ಮಧ್ಯಪ್ರದೇಶ; 500 ಕಿರಿಯ ವೈದ್ಯರ ಸಾಮೂಹಿಕ ರಾಜೀನಾಮೆ, ರೋಗಿಗಳ ಪರದಾಟ
Team Udayavani, Jul 24, 2018, 3:18 PM IST
ಭೋಪಾಲ್: ಸುಮಾರು 500 ಮಂದಿ ಸರ್ಕಾರಿ ಕಿರಿಯ ವೈದ್ಯರು ಸಾಮೂಹಿಕವಾಗಿ ರಾಜೀನಾಮೆ ನೀಡಿದ ಪರಿಣಾಮ ಮಧ್ಯಪ್ರದೇಶದ ರೇವಾ, ಭೋಪಾಲ್, ಇಂದೋರ್, ಗ್ವಾಲಿಯರ್ ಹಾಗೂ ಜಬಲ್ ಪುರ್ ನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಸ್ಥಗಿತಗೊಂಡಿದೆ. ಇದರಿಂದಾಗಿ ರೋಗಿಗಳು ಪರದಾಡುವಂತಾಗಿದೆ.
ಸ್ಟೈಫಂಡ್ ಹಾಗೂ ಉಪಕರಣಗಳ ಬೇಡಿಕೆಗೆ ಆಗ್ರಹಿಸಿ ಮಂಗಳವಾರ ಮಧ್ಯಪ್ರದೇಶದ ಹಲವು ಸರ್ಕಾರಿ ಆಸ್ಪತ್ರೆಗಳ ಕಿರಿಯ ವೈದ್ಯರು ರಾಜೀನಾಮೆ ನೀಡಿದ್ದಾರೆ.
ಎಎನ್ ಐ ವರದಿ ಪ್ರಕಾರ, ರೇವಾ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆ ಹಾಗೂ ಭೋಪಾಲ್ ಗಾಂಧಿ ಸ್ಮಾರಕ ಆಸ್ಪತ್ರೆ ಸೇರಿದಂತೆ ಐದು ಸರ್ಕಾರಿ ವೈದ್ಯಕೀಯ ಕಾಲೇಜಿನ ವೈದ್ಯರುಗಳಾಗಿದ್ದಾರೆ ಎಂದು ವಿವರಿಸಿದೆ.
ಸರ್ಕಾರಿ ಕಾಲೇಜಿನ ವೈದ್ಯರುಗಳು ಯಾವುದೇ ತರಗತಿಗಳಿಗೆ ಹಾಜರಾಗಿಲ್ಲ ಎಂದು ಜ್ಯೂನಿಯರ್ ಡಾಕ್ಟರ್ಸ್ ಅಸೋಸಿಯೇಶನ್(ಜೆಯುಡಿಎ)ನ ರಾಜ್ಯಾಧ್ಯಕ್ಷ ಸಚೇತ್ ಸಕ್ಸೇನಾ ತಿಳಿಸಿದ್ದಾರೆ.
ಕಿರಿಯ ವೈದ್ಯರು ತಮ್ಮ ಹಾಸ್ಟೆಲ್ ರೂಮ್ ಗಳನ್ನು ಕೂಡಾ ಖಾಲಿ ಮಾಡಿದ್ದು, ಸುಮಾರು 500 ಮಂದಿ ಕಿರಿಯ ವೈದ್ಯರು ಸೋಮವಾರದಿಂದ ಬಂದ್ ನಡೆಸುವುದಾಗಿ ತಿಳಿಸಿರುವುದಾಗಿ ಸಕ್ಸೇನಾ ವಿವರಿಸಿದ್ದಾರೆ.ಕಿರಿಯ ವೈದ್ಯರ ಮುಷ್ಕರದಿಂದಾಗಿ ಪ್ರಮುಖ ನಗರಗಳಲ್ಲಿ ವೈದ್ಯಕೀಯ ಸೇವೆ ಮೇಲೆ ಪರಿಣಾಮ ಬೀರಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ