24ಗಂಟೆಗಳ “ಮಹಾ ಮಳೆ”ಗೆ ಮುಂಬೈ ತತ್ತರ, 4 ಸಾವು, ಕಾರುಗಳು ಮಣ್ಣುಪಾಲು
Team Udayavani, Jun 25, 2018, 6:40 PM IST
ಮುಂಬೈ: ಕಳೆದ 24ಗಂಟೆಗಳಲ್ಲಿ ಸುರಿದ ಧಾರಾಕಾರ ಮಳೆಗೆ ವಾಣಿಜ್ಯ ನಗರಿ ಮುಂಬೈ ಮತ್ತೆ ತತ್ತರಿಸಿ ಹೋಗಿದ್ದು, ಸಂಚಾರ ದಟ್ಟಣೆಯಿಂದಾಗಿ ರೈಲು ಸಂಚಾರ ಕೂಡಾ ನಿಧಾನಗತಿಯಲ್ಲಿ ಸಾಗಿತ್ತು. ಇದರಿಂದಾಗಿ ಸೋಮವಾರ ಸಾವಿರಾರು ವಿದ್ಯಾರ್ಥಿಗಳು, ಕಚೇರಿಗೆ ಹೊರಟಿದ್ದ ಉದ್ಯೋಗಿಗಳು ತೊಂದರೆ ಅನುಭವಿಸುವಂತಾಯಿತು. ಅಲ್ಲದೇ ಮಳೆಗೆ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಜನನಿಬಿಡ ಪ್ರದೇಶವಾದ ಮುಂಬೈನ ವಾಡ್ಲಾ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಬೃಹತ್ ಕಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ ಆರು ಕಾರುಗಳು ನಜ್ಜುಗುಜ್ಜಾಗಿ ಹೂತು ಹೋಗಿದ್ದರೆ, ಕೆಲವು ಕಾರುಗಳು ಜಖಂಗೊಂಡಿವೆ. ಅಲ್ಲದೇ ಫ್ಲ್ಯಾಟ್ ನಲ್ಲಿದ್ದ ಸುಮಾರು 200ಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾನಗರ ಪಾಲಿಕೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಲಾಯ್ಡ್ಸ್ ಎಸ್ಟೇಟ್ ನಲ್ಲಿ ಜನರನ್ನು ಸ್ಥಳಾಂತರಿಸಿದ್ದಾರೆ. ಇಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿ ವಿವರಿಸಿದೆ.
ಮಲಾಡ್ ಪ್ರದೇಶದಲ್ಲಿನ ತೆರೆದ ಗುಂಡಿಗೆ 15 ವರ್ಷದ ಬಾಲಕನೊಬ್ಬ ಬಿದ್ದು ಸಾವನ್ನಪ್ಪಿದ್ದರೆ, ಥಾಣೆಯಲ್ಲಿ ಗೋಡೆ ಕುಸಿದ ಪರಿಣಾಮ 13 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ. ನಿನ್ನೆ ಧೋಬಿ ತಾಲಾವೊ ಪ್ರದೇಶದ ಆಜಾದ್ ಮೈದಾನ ಪ್ರದೇಶದಲ್ಲಿನ ಮರ ಉರುಳಿ ಬಿದ್ದು ಇಬ್ಬರು ಸಾವನ್ನಪ್ಪಿದ್ದರು.
ಅಂಧೇರಿ, ಖಾರ್, ಮಲಾಡ್ ಸೇರಿದಂತೆ ಹಲವು ತಗ್ಗುಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ