ನೋಟು ನುಂಗಿದ್ದು ಖಾತ್ರಿಯಾಯ್ತು
Team Udayavani, Jul 1, 2018, 6:00 AM IST
ಅಹಮದಾಬಾದ್: ಭ್ರಷ್ಟಾಚಾರ ನಡೆದಿದೆಯೋ ಇಲ್ಲವೋ ಎಂದು ತಿಳಿದುಕೊಳ್ಳಲು ನಡೆಸಲಾದ ಡಿಎನ್ಎ ಪರೀಕ್ಷೆಯಲ್ಲಿ ಧನಾತ್ಮಕ ಫಲಿತಾಂಶ ಲಭ್ಯವಾಗಿದೆ. ಡಿಎನ್ಎಯಲ್ಲಿ ಇಂಥದ್ದೊಂದು ಪ್ರಕರಣ ಸಾಬೀತಾಗಿದ್ದು ದೇಶದಲ್ಲಿ ಇದೇ ಮೊದಲು!
ಈ ಘಟನೆ ನಡೆದಿರುವುದು ಗುಜರಾತ್ನಲ್ಲಿ. ಪಶು ವೈದ್ಯಾಧಿಕಾರಿ ಮತ್ತು ಕೃಷಿ ವಿಜ್ಞಾನಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ಘಟಕದಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ನಡೆಸಲಾದ ಪರೀಕ್ಷೆ ವರದಿ ಧನಾತ್ಮಕವಾಗಿ ಬಂದಿರುವುದಾಗಿ ವಿಧಿವಿಜ್ಞಾನ ಪ್ರಯೋಗಾಲಯ ಖಾತರಿಪಡಿ ಸಿದೆ. ಇವುಗಳೆರಡೂ ಪ್ರತ್ಯೇಕ ಪ್ರಕರಣಗಳಾಗಿ ದ್ದು, ಒಬ್ಬ ಅಧಿಕಾರಿ 2000 ರೂ., ಮತ್ತೂಬ್ಬರು 12 ಸಾವಿರ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದರು. ಎಸಿಬಿ ದಾಳಿ ನಡೆಸಿದೊಡನೆ, ನೋಟು ನುಂಗಲು ಯತ್ನಿಸಿದ್ದರು. ಆದರೆ, ಅವರ ಯತ್ನವನ್ನು ಅಧಿಕಾರಿಗಳು ವಿಫಲಗೊಳಿ ಸಿದ್ದರು. ಆರೋಪ ಸಾಬೀತುಪಡಿಸಲೆಂದು ಆ ನೋಟುಗಳಲ್ಲಿದ್ದ ಅಧಿಕಾರಿಗಳ ಲಾಲಾರಸದ ಸ್ಯಾಂಪಲ್ಗಳನ್ನು ಲ್ಯಾಬ್ಗ ಕಳುಹಿಸಲಾಗಿತ್ತು. ಈಗ ವರದಿ ಬಂದಿದ್ದು, ಲಂಚಕ್ಕೆ ಸಾಕ್ಷಿ ಸಿಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್