ಪ್ರಣವ್ ಬಳಿಕ ಆರೆಸ್ಸೆಸ್ ಕಾರ್ಯಕ್ರಮದಲ್ಲಿ ರತನ್ ಟಾಟಾ ಭಾಗಿ?
Team Udayavani, Jul 11, 2018, 11:31 AM IST
ಮುಂಬಯಿ: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಬಳಿಕ ಇದೀಗ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.
ಆಗಸ್ಟ್ 24ರಂದು ಮುಂಬಯಿನಲ್ಲಿ ನಾನಾ ಪಾಲ್ಕರ್ ಸ್ಮತಿ ಸಮಿತಿ ಎಂಬ ಎನ್ಜಿಒ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರತನ್ ಪಾಲ್ಗೊಳ್ಳಲಿದ್ದಾರೆ. ಟಾಟಾ ಸ್ಮಾರಕ ಆಸ್ಪತ್ರೆಯ ಪಕ್ಕದಲ್ಲೇ ಈ ಸಮಿತಿಯು ಕಾರ್ಯನಿರ್ವಹಿಸುತ್ತಿದ್ದು, ಕ್ಯಾನ್ಸರ್ ರೋಗಿಗಳ ಸೇವೆ ಮಾಡುತ್ತಿದೆ. ಟಾಟಾ ಅವರು ಅನೇಕ ಬಾರಿ ಇಲ್ಲಿಗೆ ಭೇಟಿ ನೀಡಿದ್ದು, ಅವರಿಗೆ ಎನ್ಜಿಒ ನಡೆಸುತ್ತಿರುವ ಕಾರ್ಯಗಳ ಬಗ್ಗೆಯೂ ಮಾಹಿತಿಯಿದೆ ಎಂದು ಸಂಘದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಹಿಂದೆ 2016ರ ಡಿ. 29ರಂದು ತಮ್ಮ 79ನೇ ಜನ್ಮದಿನದಂದು ರತನ್ ಅವರು ನಾಗ್ಪುರಕ್ಕೆ ದಿಢೀರ್ ಭೇಟಿ ನೀಡಿದ್ದರು. ಈಗ ಈ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸಲಾಗಿದ್ದು, ಅವರು ಇದಕ್ಕೆ ಒಪ್ಪಿಯೂ ಇಲ್ಲ, ತಿರಸ್ಕರಿಸಿಯೂ ಇಲ್ಲ. ಹಾಗಾಗಿ ಪಾಲ್ಗೊಳ್ಳುವ ವಿಶ್ವಾಸವಿದೆ ಎಂದೂ ಅವರು ಹೇಳಿದ್ದಾರೆ.