200 ಕಂಪನಿಗಳ ಮೇಲೆ ಹದ್ದಿನ ಕಣ್ಣು


Team Udayavani, Jul 1, 2018, 6:00 AM IST

20.jpg

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಗೊಂಡು ಒಂದು ವರ್ಷ ಪೂರೈಸುತ್ತಿದ್ದು, ಆರಂಭದಲ್ಲಿನ ತೊಡಕುಗಳು ನಿವಾರಣೆಯಾಗಿ ಸುಸ್ಥಿರವಾಗುತ್ತಿದ್ದಂತೆಯೇ ಇದೀಗ ಜಿಎಸ್‌ಟಿ ಪಾವತಿ ಉಲ್ಲಂಘನೆಯನ್ನು ಕಂಡುಹಿಡಿಯುವುದರ ಮೇಲೆ ಕೇಂದ್ರೀಯ ತೆರಿಗೆ ಮಂಡಳಿ ತನ್ನ ಗಮನ ಕೇಂದ್ರೀಕರಿಸಿದೆ. ಇದರ ಮೊದಲ ಹಂತವಾಗಿ 200 ಕಂಪನಿಗಳಿಗೆ ನೋಟಿಸ್‌ ನೀಡಲಾಗಿದೆ.

ಈ ಕಂಪನಿಗಳು ನಗದು ಮೂಲಕ ಗ್ರಾಹಕರಿಗೆ ಸಾಮಗ್ರಿಗಳನ್ನು ವಿತರಿಸುತ್ತಿದ್ದು, ಉತ್ಪನ್ನದ ಮೌಲ್ಯ ಮತ್ತು ಉತ್ಪನ್ನದ ಖರೀದಿ ಹಾಗೂ ಮಾರಾಟ ವಿವರಗಳು ಹೋಲಿಕೆಯಾಗುತ್ತಿಲ್ಲ. ಹೀಗಾಗಿ ಈ ಕಂಪನಿಗಳಿಗೆ ನೋಟಿಸ್‌ ನೀಡಲಾಗಿದೆ.

ಸಾಮಾನ್ಯವಾಗಿ ತೆರಿಗೆ ತಪ್ಪಿಸುವುದಕ್ಕಾಗಿ ಹೆಚ್ಚಿನ ಬೆಲೆಯಲ್ಲಿ ಉತ್ಪನ್ನಗಳನ್ನು ಖರೀದಿಸಿ, ಕಡಿಮೆ ಬೆಲೆಗೆ ಮಾರಾಟ ಮಾಡಿರುವುದಾಗಿ ಉಲ್ಲೇಖೀಸಲಾಗುತ್ತದೆ. ಕೆಲವು ಕಂಪನಿಗಳು ಉತ್ಪನ್ನದ ಮೌಲ್ಯದ ಶೇ.5 ರಷ್ಟು ಬೆಲೆಯ ಮೇಲೆ ಮಾತ್ರವೇ ತೆರಿಗೆ ಪಾವತಿ ಮಾಡಿವೆ. ಸಾಮಾನ್ಯವಾಗಿ ದಾಖಲೆಯಲ್ಲಿ ಕಡಿಮೆ ಬೆಲೆಗೆ ಮಾರಲಾಗಿದೆ ಎಂದು ಉಲ್ಲೇಖೀಸಿ, ಉಳಿದ ಮೊತ್ತವನ್ನು ನಗದು ರೂಪದಲ್ಲಿ ವ್ಯಾಪಾರಿಗಳು ಪಡೆದಿರುತ್ತಾರೆ.

ಆದರೆ ಎಲ್ಲ ಕಂಪನಿಗಳೂ ಅಕ್ರಮದಲ್ಲಿ ಭಾಗಿಯಾಗಿವೆ ಎಂದು ಹೇಳಲಾಗದು. ಕೆಲವು ವ್ಯಾಪಾರಿಗಳು ಪೂರೈಕೆ ಮಾಡಿದ ಸಾಮಗ್ರಿಗಳನ್ನು ಜಿಎಸ್‌ಟಿ ಅಡಿಯಲ್ಲಿ ದಾಖಲಿಸಿರುವುದಿಲ್ಲ. ಇದರಿಂದಾಗಿಯೂ ಸಮಸ್ಯೆ ಉದ್ಭವವಾಗಿರಬಹುದು ಎಂದು ಹೇಳಲಾಗಿದೆ. ಈ ಕಂಪನಿಗಳು ಪ್ರತಿಕ್ರಿಯೆ ನೀಡಿದ ನಂತರದಲ್ಲಿ ಸಿಬಿಡಿಟಿ ಮುಂದಿನ ಕ್ರಮದ ಬಗ್ಗೆ ಚಿಂತನೆ ನಡೆಸುವ ಸಾಧ್ಯತೆಯಿವೆ. ಇನ್ನೊಂದೆಡೆ ನೋಟಿಸ್‌ ಪಡೆದ ಈ ಕಂಪನಿಗಳು ತೆರಿಗೆ ಇಲಾಖೆ ವಿರುದ್ಧ ಮೊಕದ್ದಮೆ ಹೂಡುವ ಸಾಧ್ಯತೆಯೂ ಇದೆ.

ಜುಲೈ 1 ಜಿಎಸ್‌ಟಿ ದಿನ
ಸರಕು ಮತ್ತು ಸೇವಾ ತೆರಿಗೆ ಜಾರಿಗೊಳಿಸಿ ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಜುಲೈ 1 ಅನ್ನು ಜಿಎಸ್‌ಟಿ ದಿನ ಎಂದು ಪರಿಗಣಿಸಲು ನಿರ್ಧರಿಸಲಾಗಿದೆ. ಈ ಸಂಭ್ರಮಾಚರಣೆಗೆ ಬೃಹತ್‌ ಕಾರ್ಯಕ್ರಮವನ್ನು ನವದೆಹಲಿ ಅಂಬೇಡ್ಕರ್‌ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಹಂಗಾಮಿ ಹಣಕಾಸು ಸಚಿವ ಪಿಯೂಷ್‌ ಗೋಯೆಲ್‌ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಹಣಕಾಸು ಖಾತೆ ಸಹಾಯಕ ಸಚಿವ ಶಿವಪ್ರತಾಪ್‌ ಶುಕ್ಲಾ ಗೌರವ ಅತಿಥಿಯಾಗಿರಲಿದ್ದಾರೆ. ಅಲ್ಲದೆ ಉದ್ಯಮಿಗಳು, ವ್ಯಾಪಾರಿಗಳು ಮತ್ತು ತೆರಿಗೆ ಅಧಿಕಾರಿಗಳು ಇರಲಿದ್ದಾರೆ. ವಿತ್ತ ಸಚಿವ ಅರುಣ್‌ ಜೇಟ್ಲಿ ವೀಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಲಿದ್ದಾರೆ ಎಂದು ಕೇಂದ್ರ ವಿತ್ತ ಸಚಿವಾಲಯ ಮಾಹಿತಿ ನೀಡಿದೆ.
 

ಟಾಪ್ ನ್ಯೂಸ್

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.