ಯುದ್ಧ ವಿಮಾನದ ಅವಶೇಷ 50 ವರ್ಷಗಳ ಬಳಿಕ ಪತ್ತೆ!


Team Udayavani, Jul 22, 2018, 6:00 AM IST

24.jpg

ಡೆಹ್ರಾಡೂನ್‌: ಬರೋಬ್ಬರಿ 50 ವರ್ಷಗಳ ಹಿಂದೆ ಹಿಮಾಚಲ ಪ್ರದೇಶದ ಸ್ಪಿಟಿ ಕಣಿವೆಯಲ್ಲಿ ಪತನಗೊಂಡಿದ್ದ ಯುದ್ಧವಿಮಾನದ ಅವಶೇಷಗಳು ಹಾಗೂ ಯೋಧರೊಬ್ಬರ ಮೃತದೇಹ ಈಗ ಪತ್ತೆಯಾಗಿವೆ. ಭಾರತೀಯ ವಾಯುಪಡೆಗೆ ಸೇರಿದ ವಿಮಾನ ಇದಾಗಿದ್ದು, ಇದೀಗ ಈ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಪರ್ವತಾರೋಹಣ ತಂಡವೊಂದು ಮಾರ್ಗ ಮಧ್ಯೆ, ಪತನಗೊಂಡ ವಿಮಾನದ ಅವಶೇಷಗಳನ್ನು ಕಂಡು ಈ ಬಗ್ಗೆ ಅನ್ವೇಷಣೆ ನಡೆಸಿದಾಗ ಇದು ಐಎಎಫ್ಗೆ ಸೇರಿದ್ದಾಗಿತ್ತು ಎಂದು ತಿಳಿದುಬಂದಿದೆ ಎಂದು ತಂಡದ ಮುಖ್ಯಸ್ಥ ರಾಜೀವ್‌ ರಾವತ್‌ ಹೇಳಿಕೊಂಡಿದ್ದಾರೆ.

ಪತ್ತೆಯಾದದ್ದು ಎಂದು?
ಪರ್ವತಾರೋಹಿಗಳ ತಂಡ ಚಂದ್ರಭಾಗ್‌-13ನಿಂದ ಜುಲೈ 1-15ರ ತನಕ ಸ್ವಚ್ಛತಾ ಅಭಿಯಾನ  ಕೈಗೊಂಡಿದ್ದು, ಈ ವೇಳೆ ವಿಮಾನದ ಅವಶೇಷ ಪತ್ತೆಯಾಗಿದೆ. ಭಾರತೀಯ ಪರ್ವತಾರೋಹಣ ಫೌಂಡೇಷನ್‌ ಮತ್ತು ಒಎನ್‌ಜಿಸಿ ಆಯೋಜಿಸಿದ್ದ ಅಭಿಯಾನ ಜು.1ರಂದೇ ಆರಂಭವಾಗಿತ್ತು. ಜು.11ರಂದು ಮಾರ್ಗ ಮಧ್ಯೆ ಪತನಗೊಂಡ ವಿಮಾನ ಪತ್ತೆಯಾಗಿತ್ತು. ಆದರೆ, ಈ ಬಗ್ಗೆ ಸೇನೆಗೆ ಮಾಹಿತಿ ಸಿಕ್ಕಿದ್ದು ತಂಡ ಮರಳಿದ ಬಳಿಕ. ತಂಡ ನೀಡಿರುವ ಮಾಹಿತಿ ಪ್ರಕಾರ ವಿಮಾನಗಳ ಅವಶೇಷಗಳು ಹಾಗೂ ಓರ್ವ ವ್ಯಕ್ತಿಯ ಮೃತದೇಹದ ಅವಶೇಷ ಪತ್ತೆಯಾಗಿವೆ. ಅವಶೇಷಗಳು ಹೆಚ್ಚುಕಡಿಮೆ 2ರಿಂದ 2.25 ಕಿ.ಮೀ.ನಷ್ಟು ದೂರಕ್ಕೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಪತನ ಯಾವಾಗ?
50 ವರ್ಷಗಳ ಹಿಂದೆ, ಅಂದರೆ 1968, ಫೆಬ್ರವರಿ 7ರಂದು. ಸೋವಿಯತ್‌ ಯೂನಿಯನ್‌ನಲ್ಲಿ ತಯಾರಾಗಿದ್ದ ಎಎನ್‌-12 ಯುದ್ಧ ವಿಮಾನವನ್ನು ಪೈಲಟ್‌ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಚಂಡಿಗಡದ ಲೇಹ್‌ ಪ್ರದೇಶದತ್ತ ಹಾರಾಟ ನಡೆಸುವಾಗ ಅದು ಪತನಗೊಂಡಿತ್ತು. ರೊಹrಂಗ್‌ ಪಾಸ್‌ ದಾಟುತ್ತಿದ್ದಂತೆ ಸಂಪರ್ಕ ಕಳೆದುಕೊಂಡಿತ್ತು.

ತಂಡ ಹೇಳಿದ್ದೇನು?
ಅವಶೇಷ ಹೊತ್ತು ತರಲು ನಮ್ಮ ಬಳಿ ಏನೂ ಇರಲಿಲ್ಲ. ಪತನಗೊಂಡಿರುವ ಪ್ರದೇಶ ಸಂಪೂರ್ಣ ಹಿಮಾವೃತವಾಗಿರುವ ಕಾರಣ, ಅಲ್ಲಿ ಕಂಡುಬಂದ ಮೃತದೇಹ ಹಾಗೇ ಹೆಪ್ಪುಗಟ್ಟಿಕೊಂಡಿದೆ. ಅದನ್ನು ನೋಡಿ ಒಮ್ಮೆ ಗಾಬರಿಯಾದೆವು. ವಿಮಾನ ಅವಶೇಷಗಳು ನಮ್ಮನ್ನು ಅಚ್ಚರಿಗೊಳಿಸಿತು. ಅವಶೇಷಗಳು ಪತ್ತೆಯಾದ ಸ್ಥಳ, ಸಮುದ್ರ ಮಟ್ಟದಿಂದ ಅಂದಾಜು 18,000 ಅಡಿ ಎತ್ತರ ದಲ್ಲಿದೆ ಎಂದು ರಾಜೀವ್‌ ರಾವತ್‌ ಹೇಳಿ ದ್ದಾರೆ. ಯಾವ ಅವಶೇಷಗಳನ್ನೂ ನಾವು ಸ್ಪರ್ಶಿಸಿಲ್ಲ. ಫೋಟೋ, ವಿಡಿಯೋ ಮಾಡಿಕೊಂಡೆವು. ಅವು ಗಳನ್ನೆಲ್ಲ ಈಗ ಸೇನೆಗೆ ನೀಡಿದ್ದೇವೆ ಎಂದಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.