ಖರ್ಗೆಗೆ ಮಹಾ ಉಸ್ತುವಾರಿ
Team Udayavani, Jun 23, 2018, 6:00 AM IST
ಮುಂಬೈ: ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ. ಕಳೆದ ಒಂಬತ್ತು ವರ್ಷದಿಂದ ಈ ಹುದ್ದೆ ನಿರ್ವಹಿಸಿದ್ದ ಮೋಹನ್ ಪ್ರಕಾಶ್ರನ್ನು ತೆರವುಗೊಳಿಸಲಾಗಿದೆ. ಅಲ್ಲದೆ ಮಹಾರಾಷ್ಟ್ರ ಕಾಂಗ್ರೆಸ್ನಲ್ಲಿ ಹಲವು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.
ಗುಜರಾತ್ನ ಸೋನಲ್ ಪಟೇಲ್, ಹರ್ಯಾಣದ ಆಶಿಶ್ ದುವಾ ಮತ್ತು ತೆಲಂಗಾಣದ ಸಂಪತ್ ಕುಮಾರ್ರನ್ನೂ ಮಹಾರಾಷ್ಟ್ರಕ್ಕೆ ಎಐಸಿಸಿ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ. ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಹುದ್ದೆಗೇರಿ ದಂದಿನಿಂದಲೂ ಮಹಾರಾಷ್ಟ್ರ ಕಾಂಗ್ರೆಸ್ ಪುನಶ್ಚೇತನಗೊಳಿಸುವ ಯೋಚನೆ ಹೊಂದಿದ್ದರು. ಖರ್ಗೆ ನೇಮಕವನ್ನು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಅಶೋಕ್
ಚವಾಣ್ ಸ್ವಾಗತಿಸಿದ್ದು, 2014ರ ಲೋಕಸಭೆಯಲ್ಲಿ ಅವರು ಪಕ್ಷದ ಜವಾಬ್ದಾರಿ ಹೊಂದಿದ್ದರು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್