ಬಿಜೆಪಿ-ಟಿಆರ್‌ಎಸ್‌ ದೋಸ್ತಿ?


Team Udayavani, Jul 23, 2018, 9:40 AM IST

nda.jpg

ಹೊಸದಿಲ್ಲಿ: ಮುಂದಿನ ಲೋಕಸಭೆ ಚುನಾವಣೆ ವೇಳೆಗೆ ಬಿಜೆಪಿ ಹಾಗೂ ಟಿಆರ್‌ಎಸ್‌ ಪರಸ್ಪರ ಕೈಜೋಡಿಸಲಿವೆಯೇ? ಇಂತಹದೊಂದು ಅನುಮಾನ ಈಗ ಮೂಡತೊಡಗಿದೆ. ಲೋಕಸಭೆಯಲ್ಲಿ ಶುಕ್ರವಾರ ಅವಿಶ್ವಾಸ ಗೊತ್ತುವಳಿ ಕುರಿತು ಚರ್ಚೆ ಸಂದರ್ಭದಲ್ಲಿ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರನ್ನು ದೂಷಿಸುವ ಭರದಲ್ಲಿ ಪ್ರಧಾನಿ ಮೋದಿ ಅವರು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಅಧ್ಯಕ್ಷ ಕೆ. ಚಂದ್ರಶೇಖರ್‌ ರಾವ್‌ ಅವರನ್ನು ಹೊಗಳಿ ಅಟ್ಟಕ್ಕೇರಿಸಿರುವುದು, ಅವಿಶ್ವಾಸದ ವೇಳೆ ಕೊನೇ ಕ್ಷಣದಲ್ಲಿ ಟಿಆರ್‌ಎಸ್‌ ದೂರ ಉಳಿದಿರುವುದು ಇಂಥ ನಿರೀಕ್ಷೆಯೊಂದನ್ನು ಜೀವಂತವಾಗಿರಿಸಿದೆ. ಅವಿಶ್ವಾಸ ಗೊತ್ತುವಳಿ ಮಂಡನೆಗೂ ಮುನ್ನ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಟಿಆರ್‌ಎಸ್‌ ಸಂಸದರಿಗೆ ಕರೆ ಮಾಡಿ, ಸರಕಾರವನ್ನು ಬೆಂಬಲಿಸುವಂತೆ ಕೋರಿದ್ದರು ಎನ್ನಲಾಗಿದೆ. ಆದರೆ, ಟಿಆರ್‌ಎಸ್‌ ಸರಕಾರವನ್ನು ಬೆಂಬಲಿಸದೇ ದೂರ ಉಳಿಯುವ ಮೂಲಕ ಪರೋಕ್ಷವಾಗಿ ಸರಕಾರಕ್ಕೆ ಬೆಂಬಲ ನೀಡಿದರು. 

ಇತ್ತೀಚೆಗಷ್ಟೇ ಕೆಸಿಆರ್‌ ಅವರು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಜತೆಗೂಡಿ ಬಿಜೆಪಿಯೇತರ ಹಾಗೂ ಕಾಂಗ್ರೆಸೇತರ ರಂಗವೊಂದರ ರಚನೆಗೆ ಅತ್ಯುತ್ಸಾಹ ತೋರಿದ್ದರು. ವಿವಿಧ ಪಕ್ಷಗಳನ್ನು ಒಗ್ಗೂಡಿಸುವ ಯತ್ನವನ್ನೂ ಮಾಡಿದ್ದರು. ಆದರೆ, ಇದೀಗ ಫೆಡರಲ್‌ ಫ್ರಂಟ್‌ ರಚಿಸುವ ಅವರ ಆಸಕ್ತಿ ಕುಗ್ಗಿದಂತೆ ಕಾಣುತ್ತಿದ್ದು, ಲೋಕಸಭೆ ಚುನಾವಣೆ ವೇಳೆ ಬಿಜೆಪಿಯೊಂದಿಗೆ ಸೇರುವ ಸಾಧ್ಯತೆಯೂ ಗೋಚರಿಸತೊಡಗಿದೆ. ಬಿಜೆಪಿ ಜತೆಗಿನ ಮೈತ್ರಿಯನ್ನು ಟಿಆರ್‌ಎಸ್‌ ನಾಯಕರು ತಳ್ಳಿಹಾಕುತ್ತಿದ್ದರೂ, ಚುನಾವಣೆ ಸಮೀಪಿಸುವಾಗ ಲೆಕ್ಕಾಚಾರ ಹೇಗೆ ಬದಲಾಗುತ್ತದೆ ಎಂದು ಕಾದು ನೋಡಬೇಕು ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಬಿಹಾರದಲ್ಲಿ ಹೆಚ್ಚು ಸೀಟಿಗೆ ಬೇಡಿಕೆ
ಎನ್‌ಡಿಎಗೆ ಬಿಹಾರದಲ್ಲಿ ಸೀಟು ಹಂಚಿಕೆಯದ್ದೇ ದೊಡ್ಡ ತಲೆನೋವಾಗಿರುವ ನಡುವೆಯೇ, ಮಹಾಮೈತ್ರಿಯೊಳಗಿನ ಪಕ್ಷಗಳ ನಡುವೆಯೂ ಸೀಟು ಹಂಚಿಕೆ ವಿಚಾರ ತಲೆಎತ್ತತೊಡಗಿದೆ. ಆರ್‌ಜೆಡಿ, ಕಾಂಗ್ರೆಸ್‌, ಎನ್‌ಸಿಪಿ, ಎಚ್‌ಎಎಂ(ಹಿಂದುಸ್ತಾನಿ ಅವಾಮ್‌ ಮೋರ್ಚಾ), ಎಡಪಕ್ಷಗಳು ಒಂದಾಗಿ ಲೋಕಸಭೆ ಚುನಾವಣೆಯಲ್ಲಿ ಮಹಾ ಘಟಬಂಧನ್‌ ಮೂಲಕವೇ ಬಿಜೆಪಿಯನ್ನು ಎದುರಿಸಲು ತಯಾರಿ ನಡೆಸುತ್ತಿವೆ. ಈ ಎಲ್ಲ ಪಕ್ಷಗಳ ಹಿರಿಯ ನಾಯಕರು ಈಗಾಗಲೇ ರಹಸ್ಯ ಸಭೆಗಳನ್ನು ಆಯೋಜಿಸಿ, ಸೀಟು ಹಂಚಿಕೆ ಕುರಿತು ಚರ್ಚೆಯನ್ನೂ ನಡೆಸುತ್ತಿದ್ದಾರೆ. ಮೂಲಗಳು ಹೇಳುವಂತೆ, ಒಟ್ಟು 40 ಕ್ಷೇತ್ರಗಳ ಪೈಕಿ ಅರ್ಧದಷ್ಟನ್ನು ಇಟ್ಟುಕೊಳ್ಳಲು ಆರ್‌ಜೆಡಿ ನಿರ್ಧರಿಸಿದೆ. ಕಾಂಗ್ರೆಸ್‌ಗೆ 10, ಎಚ್‌ಎಎಂ ಮತ್ತು ಆರ್‌ಎಲ್‌ಎಸ್‌ಪಿ ತಲಾ 4, ಎನ್‌ಸಿಪಿ ಮತ್ತು ಎಡಪಕ್ಷಕ್ಕೆ ತಲಾ ಒಂದು ಸೀಟುಗಳನ್ನು ನೀಡುವುದು ಆರ್‌ಜೆಡಿ ಲೆಕ್ಕಾಚಾರ. ಇದರ ನಡುವೆಯೇ, ಕಾಂಗ್ರೆಸ್‌ ಇದೀಗ ಹೆಚ್ಚುವರಿ ಸೀಟುಗಳಿಗಾಗಿ ಬೇಡಿಕೆ ಇಟ್ಟಿದೆ. 12ಕ್ಕೂ ಹೆಚ್ಚು ಸ್ಥಾನಗಳನ್ನು ನಮಗೆ ಕೊಡಬೇಕು ಎಂದು ಕೇಳುತ್ತಿದೆ ಎನ್ನಲಾಗಿದೆ. 

ಆಪ್ತನ ವಜಾ ಮಾಡಿದ ಮಾಯಾವತಿ 
ಪ್ರಧಾನಿ ಮೋದಿ ಹಾಗೂ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಅವಹೇಳನ ಕಾರಿ ಹೇಳಿಕೆ ನೀಡಿದ ತಮ್ಮ ಆಪ್ತನನ್ನೇ ಬಿಎಸ್‌ಪಿ ನಾಯಕಿ ಮಾಯಾವತಿ ವಜಾ ಮಾಡಿದ್ದಾರೆ. ಇತ್ತೀಚೆಗಷ್ಟೇ ರಾಹುಲ್‌ ಅವರ ಇಟಲಿ ಮೂಲದ ಬಗ್ಗೆ ಪ್ರಶ್ನಿಸಿದ್ದ ಜೈ ಪ್ರಕಾಶ್‌ ಸಿಂಗ್‌ರನ್ನು ಪಕ್ಷದ ಪ್ರಮುಖ ಹುದ್ದೆಯಿಂದ ಅಮಾನತು ಮಾಡ ಲಾಗಿತ್ತು. ತದನಂತರ ಅವರು ಪ್ರಧಾನಿ ಮೋದಿ ಯನ್ನು ಗಬ್ಬರ್‌ ಸಿಂಗ್‌ ಎಂದು ಕರೆದಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದಲೇ ವಜಾ ಮಾಡಲಾಗಿದೆ. ಲೋಕಸಭೆ ಚುನಾವಣೆಗೆ ಮಹಾಮೈತ್ರಿ ಮಾಡಿಕೊಳ್ಳಲು ಪಕ್ಷ ಮುಂದಾಗಿರುವ ವೇಳೆ, ಯಾರೂ ಯಾರ ಬಗ್ಗೆಯೂ ಆಕ್ಷೇಪಾರ್ಹ ಹೇಳಿಕೆ ನೀಡುವಂತಿಲ್ಲ. ನೀಡಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಈಗಾಗಲೇ ಮಾಯಾವತಿ ಆದೇಶ ಹೊರಡಿಸಿದ್ದಾರೆ. ಇದರ ಹೊರತಾಗಿಯೂ ಸಿಂಗ್‌ ಈ ಹೇಳಿಕೆ ನೀಡಿದ್ದಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಸ್‌ಪಿ ಮೂಲಗಳು 
ತಿಳಿಸಿವೆ.

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.