ಅಳವಾರ್ನಲ್ಲಿ ಚಚ್ಚಿ ಕೊಂದ ಪ್ರಕರಣ: ಕಠಿನ ಶಿಕ್ಷೆಯ ಭರವಸೆ
Team Udayavani, Jul 21, 2018, 5:09 PM IST
ಜೈಪುರ : ರಾಜಸ್ಥಾನದ ಅಳವಾರ್ ಜಿಲ್ಲೆಯಲ್ಲಿ ಗೋವುಗಳ ಕಳ್ಳನೆಂದು ಶಂಕಿಸಿ 28ರ ಹರೆಯದ ವ್ಯಕ್ತಿಯನ್ನು ನಿನ್ನೆ ಶುಕ್ರವಾರ ರಾತ್ರಿ ಉದ್ರಿಕ್ತ ಗುಂಪೊಂದು ಹೊಡೆದು ಚಚ್ಚಿ ಸಾಯಿಸಿದ ಪ್ರಕರಣದ ಅಪರಾಧಿಗಳ ವಿರುದ್ದ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜಸ್ಥಾನ ಗೃಹ ಸಚಿವ ಗುಲಾಬ್ ಚಂದ್ ಕಟಾರಿಯಾ ಹೇಳಿದ್ದಾರೆ.
ಜಾತಿ, ಧರ್ಮದ ಗಡಿಯನ್ನು ದಾಟಿ ನಾವು ಈ ಪ್ರಕರಣದ ಅಪರಾಧಿಗಳನ್ನು ಹಿಡಿದು ಅವರಿಗೆ ಕಾನೂನು ಪ್ರಕಾರ ಕಠಿನ ಶಿಕ್ಷೆಯಾಗುವಂತೆ ನೋಡಿಕೊಳ್ಳುತ್ತೇವೆ ಎಂದು ಕಟಾರಿಯಾ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಗೋ ಕಳ್ಳನೆಂದು ಶಂಕಿಸಿ ಚಚ್ಚಿ ಸಾಯಿಸಲ್ಪಟ್ಟಿರುವ ವ್ಯಕ್ತಿಯ ಮೃತದೇಸವನ್ನು ಅಳವಾರ್ ಶವಾಗಾರದಲ್ಲಿ ಇರಿಸಲಾಗಿದ್ದು ಬಳಿಕ ಅದನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಟಾಪ್ಸಿ ವರದಿಯನ್ನು ಕಾಯಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್