2015ರ ಗಲಭೆ ಕೇಸ್; ಹಾರ್ದಿಕ್ ಪಟೇಲ್ ಗೆ 2 ವರ್ಷ ಜೈಲುಶಿಕ್ಷೆ
Team Udayavani, Jul 25, 2018, 12:58 PM IST
ಮೆಹ್ಸಾನಾ(ಅಹ್ಮದಾಬಾದ್): 2015ರಲ್ಲಿ ಪಾಟೀದಾರ್ ಪ್ರತಿಭಟನೆ ವೇಳೆ ನಡೆಸಿದ್ದ ಗಲಭೆಗೆ ಸಂಬಂಧಿಸಿದಂತೆ ಹಾರ್ದಿಕ್ ಪಟೇಲ್ ದೋಷಿ ಎಂದು ಬುಧವಾರ ಆದೇಶ ನೀಡಿರುವ ಗುಜರಾತ್ ನ ವಿಸ್ ನಗರ್ ಕೋರ್ಟ್ 2 ವರ್ಷ ಜೈಲುಶಿಕ್ಷೆ ವಿಧಿಸಿ, 50 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
2015ರಲ್ಲಿ ಪಾಟೀದಾರ್ ಅನಾಮತ್ ಆಂದೋಲನ್ ಸಮಿತಿ ಸಂಚಾಲಕ ಹಾರ್ದಿಕ್ ಪಟೇಲ್ ನೇತೃತ್ವದಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಸುಮಾರು 500 ಮಂದಿ ಪಟೇಲ್ ಸಮುದಾಯದವರು ವಿಸ್ ನಗರದಲ್ಲಿನ ಬಿಜೆಪಿ ಶಾಸಕರ ಕಚೇರಿಯನ್ನು ಧ್ವಂಸಗೊಳಿಸಿದ್ದರು. ಅಲ್ಲದೇ ಪತ್ರಕರ್ತರ ಮೇಲೂ ಹಲ್ಲೆ ನಡೆಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾರ್ದಿಕ್ ಪಟೇಲ್ ಹಾಗೂ 17 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಿಜೆಪಿ ಶಾಸಕ ಋುಷಿಕೇಶ್ ಪಟೇಲ್ ಕಚೇರಿಯನ್ನು ಧ್ವಂಸಗೊಳಿಸಿದ್ದರಿಂದ ಪಾಟೀದಾರ್ ಅನಾಮತ್ ಆಂದೋಲನ್ ಸಮಿತಿ ಮುಖಂಡ ಹಾರ್ದಿಕ್ ಹಾಗೂ ಇತರರ ವಿರುದ್ಧ ವಿಸ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ, ಪ್ರತಿವಾದ ಆಲಿಸಿದ ನಂತರ ವಿಸ್ ನಗರ ಕೋರ್ಟ್, ಹಾರ್ದಿಕ್ ಪಟೇಲ್, ಲಾಲ್ ಜಿತ್ ಪಟೇಲ್ ಹಾಗೂ ಅಂಬಾಲಾಲ್ ಪಟೇಲ್ ದೋಷಿ ಎಂದು ಆದೇಶ ನೀಡಿ, 2 ವರ್ಷಗಳ ಜೈಲುಶಿಕ್ಷೆ ವಿಧಿಸಿ, ತಲಾ 50 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ ಎಂದು ಮಾಧ್ಯಮದ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ
Election: ಕೇರಳದಲ್ಲಿ “ರಾಹುಲ್ ಗಾಂಧಿ ಡಿಎನ್ಎ ಪರೀಕ್ಷೆ’ ವಿವಾದ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು