ಅಷ್ಟಬಂಧನ ಬಾಲಾಲಯ ಮಹಾಸಂಪ್ರೋಕ್ಷಣಮ್: 6 ದಿನ ತಿಮ್ಮಪ್ಪನ ದರ್ಶನವಿಲ್ಲ
Team Udayavani, Jul 15, 2018, 6:00 AM IST
ತಿರುಪತಿ: ಆಗಸ್ಟ್ 11 ರಿಂದ 17ರ ವರೆಗೆ 6 ದಿನಗಳ ಕಾಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಅಧ್ಯಕ್ಷ ಪುಟ್ಟ ಸುಧಾಕರ ಯಾದವ್ ಅವರು ಈ ಮಾಹಿತಿ ನೀಡಿದ್ದು, ದೇಗುಲದಲ್ಲಿನ ಕೆಲವು ಜೀರ್ಣೋದ್ದಾರ ಕೆಲಸಗಳಿರುವುದರಿಂದ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಈ ಆರು ದಿನಗಳ ಅವಧಿಯಲ್ಲಿ ವೇದ ಝೇಂಕಾರಗಳೊಂದಿಗೆ ತಿರುಪತಿ ತಿಮ್ಮಪ್ಪನ ವಿಗ್ರಹಕ್ಕೆ “ಅಷ್ಟಬಂಧನ ಬಾಲಾಲಯ ಮಹಾಸಂ ಪ್ರೋಕ್ಷಣಮ್’ ನಡೆಲಾಗುತ್ತದೆ. ಅಲ್ಲದೆ ಕೆಲವು ರೀತಿಯ ಗಿಡಮೂಲಿಕೆ ಗಳನ್ನು ಬಳಸಿಕೊಂಡು ವಿಗ್ರಹದಲ್ಲಿ ಉಂಟಾಗಿರುವ ಸಣ್ಣಪುಟ್ಟ ಬಿರುಕು ಗಳನ್ನು ಸರಿಮಾಡಲಾಗುತ್ತದೆಂದು ಹೇಳಿದ್ದಾರೆ.
ವಿಶೇಷವೆಂದರೆ 12 ವರ್ಷಗಳ ತರುವಾಯ ಈ ರೀತಿಯ ಪೂಜೆ ನಡೆಸಲಾಗುತ್ತಿದೆ ಎಂದಿದ್ದಾರೆ. ಹೀಗಾಗಿ ಈ ಅವಧಿಯಲ್ಲಿ ಭಕ್ತರಿಗೆ ತಿರುಮಲ ಬೆಟ್ಟಕ್ಕೇ ಪ್ರವೇಶ ನೀಡಲಾಗುವುದಿಲ್ಲ. ದೇಗುಲಕ್ಕೆ ಬರುವ ಎಲ್ಲಾ ಮಾರ್ಗಗಳನ್ನು 10 ಕಿ.ಮೀ. ದೂರದಲ್ಲೇ ಮುಚ್ಚಲಾಗುತ್ತದೆ ಎಂದು ಹೇಳಿದ್ದಾರೆ. ಆ.17ರ ನಂತರ ಮತ್ತೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಸುಧಾಕರ ಯಾದವ್ ತಿಳಿಸಿದ್ದಾರೆ. 13.5 ಕೋಟಿ ದೇಣಿಗೆ: ತಿರುಮಲದ ವೆಂಕಟೇಶ್ವರ ದೇವಾಲಯಕ್ಕೆ ಅಮೆರಿಕ ಮೂಲದ ಇಬ್ಬರು ಅನಿವಾಸಿ ಭಾರತೀಯ ಉದ್ಯಮಿಗಳು 13.5 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಮೂಲತಃ ಆಂಧ್ರ ಪ್ರದೇಶದವರಾದ ಇಕಾ ರವಿ 10 ಕೋಟಿ ರೂ. ಮತ್ತು ಶ್ರೀನಿವಾಸ್ ಗೊಟ್ಟಿಕೊಂಡ 3.5 ಕೋಟಿ ರೂ. ದೇಣಿಗೆ
ನೀಡಿರುವುದಾಗಿ ಟಿಟಿಡಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ