10 ಸೂತ್ರ…11 ಜನರ ಸಾಮೂಹಿಕ ಸಾವಿನ ಹಿಂದಿನ ರಹಸ್ಯ ಬಯಲು?


Team Udayavani, Jul 2, 2018, 3:21 PM IST

dead.jpg

ನವದೆಹಲಿ: ಆಘಾತಕಾರಿ ಬೆಳವಣಿಗೆಯಲ್ಲಿ ನವದೆಹಲಿಯ ಒಂದೇ ಕುಟುಂಬದ 11 ಮಂದಿಯ ಶವಗಳು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಸಾಮೂಹಿಕ ಸಾವಿನ ಹಿಂದಿನ ರಹಸ್ಯ ಬಯಲಾಗಿದೆ ಎಂದು ನ್ಯೂಸ್ 18 ವರದಿ ಮಾಡಿದೆ.

ದೆಹಲಿಯ ಬಾಟಿಯ ಕುಟುಂಬದ ಸಾಮೂಹಿಕ ಸಾವಿನ ರಹಸ್ಯ ಬಯಲಾಗಿರುವುದು ಡೈರಿಯಿಂದಾಗಿ!. ಅತೀಯಾದ ದೈವಭಕ್ತಿಯಿಂದ 11 ಮಂದಿಯೂ ಮೋಕ್ಷ ಪಡೆಯಲು ಸಾವಿಗೆ ಶರಣಾಗಿರುವುದಾಗಿ ವರದಿ ತಿಳಿಸಿದೆ.

ಮೋಕ್ಷಕ್ಕಾಗಿ ಸಾಯಲು 10 ಸೂತ್ರಗಳನ್ನು ಡೈರಿಯಲ್ಲಿ ಬರೆಯಲಾಗಿದೆ. ಮಾನವನ ದೇಹ, ಬದುಕು ತಾತ್ಕಾಲಿಕ ಎಂದು ಕೂಡಾ ಉಲ್ಲೇಖಿಸಲಾಗಿದೆ.

ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಜಿನೆಗಾದಿ ಬಾಬಾ ಅವರ ಪ್ರೇರಣೆಯಂತೆ ಸಾಮೂಹಿಕ ಆತ್ಮಹತ್ಯೆಗೆ ಶರಣಾಗಿದ್ದಾರಾ? ಅಥವಾ ಇದೊಂದು ವ್ಯವಸ್ಥಿತ ಕೊಲೆಯೇ ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.

ಮೋಕ್ಷ ಪಡೆಯಲು ಡೈರಿಯಲ್ಲಿದ್ದ 10 ಸೂತ್ರಗಳು ಯಾವುದು ಗೊತ್ತಾ?

1)ಮೋಕ್ಷದ ಸಾವು ಪಡೆಯಲು ಭಾನುವಾರ ಇಲ್ಲವೇ ಗುರುವಾರ ಆಯ್ಕೆ ಮಾಡಿಕೊಳ್ಳಬೇಕು ಸೂಕ್ತ

2)ಸಾಯುವ ಮುನ್ನ ಬಾಯಿ, ಕಣ್ಣಿಗೆ ಸೀರೆ/ದುಪ್ಪಟ್ಟದಿಂದ ಗಟ್ಟಿಯಾಗಿ ಕಟ್ಟಬೇಕು.

3)ಏಳು ದಿನಗಳೇ ಮೊದಲೇ ಈ ವೃತವನ್ನು ಕಟ್ಟುನಿಟ್ಟಾಗಿ ಆಚರಿಸಬೇಕು

4)ಹತ್ಯೆ ಮಾಡುವಾಗ ವಯಸ್ಸಾದವರು ಇದ್ದರೆ ಅವರನ್ನು ಮಲಗಿಸಿ ಜೀವ ತೆಗೆಯಬೇಕು

5)ಮೋಕ್ಷಕ್ಕಾಗಿ ಹತ್ಯೆ ಮಾಡುವಾಗ ಬೆಳಕು ಹೆಚ್ಚು ಇರಬಾರದು.

6)ಮೋಕ್ಷದ ಹತ್ಯೆಗೆ ಬದ್ಧರಾಗಿರಬೇಕು

7)ಬಾಯಿಗೆ ಬಿಗಿಯಾಗಿ ಬಟ್ಟೆ ಕಟ್ಟಬೇಕು

8)ಎಲ್ಲರ ತಲೆಯಲ್ಲೂ ಇದೇ ಯೋಚನೆ ಇರಬೇಕು.

9)ಕೈಯನ್ನು ಕಟ್ಟಿದ ಮೇಲೆ ಬಟ್ಟೆ ಉಳಿದರೆ ಕಣ್ಣನ್ನೂ ಕಟ್ಟಬೇಕು.

10)ಮಧ್ಯರಾತ್ರಿ 12ರಿಂದ 1ಗಂಟೆಯೊಳಗೆ ಆಗಬೇಕು, ಹೋಮ, ಹವನ ಮಾಡಬೇಕು.

ಘಟನೆಯ ವಿವರ:

ಆಘಾತಕಾರಿ ಬೆಳವಣಿಗೆ ಯಲ್ಲಿ ನವದೆಹಲಿಯ ಒಂದೇ ಕುಟುಂಬದ 11 ಮಂದಿಯ ಶವಗಳು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ಎಲ್ಲರ ಕೈಗಳನ್ನೂ ಹಿಂದಕ್ಕೆ ಕಟ್ಟಿರುವುದಲ್ಲದೇ, ಕಣ್ಣಿಗೂ ಬಟ್ಟೆ  ಕಟ್ಟಲಾಗಿದೆ. ಮೊದಲಿಗೆ ಆತ್ಮಹತ್ಯೆ ಎಂದು ಹೇಳಿದ್ದ ದೆಹಲಿ ಪೊಲೀಸರು, ಇದೀಗ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮೃತರಲ್ಲಿ ನಾಲ್ವರು ಪುರುಷರು, ಮೂವರು ಮಹಿಳೆಯರು, ನಾಲ್ವರು ಬಾಲಕಿಯರು ಸೇರಿದ್ದಾರೆ. ಒಂಬತ್ತು ಮಂದಿ ಕಿಟಕಿ ಸರಳಿಗೆ ನೇಣು ಹಾಕಿ ಕೊಂಡಿರುವ ಸ್ಥಿತಿಯಲ್ಲಿ, ಒಬ್ಬ ಮಹಿಳೆ ಬಾಗಿಲಿನ ಚಿಲಕಕ್ಕೆ ನೇಣು ಬಿಗಿದು ಕೊಂಡಂತೆ ಹಾಗೂ ಒಬ್ಬ ಮಹಿಳೆಯ ಶವ ನೆಲದ ಮೇಲೆ ಪತ್ತೆಯಾಗಿತ್ತು.

ಇದು ಉತ್ತರ ದೆಹಲಿಯ ಸಂತ್‌ ನಗರದಲ್ಲಿನ ರಾಜಸ್ಥಾನಿ ಕುಟುಂಬವಾಗಿದ್ದು, ಕಿರಾಣಿ ಮತ್ತು ಪ್ಲೆವುಡ್‌ ಅಂಗಡಿ ನಡೆಸುತ್ತಿದೆ. ಜತೆಗೆ ಮನೆಯಲ್ಲಿ ಸದ್ಯದಲ್ಲೇ ವಿವಾಹ ಕಾರ್ಯಕ್ರಮವೊಂದನ್ನು ಆಯೋಜಿಸಲು ತಯಾರಿ ನಡೆದಿತ್ತು ಎಂದೂ ಮೂಲಗಳು ತಿಳಿಸಿದ್ದವು.

ಭಾನುವಾರ ಬೆಳಗ್ಗೆ 7.30ರ ವೇಳೆಗೆ ಈ ಘಟನೆ ಬೆಳಕಿಗೆ ಬಂದಿದೆ. ಬೆಳಗ್ಗೆ ಯಾರೂ ಮನೆಯಿಂದ ಹೊರಗೆ ಬರದ ಕಾರಣ ನೆರೆಮನೆಯವರು ಕಿಟಕಿ ಮೂಲಕ ನೋಡಿದಾಗ ವಿಚಾರ ಗೊತ್ತಾಗಿದೆ. ಸದ್ಯಕ್ಕೆ ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬ ಬಗ್ಗೆ ನಿರ್ಧಾರಕ್ಕೆ ಬರಲಾಗಿಲ್ಲ ಎಂದು ಪೊಲೀಸರು ಭಾನುವಾರ ತಿಳಿಸಿದ್ದರು.

ಟಾಪ್ ನ್ಯೂಸ್

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.