ರೈತರ ಬಗ್ಗೆ ಮೊಸಳೆ ಕಣ್ಣೀರು
Team Udayavani, Jul 16, 2018, 10:11 AM IST
ಮಿರ್ಜಾಪುರ: ರೈತರ ಕಲ್ಯಾಣದ ಬಗ್ಗೆ ಕಾಂಗ್ರೆಸ್ ಹಾಗೂ ಇತರ ಪಕ್ಷಗಳು ಬರೀ ಮೊಸಳೆ ಕಣ್ಣೀರು ಸುರಿಸುತ್ತಲೇ ಬಂದಿವೆ ಎಂದು ಪ್ರಧಾನಿ ಮೋದಿ ಟೀಕಿಸಿದ್ದಾರೆ. ಉತ್ತರ ಪ್ರದೇಶಕ್ಕೆ 2 ದಿನಗಳ ಪ್ರವಾಸ ಕೈಗೊಂಡಿರುವ ಮೋದಿ, ಭಾನುವಾರ ಹಲವು ಮಹತ್ವದ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಮಿರ್ಜಾಪುರದಲ್ಲಿ ಬನ್ಸಾಗರ್ ನಾಲೆ ಯೋಜನೆ ಉದ್ಘಾಟಿಸಿ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದಾರೆ.
ರೈತರ ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ನಡೆಸುತ್ತಿದೆ. ಕನಿಷ್ಠ ಬೆಂಬಲ ಬೆಲೆ ಏರಿಸುವುದಕ್ಕೂ ಅವರ ಬಳಿ ಸಮಯವಿರಲಿಲ್ಲ. ನಾವು ಅದನ್ನು ಮಾಡಿದ್ದೇವೆ. ನಮ್ಮ ಸರಕಾರಗಳ ಪ್ರಯತ್ನದಿಂದಾಗಿ ರೈತರ ಆದಾಯ ದುಪ್ಪಟ್ಟಾಗುವ ದಿನ ದೂರವಿಲ್ಲ. ಕಾಂಗ್ರೆಸ್ ತನ್ನ ಅವಧಿಯಲ್ಲಿ ಹಲವು ನೀರಾವರಿ ಯೋಜನೆಗಳನ್ನು ಯಾಕೆ ಪೂರ್ಣಗೊಳಿಸಿಲ್ಲ ಎಂದು ಜನರು ಪ್ರಶ್ನಿಸಬೇಕು ಎಂದಿದ್ದಾರೆ. ಮಿರ್ಜಾಪುರ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ, 108 ಜನೌಷಧ ಕೇಂದ್ರಗಳು ಹಾಗೂ ಗಂಗಾ ನದಿಗೆ ಮಿರ್ಜಾಪುರ-ವಾರಾಣಸಿ ಸಂಪರ್ಕಿಸುವ ಸೇತುವೆ ಉದ್ಘಾಟನೆಯನ್ನೂ ಅವರು ನೆರವೇರಿಸಿದ್ದಾರೆ.
ಮೋದಿ ಮನಸ್ಥಿತಿ ರೋಗಗ್ರಸ್ಥ: ಕಾಂಗ್ರೆಸ್ ಮುಸ್ಲಿಂ ಪುರುಷರ ಪಕ್ಷ ಮಾತ್ರ ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿರುವುದು ಅದರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ