ಮಧ್ಯಪ್ರದೇಶ; 500 ಕಿರಿಯ ವೈದ್ಯರ ಸಾಮೂಹಿಕ ರಾಜೀನಾಮೆ, ರೋಗಿಗಳ ಪರದಾಟ
Team Udayavani, Jul 24, 2018, 3:18 PM IST
ಭೋಪಾಲ್: ಸುಮಾರು 500 ಮಂದಿ ಸರ್ಕಾರಿ ಕಿರಿಯ ವೈದ್ಯರು ಸಾಮೂಹಿಕವಾಗಿ ರಾಜೀನಾಮೆ ನೀಡಿದ ಪರಿಣಾಮ ಮಧ್ಯಪ್ರದೇಶದ ರೇವಾ, ಭೋಪಾಲ್, ಇಂದೋರ್, ಗ್ವಾಲಿಯರ್ ಹಾಗೂ ಜಬಲ್ ಪುರ್ ನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಸ್ಥಗಿತಗೊಂಡಿದೆ. ಇದರಿಂದಾಗಿ ರೋಗಿಗಳು ಪರದಾಡುವಂತಾಗಿದೆ.
ಸ್ಟೈಫಂಡ್ ಹಾಗೂ ಉಪಕರಣಗಳ ಬೇಡಿಕೆಗೆ ಆಗ್ರಹಿಸಿ ಮಂಗಳವಾರ ಮಧ್ಯಪ್ರದೇಶದ ಹಲವು ಸರ್ಕಾರಿ ಆಸ್ಪತ್ರೆಗಳ ಕಿರಿಯ ವೈದ್ಯರು ರಾಜೀನಾಮೆ ನೀಡಿದ್ದಾರೆ.
ಎಎನ್ ಐ ವರದಿ ಪ್ರಕಾರ, ರೇವಾ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆ ಹಾಗೂ ಭೋಪಾಲ್ ಗಾಂಧಿ ಸ್ಮಾರಕ ಆಸ್ಪತ್ರೆ ಸೇರಿದಂತೆ ಐದು ಸರ್ಕಾರಿ ವೈದ್ಯಕೀಯ ಕಾಲೇಜಿನ ವೈದ್ಯರುಗಳಾಗಿದ್ದಾರೆ ಎಂದು ವಿವರಿಸಿದೆ.
ಸರ್ಕಾರಿ ಕಾಲೇಜಿನ ವೈದ್ಯರುಗಳು ಯಾವುದೇ ತರಗತಿಗಳಿಗೆ ಹಾಜರಾಗಿಲ್ಲ ಎಂದು ಜ್ಯೂನಿಯರ್ ಡಾಕ್ಟರ್ಸ್ ಅಸೋಸಿಯೇಶನ್(ಜೆಯುಡಿಎ)ನ ರಾಜ್ಯಾಧ್ಯಕ್ಷ ಸಚೇತ್ ಸಕ್ಸೇನಾ ತಿಳಿಸಿದ್ದಾರೆ.
ಕಿರಿಯ ವೈದ್ಯರು ತಮ್ಮ ಹಾಸ್ಟೆಲ್ ರೂಮ್ ಗಳನ್ನು ಕೂಡಾ ಖಾಲಿ ಮಾಡಿದ್ದು, ಸುಮಾರು 500 ಮಂದಿ ಕಿರಿಯ ವೈದ್ಯರು ಸೋಮವಾರದಿಂದ ಬಂದ್ ನಡೆಸುವುದಾಗಿ ತಿಳಿಸಿರುವುದಾಗಿ ಸಕ್ಸೇನಾ ವಿವರಿಸಿದ್ದಾರೆ.ಕಿರಿಯ ವೈದ್ಯರ ಮುಷ್ಕರದಿಂದಾಗಿ ಪ್ರಮುಖ ನಗರಗಳಲ್ಲಿ ವೈದ್ಯಕೀಯ ಸೇವೆ ಮೇಲೆ ಪರಿಣಾಮ ಬೀರಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ