿಸಿದ್ದರು.

ಚೀನಾದಿಂದಲೂ ಸುಂಕ ಘೋಷಣೆ
ಬೀಜಿಂಗ್‌: ಚೀನಾದಲ್ಲಿ ಮಾರಾಟವಾಗುವ ಅಮೆರಿಕದ ಸರಕುಗಳಿಗೆ ಹೆಚ್ಚುವರಿಯಾಗಿ ಶೇ.25ರಷ್ಟು ತೆರಿಗೆ ವಿಧಿಸಲಾಗಿದೆ. ಶುಕ್ರವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಾಡಿದ್ದ ನಿರ್ಧಾರಕ್ಕೆ ಪ್ರತೀಕಾರವಾಗಿ ಚೀನಾ ಸರ್ಕಾರ ಈ ಕ್ರಮ ಕೈಗೊಂಡಿದೆ. ಜು.6ರಿಂದ ಹೊಸ ನಿಯಮ ಅನ್ವಯವಾಗಲಿದೆ. ಚೀನಾದಲ್ಲಿ ಮಾರಾಟವಾಗುವ 50 ಶತಕೋಟಿ ಡಾಲರ್‌ ಮೌಲ್ಯದ 659 ವಿಧಗಳ ವಸ್ತುಗಳು ಮತ್ತು ಸೇವೆಗಳಿಗೆ ಈ ನಿಯಮ ಅನ್ವಯವಾಗಲಿದೆ. ಆರಂಭದಲ್ಲಿ 545 ವಸ್ತುಗಳಿಗೆ ಮತ್ತು ಸೇವೆಗಳಿಗೆ ಶೇ.25ರಷ್ಟು ಹೆಚ್ಚುವರಿ ಸುಂಕ ವಿಧಿಸಲಾಗುತ್ತದೆ. ಉಳಿದ 114 ವಿಧಗಳ ಸೇವೆಗಳಿಗೆ ಶೀಘ್ರದಲ್ಲಿಯೇ ಸುಂಕದ ಪ್ರಮಾಣ ಘೋಷಿಸಲಾಗುತ್ತದೆ ಎಂದು ಚೀನಾ ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇದು ಚೀನಾ ಮತ್ತು ಅಮೆರಿಕದ ವ್ಯಾಪಾರ ಯುದ್ಧಕ್ಕೆ ಇಂಬು ನೀಡಿದೆ.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.