ವಿಪಕ್ಷಗಳಿಂದ ಸುಳ್ಳು, ಗೊಂದಲ, ನಿರಾಶಾವಾದ ಸೃಷ್ಟಿ : ಪ್ರಧಾನಿ ಮೋದಿ
Team Udayavani, Jun 23, 2018, 5:09 PM IST
ರಾಜಗಢ, ಮಧ್ಯ ಪ್ರದೇಶ : ”ವಿರೋಧ ಪಕ್ಷಗಳು ದೇಶದ ಜನರಲ್ಲಿ ಸುಳ್ಳುಗಳನ್ನು ಹರಡುತ್ತಿವೆ; ಗೊಂದಲಗಳನ್ನು ಸೃಷ್ಟಿಸುತ್ತಿವೆ ಮತ್ತು ನಿರಾಶಾವಾದವನ್ನು ಹುಟ್ಟುಹಾಕುತ್ತಿವೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಂದು ಇಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಾ ಹೇಳಿದರು.
“ಬಿಜೆಪಿ ಸರಕಾರ ಜನರ ಕಲ್ಯಾಣಕ್ಕಾಗಿ ಅವಿರತವಾಗಿ ಶ್ರಮಿಸುತ್ತಿದೆ; ಆದರೆ ಕೆಲವು ವಿರೋಧ ಪಕ್ಷಗಳು ಬಿಜೆಪಿ ವಿರುದ್ಧದ ನಂಜಿನಿಂದ ಜನರಲ್ಲಿ ಸುಳ್ಳು ಹರಡುತ್ತಿವೆ; ಅವರನ್ನು ಗೊಂದಲಕ್ಕೆ ಗುರಿಪಡಿಸುತ್ತಿವೆ ಮತ್ತು ಅವರಲ್ಲಿ ನಿರಾಶಾವಾದವನ್ನು ಸೃಷ್ಟಿಸುತ್ತಿವೆ’ ಎಂದು ಪ್ರಧಾನ ಮೋದಿ ಅವರು ಕಾಂಗ್ರೆಸ್ ಪಕ್ಷವನ್ನು ಹೆಸರಿಸದೆ ಪರೋಕ್ಷವಾಗಿ ಟಾಂಗ್ ನೀಡಿದರು.
ಮೋದಿ ಅವರ ರಾಜಗಢ ಜಿಲ್ಲೆಯ 4,000 ಕೋಟಿ ರೂ. ವೆಚ್ಚದ ಮೋಹನಪುರ ನೀರಾವರಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
”ದೇಶದ ಜನರು ಬಿಜೆಪಿಯನ್ನು ಮತ್ತು ಅದರ ಸರಕಾರವನ್ನು ನಂಬುತ್ತಾರೆ; ಯಾರು ಸುಳ್ಳು ಹರಡುತ್ತಾರೋ, ಗೊಂದಲ ಸೃಷ್ಟಿಸುತ್ತಾರೋ, ನಿರಾಶಾವಾದ ಹುಟ್ಟುಹಾಕುತ್ತಾರೋ ಅವರು ವಾಸ್ತವತೆಯಿಂದ ದೂರವಾಗಿದ್ದಾರೆ” ಎಂದು ಪ್ರಧಾನಿ ಮೋದಿ ಹೇಳಿದರು.
ಪ್ರಧಾನಿ ಮೋದಿ ಅವರು ಈ ಸಂದರ್ಭದಲ್ಲಿ ಜನಸಂಘದ ಸ್ಥಾಪಕ ಶ್ಯಾಮ ಪ್ರಸಾದ ಮುಖರ್ಜಿ ಅವರ ಗುಣಗಾನ ಮಾಡಿದರು; ಶಿಕ್ಷಣ, ಆರೋಗ್ಯ, ಹಣಕಾಸು ಮತ್ತು ಭದ್ರತೆಯನ್ನು ಬಲಪಡಿಸುವುದು ಅವರ ದೃಷ್ಟಾರತೆಯಾಗಿತ್ತು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್