ಪಶ್ಚಿಮ ಬಂಗಾಲದಲ್ಲಿ ಮುಂಗಾರು ಅಬ್ಬರ; ಸಿಡಿಲಿಗೆ ಐವರು ಬಲಿ
Team Udayavani, Jun 25, 2018, 4:33 PM IST
ಕೋಲ್ಕತ : ಪಶ್ಚಿಮ ಬಂಗಾಲಕ್ಕೆ ಇಂದು ಮುಂಗಾರು ಮಳೆ ಭಾರೀ ಬಿರುಸಿನಿಂದ ಅಪ್ಪಳಿಸಿದೆ. ರಾಜ್ಯದಲ್ಲಿಂದು ಸಿಡಿಲಿನಾಘಾತಕ್ಕೆ ಐವರು ಬಲಿಯಾಗಿದ್ದಾರೆ. ಜಡಿಮಳೆಯಿಂದ ಉಂಟಾದ ಪ್ರವಾಹದಲ್ಲಿ ಓರ್ವರು ಮುಳುಗಿ ಮೃತಪಟ್ಟಿದ್ದಾರೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ತೀವ್ರವಾಗಿ ಬಾಧಿತವಾಗಿದೆ. ತಗ್ಗು ಪ್ರದೇಶಗಳೆಲ್ಲ ನೀರಲ್ಲಿ ಮುಳುಗಿವೆ. ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ ಎಂದು ನೈಸರ್ಗಿಕ ಪ್ರಕೋಪ ನಿರ್ವಹಣ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
ಪುರೂಲಿಯಾ ಜಿಲ್ಲೆಯ ಭೋಮ್ರಗೋರ ಎಂಬ ಗ್ರಾಮದಲ್ಲಿ 7 ವರ್ಷ ಪ್ರಾಯದ ಬಾಲಕ ಮತ್ತು ಉತ್ತರ 24 ಪರಗಣ ಜಿಲ್ಲೆಯ ಬಸೀರ್ಹಾತ್ ಎರಡನೇ ಬ್ಲಾಕ್ ಮತ್ತು ಕೌತೇಪಾರಾದಲ್ಲಿ ಇಬ್ಬರು ಸಿಡಿಲಿನಾಘಾತಕ್ಕೆ ಮೃತಪಟ್ಟಿದ್ದಾರೆ.
ಚಾರ್ಪಾರಾ ಗ್ರಾಮದ ಬಸಂತಿ ಬ್ಲಾಕ್ನಲ್ಲಿ ಓರ್ವ ಮಹಿಳೆ ಮತ್ತು 24 ದಕ್ಷಿಣ ಪರಗಣ ಜಿಲ್ಲೆಯ ಉತ್ತರ ಚಂದನ್ಪಿರಿ ಗ್ರಾಮದ ನಾಮಖಾನಾ ಬ್ಲಾಕ್ನಲ್ಲಿ ಒಬ್ಬರು ಸಿಡಿಲಿನಾಘಾತಕ್ಕೆ ಬಲಿಯಾಗಿದ್ದಾರೆ.
18 ವರ್ಷ ಪ್ರಾಯದ ತರುಣನೋರ್ವ ಕೂಚ್ ಬಿಹಾರ್ ಜಿಲ್ಲೆಯ ಮೇಖ್ಲೀಗಂಜ್ನ ಸುತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ