ರಾಜ್ಯಕ್ಕಿಂತ ಮ.ಪ್ರದೇಶದಲ್ಲಿ ಅತ್ಯಧಿಕ ಹುಲಿಗಳು?
Team Udayavani, Jul 30, 2018, 6:00 AM IST
ಭೋಪಾಲ/ನವದೆಹಲಿ: ದೇಶದಲ್ಲಿ ಅತ್ಯಂತ ಹೆಚ್ಚು ಹುಲಿಗಳನ್ನು ಹೊಂದಿದ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕಕ್ಕೆ ಇತ್ತಾದರೂ, ಶೀಘ್ರದಲ್ಲಿಯೇ ಅದು ಮಧ್ಯಪ್ರದೇಶದ ಪಾಲಾಗಲಿದೆ. ಆ ರಾಜ್ಯದ ಅರಣ್ಯ ಸಂಶೋಧಾ ಸಂಸ್ಥೆ (ಎಸ್ಎಫ್ಆರ್ಐ) ನೀಡಿದ ಮಾಹಿತಿ ಪ್ರಕಾರ 2014ರಲ್ಲಿ ಮಧ್ಯಪ್ರದೇಶದಲ್ಲಿ 714 ಹುಲಿಗಳು ಇದ್ದವು. ಪ್ರಸಕ್ತ
ವರ್ಷ ಆ ಸಂಖ್ಯೆ 1,432ಕ್ಕೆ ಏರಿಕೆಯಾಗಿದೆ.
ಮಧ್ಯಪ್ರದೇಶದಲ್ಲಿ ನಡೆಸಲಾಗಿರುವ ಮೊದಲ ಹಂತದ ಹುಲಿ ಗಣತಿಯ ಮಾಹಿತಿಯಲ್ಲಿ ಈ ಹೆಚ್ಚಳ ಕಂಡು ಬಂದಿದೆ ಎಂದು ಅಲ್ಲಿನ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಶಭಾಜ್ ಅಹ್ಮದ್ ಹೇಳಿದ್ದಾರೆ.
2014ರಲ್ಲಿ ಕರ್ನಾಟಕದಲ್ಲಿ 406,ಉತ್ತರಾಖಂಡದಲ್ಲಿ 340, ಮಧ್ಯಪ್ರದೇಶದಲ್ಲಿ 308 ಹುಲಿಗಳು ಇದ್ದವು. ಕ್ಯಾಮೆರಾ
ಮೂಲಕ ಸೆರೆ ಹಿಡಿಯಲಾಗಿರುವ ಹುಲಿಗಳ ಫೋಟೋಗಳು ಹಿಂದಿನ ಸಂಖ್ಯೆಗಿಂತ ಮತ್ತು ಕರ್ನಾಟಕ, ಉತ್ತರಾಖಂಡಕ್ಕಿಂತ ಹೆಚ್ಚಾಗಿದೆ ಎಂದು ಅಹ್ಮದ್ ಹೇಳಿದ್ದಾರೆ.
ಡೆಹ್ರಾಡೂನ್ನಲ್ಲಿರುವ ವೈಲ್ಡ್ಲೈಫ್ ಇನಿrಟ್ಯೂಟ್ ಆಫ್ ಇಂಡಿಯಾ (ಡಬ್ಲೂéಐಐ) ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ದೇಶಾದ್ಯಂತ ಹುಲಿಗಣತಿ ನಡೆಸುತ್ತದೆ.
ಬಫರ್ ಝೋನ್ಗಳಲ್ಲಿ 2009-10ನೇ ಸಾಲಿನಲ್ಲಿ 1 ಸಾವಿರ ಜಾನುವಾರುಗಳು ಹುಲಿಗಳಿಂದಾಗಿ ಅಸುನೀಗಿವೆ. ಅದು 2017-18ನೇ ಸಾಲಿನಲ್ಲಿ 3 ಸಾವಿರಕ್ಕೆ ಏರಿಕೆಯಾಗಿವೆ ಎಂದು ಅವರು ಹೇಳಿದ್ದಾರೆ.
ಸಂರಕ್ಷಣೆಗೆ ಹಲವು ಕ್ರಮಗಳು
ದೇಶದಲ್ಲಿ ಹುಲಿಗಳ ಸಂರಕ್ಷಣೆಗೆ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಅರಣ್ಯ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ.
ಹುಲಿಗಳಿಗೆ ಪ್ರಾಕೃತಿಕವಾಗಿ ವಾಸಸ್ಥಾನ ಹೊಂದಿರುವ ಕೆಲವೇ ಕೆಲವು ರಾಷ್ಟ್ರಗಳ ಪೈಕಿ ಭಾರತ ಕೂಡ ಸೇರಿದೆ. ಅದು ನಮ್ಮ ದೇಶದ ಸಂಸ್ಕೃತಿಯಲ್ಲೂ ಸೇರಿದೆ.
ಹೀಗಾಗಿ ಅವುಗಳ ರಕ್ಷಣೆ ಎಲ್ಲರ ಹೊಣೆಯಾಗಿದೆ ಎಂದು ಭಾನುವಾರ ಅಂತಾರಾಷ್ಟ್ರೀಯ ಹುಲಿ ದಿನ ಪ್ರಯುಕ್ತ ನೀಡಿದ ಸಂದೇಶದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ