ಷರೀಫ್ ಗೆ ಜೈಲಿನಲ್ಲಿ ಜೀವಕ್ಕೆ ಅಪಾಯ ? ಸಹಕೈದಿಗಳಿಂದ ಕಿರುಕುಳ


Team Udayavani, Jul 21, 2018, 11:41 AM IST

nawaz-sharif-700.jpg

ಇಸ್ಲಾಮಾಬಾದ್‌ : ರಾವಲ್ಪಿಂಡಿಯ ಅದಿಯಾಲಾ ಜೈಲಿನಲ್ಲಿರುವ ಪದಚ್ಯುತ, ಮೂರು ಬಾರಿಯ ಪಾಕ್‌ ಪ್ರಧಾನಿ ನವಾಜ್‌ ಷರೀಫ್ ಅವರಿಗೆ ಈಗ ಹಿಂದಿನಂತೆ ಪಾರ್ಕ್‌ ನಲ್ಲಿ  ನಡೆದಾಡುವುದು ಕನಸಿನ ಮಾತಾಗಿದೆ; ತಮ್ಮ ಜೈಲು ಕೋಣೆಯಿಂದ ಹೊರ ಬಂದು ಹಜಾರದೆಡೆಗೆ ಹೋಗುವುದು ಕೂಡ ಷರೀಫ್ ಗೆ ಅಪಾಯಕಾರಿಯಾಗಿದೆ. 

ಷರೀಫ್ ಅವರು ಹೀಗೆ ತಮ್ಮ ಜೈಲು ಕೋಣೆಯಿಂದ ಹೊರ ಬಂದಾಗಲೆಲ್ಲ ಈ ಜೈಲಿನ ಇತರ ಕೋಣೆಗಳಲ್ಲಿರುವ ಕೈದಿಗಳು ಷರಿಫ್ ಮತ್ತು ಅವರ ಪಿಎಂಎಲ್‌ಎನ್‌ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗುತ್ತಾರೆ. ಇದರಿಂದ ಷರೀಫ್ ಗೆ ತೀರ ಕಿರಿಕಿರಿ ಆಗುತ್ತಿದೆ.

ಇದಕ್ಕಿಂತಲೂ ಮಿಗಿಲಾಗಿ ಈಗ ಷರೀಫ್ಗೆ ಜೈಲಿನಲ್ಲಿ ಪ್ರಾಣ ಭಯ ಎದುರಾಗಿದೆ. ಸಹ ಕೈದಿಗಳಲ್ಲಿರಬಹುದಾದ ರಾಜಕೀಯ ವಿರೋಧಿ ಕೈದಿಗಳು ನವಾಜ್‌ ಷರೀಫ್ ಮೇಲೆ ಮಾರಣಾಂತಿಕ ದಾಳಿ ನಡೆಸಬಹುದಾದ ಸಾಧ್ಯತೆಗಳಿವೆ ಎಂದು ಅವರ ವಕೀಲರೇ ಕೋರ್ಟಿನಲ್ಲಿ ಭೀತಿ ವ್ಯಕ್ತಪಡಿಸಿದ್ದಾರೆ. ಅಂತಹ ಸನ್ನಿವೇಶ ಈಗ ಬಹುತೇಕ ವಾಸ್ತವವೇ ಆಗಿದೆ ಎನ್ನಲಾಗಿದೆ.

ನವಾಜ್‌ ಷರೀಫ್ ಅವರಿಗೆ ಜೈಲಿನಲ್ಲಿ ಮೂಲ ಸೌಕರ್ಯಗಳ ಕೊರತೆ ಇರುವುದು ಢಾಳಾಗಿ ಕಾಣಿಸುತ್ತಿದೆ. ತಮ್ಮ ಜೈಲು ಕೋಣೆಯಲ್ಲಿನ ಟಾಯ್ಲೆಟ್‌ ತುಂಬಾ ಶಿಥಿಲವಾಗಿರುವುದು ಷರೀಫ್ ಗೆ ಜುಗುಪ್ಸೆ ಉಂಟುಮಾಡಿದೆ. 

ಸಾಮಾನ್ಯವಾಗಿ ರಾಜಕೀಯ ಪ್ರತಿಷ್ಠಿತರನ್ನು ಜೈಲಿಗೆ ಹಾಕುವ ಪ್ರಸಂಗಗಳಲ್ಲಿ ಇಸ್ಲಾಮಾಬಾದ್‌ ಜೈಲನ್ನೇ ಸರಕಾರ ಆಯ್ಕೆ ಮಾಡುತ್ತದೆ; ಆದರೆ ಷರೀಫ್ ಸಂದರ್ಭದಲ್ಲಿ ಅವರನ್ನು ಸರ್ವ ಬಗೆಯ ಕೈದಿಗಳನ್ನು ಕೂಡಿ ಹಾಕುವ ರಾವಲ್ಪಿಂಡಿಯ ಕುಖ್ಯಾತ ಅದಿಯಾಲಾ ಜೈಲಿನಲ್ಲಿ ಇರಿಸಲಾಗಿದೆ. 

ನಿಜಕ್ಕಾದರೆ ಅದಿಯಾಲಾ ಜೈಲು ಅಧಿಕಾರಿಗಳಿಗೆ ಷರೀಫ್ ಅವರನ್ನು ಇಲ್ಲಿ ಇರಿಸಿಕೊಳ್ಳಲು ಮನಸ್ಸಿಲ್ಲ; ಈ ಜೈಲಿನಲ್ಲಿ ಕಟ್ಟರ್‌ ಉಗ್ರರನ್ನು ಇಡಲಾಗಿದೆ. ಷರೀಫ್ ಅವರನ್ನು ಇಲ್ಲಿನ ಜೈಲಿನಲ್ಲಿ ಇರಿಸಲಾದ ಬಳಿಕ ಜೈಲಿನ ಭದ್ರತೆಯನ್ನು ಹೆಚ್ಚಿಸಲಾಗಿದೆ. 

ಈ ಹಿನ್ನೆಲೆಯಲ್ಲಿ ಷರೀಫ್ ಅವರನ್ನು ಇಸ್ಲಾಮಾಬಾದಿನ ಸಿಹಾಲಾ ರೆಸ್ಟ್‌ ಹೌಸ್‌ ಗೆ ಸ್ಥಳಾಂತರಿಸುವ ಸಾಧ್ಯತೆ ಇದೆ. ಈ ರೆಸ್ಟ್‌ ಹೌಸ್‌ ಒಂದು ಉಪ ಜೈಲಾಗಿದೆ ಮತ್ತು ಈಗ ಇದನ್ನು ಷರೀಫ್ ಮತ್ತು ಅವರ ಪುತ್ರಿ ಮರ್ಯಾಮ್‌ ಅವರಿಗಾಗಿ ಸಿದ್ಧಪಡಿಸಿಡಲಾಗಿದೆ. 

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.