ಶಿಕ್ಷಕರ ಪ್ರಶಸ್ತಿ: ಸ್ವಯಂ ಅರ್ಜಿ ಸಲ್ಲಿಕೆಗೆ ಅವಕಾಶ
Team Udayavani, Jun 21, 2018, 6:00 AM IST
ಹೊಸದಿಲ್ಲಿ: ಇನ್ನು ಮುಂದೆ ಸರಕಾರಿ ಶಾಲೆಗಳ ಅಧ್ಯಾಪಕರು ಶಿಕ್ಷಕರ ರಾಷ್ಟ್ರೀಯ ಪ್ರಶಸ್ತಿಗಾಗಿ ಅರ್ಜಿಯನ್ನು ನೇರವಾಗಿ ಕೇಂದ್ರ ಸರಕಾರಕ್ಕೆ ಕಳುಹಿಸಬಹುದು. ಹೀಗೆಂದು ಕೇಂದ್ರ ಮಾನವ ಸಂಪದ ಅಭಿವೃದ್ಧಿ ಇಲಾಖೆ ಸಚಿವ ಪ್ರಕಾಶ್ ಜಾಬ್ಡೇಕರ್ ಬುಧವಾರ ತಿಳಿಸಿದರು. ಆನ್ಲೈನ್ ವ್ಯವಸ್ಥೆಯಲ್ಲಿ ಸರಕಾರಿ ಶಾಲೆ ಶಿಕ್ಷಕರು ಅಥವಾ ಮುಖ್ಯ ಗುರುಗಳು ತಮ್ಮ ಬಗ್ಗೆ ಮಾಹಿತಿ ಅಪ್ಲೋಡ್ ಮಾಡಿಕೊಳ್ಳುವ ಅವಕಾಶ ಇದೆ. ಪ್ರತಿ ಜಿಲ್ಲೆಯಿಂದ 3 ಶಿಕ್ಷಕರನ್ನು, ಅಂತಿಮವಾಗಿ ಪ್ರತಿ ರಾಜ್ಯದಿಂದ 6 ಶಿಕ್ಷಕರನ್ನು ಆಯ್ಕೆ ಮಾಡಲಾಗುತ್ತದೆ. ಸ್ವತಂತ್ರ ಮಂಡಳಿ 50 ಮಂದಿ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡುತ್ತದೆ ಎಂದರು. ಕಳೆದ ವರ್ಷದವರೆಗೆ ರಾಜ್ಯ ಸರಕಾರಗಳ ಮೂಲಕ ಶಿಕ್ಷಕರನ್ನು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ