ಸೋನಿಯಾ ವಿರುದ್ಧ ಪಿತೂರಿ
Team Udayavani, Jul 20, 2018, 6:00 AM IST
ನವದೆಹಲಿ: ಅಗಸ್ಟಾ ವೆಸ್ಟ್ಲ್ಯಾಂಡ್ ಹೆಲಿಕಾಪ್ಟರ್ ಪ್ರಕರಣದಲ್ಲಿ ಕೇಂದ್ರ ಸರ್ಕಾರವು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಸಿಕ್ಕಿ ಹಾಕಿಸಲು ಮುಂದಾಗಿದೆ. ಅದಕ್ಕಾಗಿ ಡೀಲ್ನ ಮಧ್ಯವರ್ತಿಯಾಗಿದ್ದ ಬ್ರಿಟನ್ನ ಕ್ರಿಶ್ಚಿಯನ್ ಮೈಕೆಲ್ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ವಕ್ತಾರ ರಣದೀಪ್ ಸುಜೇìವಾಲಾ, ದೇಶದ ಇತಿಹಾಸ ದಲ್ಲಿಯೇ ಮೊದಲ ಬಾರಿಗೆ ಪ್ರಧಾನ ಮಂತ್ರಿ ಪ್ರತಿಪಕ್ಷಗಳ ನಾಯಕರ ವಿರುದ್ಧ ಪ್ರತೀಕಾರಕ್ಕಾಗಿ ಸುಳ್ಳು ಸಾಕ್ಷ್ಯ ನೀಡಲು ಮುಂದಾಗುತ್ತಿದ್ದಾರೆ ಎಂದಿದ್ದಾರೆ.
ಸೋನಿಯಾ ವಿರುದ್ಧ ಮಾಹಿತಿ ಕೊಟ್ಟರೆ ಕ್ರಿಶ್ಚಿಯನ್ ಮೈಕೆಲ್ ವಿರುದ್ಧ ಇರುವ ಪ್ರಕರಣದಿಂದ ದೋಷಮುಕ್ತಗೊಳಿಸುವ ಆಶ್ವಾಸನೆ ನೀಡಲಾಗಿದೆ. ಪ್ರಧಾನಿಯವರು ಪ್ರತಿಪಕ್ಷಗಳ ನಾಯಕರ ವಿರುದ್ಧ ಅಪಪ್ರಚಾರ ನಡೆಸಲು ತನಿಖಾ ಸಂಸ್ಥೆ ಗಳ ದುರ್ಬಳಕೆ ಮಾಡುತ್ತಿದ್ದಾರೆ ಎಂದೂ ಸುಜೇìವಾಲ ದೂರಿದ್ದಾರೆ. ಆರೋಪದ ಪುಷ್ಟೀಕರಣಕ್ಕೆ ಮೈಕೆಲ್ನ ವಕೀಲ ನೀಡಿದ ಹೇಳಿಕೆಯನ್ನೂ ಪ್ರಸ್ತಾಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ