ಐಸಿಯುನೊಳಗೂ ಮೀನುಗಳ ಈಜಾಟ!
Team Udayavani, Jul 30, 2018, 5:30 AM IST
ಹೊಸದಿಲ್ಲಿ: ದೇಶದ ಆರೋಗ್ಯ ಮೂಲಸೌಕರ್ಯದ ಕೊರತೆಗೆ ಮತ್ತೂಂದು ನಿದರ್ಶನವೆಂಬಂತೆ, ಬಿಹಾರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಪಾಟ್ನಾದ ಆಸ್ಪತ್ರೆಯ ಐಸಿಯುನೊಳಗೆ ನೀರು ನುಗ್ಗಿರುವ ಫೋಟೋಗಳು ವೈರಲ್ ಆಗಿವೆ. ಪ್ರವಾಹದ ನೀರಿನ ಮಧ್ಯೆಯೇ ರೋಗಿಗಳು, ಅವರ ಸಂಬಂಧಿಕರು ದಿನ ಕಳೆಯುತ್ತಿದ್ದು, ವೈದ್ಯರು ಕೂಡ ಮೊಣಕಾಲಿನವರೆಗೆ ನೀರು ತುಂಬಿರುವಂತೆಯೇ ರೋಗಿಗಳ ತಪಾಸಣೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ತುರ್ತು ಚಿಕಿತ್ಸಾ ಕೇಂದ್ರವನ್ನು ಆವರಿಸಿರುವ ನೀರಿನಲ್ಲಿ ಮೀನುಗಳೂ ಅತ್ತಿತ್ತ ಓಡಾಡುತ್ತಿವೆ.
ಇಲ್ಲಿನ ನಳಂದಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ದುಸ್ಥಿತಿಯಿದು. ಇದು ಬಿಹಾರದ ಎರಡನೇ ಅತಿದೊಡ್ಡ ಸರ್ಕಾರಿ ಆಸ್ಪತ್ರೆ. 100 ಎಕರೆ ಪ್ರದೇಶದಲ್ಲಿ ವ್ಯಾಪಿಸಿರುವ ಈ ಆಸ್ಪತ್ರೆಯಲ್ಲಿ ಸುಮಾರು 750 ಬೆಡ್ ಗಳಿವೆ. ಭಾರೀ ಮಳೆಯಿಂದಾಗಿ ಆಸ್ಪತ್ರೆಯೊಳಗೆ ನೀರು ನುಗ್ಗಿರುವ ಕಾರಣ, ರೋಗಿಗಳನ್ನು ನೋಡಿಕೊಳ್ಳುತ್ತಿರುವ ಸಂಬಂಧಿಕರು ರಾತ್ರಿಯಿಡೀ ನೀರಿನಲ್ಲಿ ನಿಂತೇ ಸಮಯ ಕಳೆಯುತ್ತಿದ್ದಾರೆ. ಇದರ ಜೊತೆಗೆ, ವಿದ್ಯುತ್ ಆಘಾತದ ಭೀತಿಯೂ ಸೃಷ್ಟಿಯಾಗಿದ್ದು, ಪ್ರಮುಖ ಯಂತ್ರಗಳನ್ನು ಸ್ವಿಚ್ ಆಫ್ ಮಾಡಲಾಗಿದೆ.
ಕುಟುಂಬಗಳ ಸ್ಥಳಾಂತರ
ಇನ್ನೊಂದೆಡೆ, ಯಮುನಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾರಣ, ದೆಹಲಿಯಲ್ಲಿ ತಗ್ಗುಪ್ರದೇಶಗಳ ಜನರ ಸ್ಥಳಾಂತರ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ರವಿವಾರ ಬೆಳಗ್ಗೆ ಸುಮಾರು ಒಂದು ಸಾವಿರ ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು, ಸಂತ್ರಸ್ತರ ನೆರವಿಗೆಂದು ಶಿಬಿರಗಳನ್ನೂ ನಿರ್ಮಿಸಲಾಗಿದೆ. ಸಿಎಂ ಕೇಜ್ರಿವಾಲ್ ಹಾಗೂ ಡಿಸಿಎಂ ಮನೀಶ್ ಸಿಸೋಡಿಯಾ ಅವರು ಪರಿಸ್ಥಿತಿ ಪರಿಶೀಲಿಸಿದ್ದು, ಸಂತ್ರಸ್ತರ ನೆರವಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ. ಇದೇ ವೇಳೆ, ಉತ್ತರಪ್ರದೇಶದಲ್ಲಿ ಮಳೆ ಸಂಬಂಧಿ ದುರಂತಗಳು ಮುಂದುವರಿದಿದ್ದು, ಗುರುವಾರದಿಂದ ಈವರೆಗೆ ಒಟ್ಟು 69 ಮಂದಿ ಅಸುನೀಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ