ಆಯುಷ್ಮಾನ್ ಭಾರತ ಯೋಜನೆಗೆ ವೈದ್ಯರ ಬೆಂಬಲ
Team Udayavani, Jun 24, 2018, 6:00 AM IST
ಹೊಸದಿಲ್ಲಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಆಯುಷ್ಮಾನ್ ಭಾರತವನ್ನು ವಿರೋಧಿಸಿದ್ದ ಭಾರತೀಯ ವೈದ್ಯಕೀಯ ಸಂಘಟನೆ (ಐಎಂಎ) ಇದೀಗ ತನ್ನ ಸಂಪೂರ್ಣ ಬೆಂಬಲವನ್ನು ಘೋಷಿಸಿದೆ. ಐಎಂಎ ಪ್ರತಿನಿಧಿಗಳು ಆಯುಷ್ಮಾನ್ ಭಾರತ್ ಸಿಇಒ ಇಂದು ಭೂಷನ್ ಹಾಗೂ ಡೆಪ್ಯುಟಿ ಸಿಇಒ ದಿನೇಶ್ ಅರೋರಾ ಹಾಗೂ ಇತರ ಅಧಿಕಾರಿಗಳನ್ನು ಶುಕ್ರವಾರ ಭೇಟಿ ಮಾಡಿದ್ದರು. ಈ ವೇಳೆ ಇದನ್ನು ಉತ್ತಮವಾಗಿ ಅನುಷ್ಠಾನಗೊಳಿಸಲು ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಈ ಹಿಂದೆ ಯೋಜನೆಯ ಕಲ್ಪನೆಯಲ್ಲೇ ದೋಷವಿದೆ ಎಂದು ವೈದ್ಯರ ಸಂಘ ಆರೋಪಿಸಿತ್ತು.
ದೂರು ಪರಿಹಾರ ವಿಭಾಗವನ್ನು ನಿರ್ವಹಿಸುವಂತೆ ವೈದ್ಯರ ಸಂಘಟನೆಯನ್ನು ಕೇಳಿಕೊಳ್ಳಲಾಗಿದೆ. ಬಹುತೇಕ ಪ್ರದೇಶದಲ್ಲಿ ಐಎಂಎ ತನ್ನ ಶಾಖೆಗಳನ್ನು ಹೊಂದಿದೆ. ಐಎಂಎ ಪಾತ್ರ ಈ ಯೋಜನೆಯಲ್ಲಿ ಅತ್ಯಂತ ಮಹತ್ವದ್ದಾಗಿದೆ. ಯಾಕೆಂದರೆ ಯೋಜನೆಯ ಯಶಸ್ಸಿಗೆ ಖಾಸಗಿ ವಲಯವೇ ಪ್ರಮುಖವಾಗಿದೆ ಎಂದು ಇಂದು ಭೂಷಣ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ