ಹೊಸೂರು ಏರ್ಪೋರ್ಟ್ ಆರಂಭಿಸಿ
Team Udayavani, Jun 24, 2018, 6:00 AM IST
ಚೆನ್ನೈ: ಹೊಸೂರಿನಿಂದ ಶೀಘ್ರ ವಿಮಾನ ಹಾರಾಟವನ್ನು ಆರಂಭಿಸಲು ಅನುವು ಮಾಡುವುದಕ್ಕಾಗಿ ಬೆಂಗಳೂರು ವಿಮಾನ ನಿಲ್ದಾಣದಿಂದ ನಿರಾಕ್ಷೇಪಣೆ ಪತ್ರವನ್ನು ಒದಗಿಸಬೇಕೆಂದು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ತಮಿಳುನಾಡು ಸರಕಾರ ಪತ್ರ ಬರೆದಿದೆ. ಬೆಂಗಳೂರಿನಿಂದ 35 ಕಿ.ಮೀ ದೂರದಲ್ಲಿರುವ ಹೊಸೂರು ವಿಮಾನ ನಿಲ್ದಾಣದಿಂದ ವಿಮಾನ ಸಂಪರ್ಕಕ್ಕೆ ಉಡಾನ್ ಯೋಜನೆ ಅಡಿಯಲ್ಲಿ ನಿರ್ಧರಿಸ ಲಾಗಿತ್ತು. ಹೊಸೂರಿನಲ್ಲಿ ವಿಮಾನ ಹಾರಾಟ ಆರಂಭಿಸಿದರೆ ಬೆಂಗಳೂರಿನ ದಕ್ಷಿಣ ಭಾಗದ ಜನರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವುದರ ಬದಲಿಗೆ ಹೊಸೂರಿಗೆ ತೆರಳಬಹುದಾದ್ದರಿಂದ, ಬೆಂಗಳೂರು ವಿಮಾನ ನಿಲ್ದಾಣವು ನಿರಾಕ್ಷೇಪಣೆ ಪತ್ರ ನೀಡಲು ವಿಳಂಬ ಮಾಡುತ್ತಿದೆ ಎಂದು ತಮಿಳುನಾಡು ಸರಕಾರ ಆರೋಪಿಸುತ್ತಿದೆ. ಅಂತಾರಾಷ್ಟ್ರೀಯ ಏರ್ಪೋರ್ಟ್ನಿಂದ 150 ಕಿ.ಮೀ ವ್ಯಾಪ್ತಿಯೊಳಗೆ ಮತ್ತೂಂದು ವಿಮಾನ ನಿಲ್ದಾಣದಿಂದ ವಿಮಾನ ಹಾರಾಟಕ್ಕೆ ನಿರಾಕ್ಷೇಪಣೆ ಪತ್ರ ಅಗತ್ಯವಿರುತ್ತದೆ.
ಹೊಸೂರು ಏರ್ಪೋರ್ಟ್ನಿಂದ ವಿಮಾನ ಸಂಚಾರ ಆರಂಭಿಸಿದರೆ ಕೃಷ್ಣಗಿರಿ ಹಾಗೂ ಸುತ್ತಲಿನ ಜಿಲ್ಲೆಗಳ ಔದ್ಯಮಿಕ ಕೇಂದ್ರಕ್ಕೆ ನೆರವಾಗಲಿದೆ. ಅಲ್ಲದೆ ಚೆನ್ನೈ-ಬೆಂಗಳೂರು ಔದ್ಯಮಿಕ ಕಾರಿಡಾರ್ಗೂ ಅನುಕೂಲವಾಗಲಿದೆ.
ರಾಮನಾಥಪುರಂ ಹಾಗೂ ನೈವೇಲಿ ಏರ್ಪೋರ್ಟ್ ನಿಂದಲೂ ವಿಮಾನ ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ತಮಿಳುನಾಡು ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ಕೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ