ಮಳೆಗೆ ಸೋತ ಮುಂಬಯಿ, ರಸ್ತೆಗಳಲ್ಲಿ ಹರಿದ ಪ್ರವಾಹದ ನೀರು


Team Udayavani, Jul 11, 2018, 12:03 PM IST

male.png

ಮುಂಬಯಿ:  ವಾಣಿಜ್ಯ ನಗರ ಮುಂಬಯಿನಲ್ಲಿ  ಸತತ ನಾಲ್ಕನೇ ದಿನವಾದ ಮಂಗಳವಾರ ಕೂಡ ಬಿರುಸಿನ ಮಳೆ ಮುಂದುವರಿದಿದೆ. ಹೀಗಾಗಿ ಉಪ ನಗರ ರೈಲು ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದರಿಂದ ಜನಜೀವನಕ್ಕೆ ತೊಂದರೆಯಾಗಿದೆ. ಹೆಚ್ಚಿನ ಕಡೆಗಳಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರವಾಹದ ನೀರು ನುಗ್ಗಿದ್ದರಿಂದ ಸ್ಥಳೀಯ ಮತ್ತು ದೂರ ಪ್ರಯಾಣದ ರೈಲುಗಳ ಪ್ರಯಾಣ ರದ್ದುಗೊಳಿಸಲಾಗಿದೆ ಇಲ್ಲವೇ ಮಾರ್ಗ ಬದಲಾವಣೆ ಮಾಡಲಾಗಿದೆ.

ಇನ್ನು ರಸ್ತೆಗಳಲ್ಲಿ ಸಂಚರಿಸಲು ವಾಹನ ಚಾಲ ಕರು, ಬಸ್‌ ಪ್ರಯಾಣಿಕರು ಗಂಟೆಗಟ್ಟಲೆ ಕಾಯಬೇಕಾಯಿತು.

ನಾಲ್ವರ ಸಾವು: ಮಹಾರಾಷ್ಟ್ರದ ಯವತ್‌ಮಾಳ್‌ನಲ್ಲಿ ಮಳೆ ಸಂಬಂಧಿ ದುರಂತದಲ್ಲಿ ಭಾನುವಾರದಿಂದ ಈಚೆಗೆ ನಾಲ್ವರು ಅಸುನೀಗಿದ್ದಾರೆ. ಜಿಲ್ಲೆಯಲ್ಲಿನ ಸಣ್ಣ, ದೊಡ್ಡ ನದಿಗಳೆಲ್ಲ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. 

1,500 ಮಂದಿ ರಕ್ಷಣೆ: ಮುಂಬಯಿನ ನಾಲಾ ಸೊಪಾರಾ ರೈಲು ನಿಲ್ದಾಣದಲ್ಲಿ ಪ್ರವಾಹದಲ್ಲಿ ನಡುವೆ ಇದ್ದ  ವಡೋದರಾ ಎಕ್ಸ್‌ ಪ್ರಸ್‌ನಿಂದ 1,500 ಮಂದಿಯನ್ನು ಎನ್‌ಡಿಆರ್‌ಎಫ್ ಸಿಬಂದಿ ರಕ್ಷಿಸಿದ್ದಾರೆ. ಪಾಲಾ^ರ್‌ನಲ್ಲಿ ಉಪ್ಪು ತಯಾರಿಕಾ ಕೇಂದ್ರಗಳಲ್ಲಿ ಸಿಕ್ಕಿಹಾಕಿಕೊಂಡಿದ್ದ 81 ಮಂದಿಯನ್ನೂ ರಕ್ಷಿಸಲಾಗಿದೆ. ಥಾಣೆ ಮತ್ತು ಪಾಲಾ^ರ್‌ನಲ್ಲೂ ಧಾರಾಕಾರ ಮಳೆಯಾಗಿದೆ. ಉತ್ತರ ಮುಂಬಯಿ ಮತ್ತು ನಗರದ ಭಾಗಕ್ಕೆ ನೀರು ಪೂರೈಕೆ ಮಾಡುವ ತುಳಸಿ ಕೆರೆಯಲ್ಲಿ ನೀರು ತುಂಬಿದೆ. ಮಳೆ ಕಾರಣದಿಂದ ಡಬ್ಟಾವಾಲಾಗಳು ತಮ್ಮ ಸೇವೆ ರದ್ದುಗೊಳಿಸಿದ್ದಾರೆ. ಗುರುವಾರದವರೆಗೆ ಮುಂಬಯಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. 

ದಾಖಲೆ ಮಳೆ: ಕೊಲಾಬಾದಲ್ಲಿರುವ ಮಳೆ ಮಾಪನ ಕೇಂದ್ರದ ಪ್ರಕಾರ ಸೋಮವಾರ ಬೆಳಗ್ಗೆ 8.30ರಿಂದ ಮಂಗಳವಾರ ಬೆಳಗ್ಗೆ 8.30ರ ಅವಧಿಯಲ್ಲಿ 165.9 ಮಿ.ಮೀ. ಮಳೆಯಾಗಿದೆ. ಸಾಂತಾಕ್ರೂಜ್‌ನಲ್ಲಿರುವ ಕೇಂದ್ರ ಇದೇ ಅವಧಿಯಲ್ಲಿ 184.4 ಮಿ.ಮೀ. ಮಳೆಯಾಗಿದೆ ಎಂದು ದಾಖಲಿಸಿದೆ. 

ತಪ್ಪಿದ ದುರಂತ: ಮುಂಬಯಿ ವಿಮಾನ ನಿಲ್ದಾಣದಲ್ಲಿ ಮಳೆಯಿಂದಾಗಿ ವಿಮಾನ ಹಾರಾಟಕ್ಕೂ ತೊಂದರೆ ಉಂಟಾಗಿದೆ. ವಿಜಯವಾಡದಿಂದ ಮುಂಬಯಿಗೆ ಬರುತ್ತಿದ್ದ ವಿಮಾನ ಬದಲಿ ರನ್‌ವೇಯಲ್ಲಿ ಲ್ಯಾಂಡ್‌ ಆಗುವ ವೇಳೆ ಜಾರಿ ಹೋಗಿದೆ. ನಿಗದಿತ ಸ್ಥಳಕ್ಕಿಂತ 10 ಅಡಿ ಮುಂದೆ ಹೋಗಿ ನಿಂತಿದೆ. 

ಖಾಸಗಿಯವರಿಗೆ ಒಪ್ಪಿಸಿ: ಬಾಂಬೆ ಹೈಕೋರ್ಟ್‌
ಪ್ರತಿ ವರ್ಷದ ಮುಂಗಾರಿನಲ್ಲಿ ಹಳಿಗಳು ಮುಳುಗುವುದನ್ನು ತಪ್ಪಿಸಲು ಸಾಧ್ಯವಾಗದೇ ಇದ್ದರೆ ಖಾಸಗಿಯವರಿಗೆ ಒಪ್ಪಿಸಿ ಎಂದು ಬಾಂಬೆ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಹಳಿಗಳು ಮುಳುಗುವುದರ ವಿರುದ್ಧ ಸಲ್ಲಿಸಲಾಗಿದ್ದ ಪಿಐಎಲ್‌ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾ.ಎನ್‌.ಎಚ್‌. ಪಾಟೀಲ್‌ ನೇತೃತ್ವದ ಪೀಠ, ಪ್ರತಿ ವರ್ಷ ನೆರೆ ಉಂಟಾಗುವ ಸ್ಥಳಗಳನ್ನು ಗುರುತು ಮಾಡಿ, ಅಲ್ಲಿ ಎತ್ತರಿಸಿದ ಮಾರ್ಗಗಳ ಮೂಲಕ ಹಳಿಗಳು ಇರು ವಂತೆ ಏಕೆ ಮಾಡಬಾರದು ಎಂದು ಪ್ರಶ್ನೆ ಮಾಡಿದೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.