2015ರ ಗಲಭೆ ಕೇಸ್; ಹಾರ್ದಿಕ್ ಪಟೇಲ್ ಗೆ 2 ವರ್ಷ ಜೈಲುಶಿಕ್ಷೆ
Team Udayavani, Jul 25, 2018, 12:58 PM IST
ಮೆಹ್ಸಾನಾ(ಅಹ್ಮದಾಬಾದ್): 2015ರಲ್ಲಿ ಪಾಟೀದಾರ್ ಪ್ರತಿಭಟನೆ ವೇಳೆ ನಡೆಸಿದ್ದ ಗಲಭೆಗೆ ಸಂಬಂಧಿಸಿದಂತೆ ಹಾರ್ದಿಕ್ ಪಟೇಲ್ ದೋಷಿ ಎಂದು ಬುಧವಾರ ಆದೇಶ ನೀಡಿರುವ ಗುಜರಾತ್ ನ ವಿಸ್ ನಗರ್ ಕೋರ್ಟ್ 2 ವರ್ಷ ಜೈಲುಶಿಕ್ಷೆ ವಿಧಿಸಿ, 50 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
2015ರಲ್ಲಿ ಪಾಟೀದಾರ್ ಅನಾಮತ್ ಆಂದೋಲನ್ ಸಮಿತಿ ಸಂಚಾಲಕ ಹಾರ್ದಿಕ್ ಪಟೇಲ್ ನೇತೃತ್ವದಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಸುಮಾರು 500 ಮಂದಿ ಪಟೇಲ್ ಸಮುದಾಯದವರು ವಿಸ್ ನಗರದಲ್ಲಿನ ಬಿಜೆಪಿ ಶಾಸಕರ ಕಚೇರಿಯನ್ನು ಧ್ವಂಸಗೊಳಿಸಿದ್ದರು. ಅಲ್ಲದೇ ಪತ್ರಕರ್ತರ ಮೇಲೂ ಹಲ್ಲೆ ನಡೆಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾರ್ದಿಕ್ ಪಟೇಲ್ ಹಾಗೂ 17 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಿಜೆಪಿ ಶಾಸಕ ಋುಷಿಕೇಶ್ ಪಟೇಲ್ ಕಚೇರಿಯನ್ನು ಧ್ವಂಸಗೊಳಿಸಿದ್ದರಿಂದ ಪಾಟೀದಾರ್ ಅನಾಮತ್ ಆಂದೋಲನ್ ಸಮಿತಿ ಮುಖಂಡ ಹಾರ್ದಿಕ್ ಹಾಗೂ ಇತರರ ವಿರುದ್ಧ ವಿಸ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ, ಪ್ರತಿವಾದ ಆಲಿಸಿದ ನಂತರ ವಿಸ್ ನಗರ ಕೋರ್ಟ್, ಹಾರ್ದಿಕ್ ಪಟೇಲ್, ಲಾಲ್ ಜಿತ್ ಪಟೇಲ್ ಹಾಗೂ ಅಂಬಾಲಾಲ್ ಪಟೇಲ್ ದೋಷಿ ಎಂದು ಆದೇಶ ನೀಡಿ, 2 ವರ್ಷಗಳ ಜೈಲುಶಿಕ್ಷೆ ವಿಧಿಸಿ, ತಲಾ 50 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ ಎಂದು ಮಾಧ್ಯಮದ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್