ಕರುಣಾನಿಧಿ ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ ಮುಂದುವರಿಕೆ


Team Udayavani, Jul 30, 2018, 8:19 AM IST

karunanidi.png

ಚೆನ್ನೈ: ತಮಿಳುನಾಡು ಮಾಜಿ ಸಿಎಂ, ಡಿಎಂಕೆ ವರಿಷ್ಠ ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ರವಿವಾರ ಬೆಳಗ್ಗೆ ಸ್ಥಿರವಾಗಿದ್ದ ಆರೋಗ್ಯ ಸ್ಥಿತಿ, ರಾತ್ರಿ ವೇಳೆಗೆ ಬಿಗಡಾಯಿಸಿದ್ದು, ಆಸ್ಪತ್ರೆ ಸುತ್ತ ಸಹಸ್ರಾರು ಅಭಿಮಾನಿಗಳು ಜಮಾಯಿಸಿದ್ದಾರೆ. ಜನರನ್ನು ನಿಭಾಯಿಸುವುದು ಕಷ್ಟವಾದ ಹಿನ್ನೆಲೆಯಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆಯೂ ಸಂಭವಿಸಿದೆ. ಆರೋಗ್ಯದಲ್ಲಿ ತೀವ್ರ ಏರುಪೇರಾದ ಹಿನ್ನೆಲೆಯಲ್ಲಿ ರವಿವಾರ ರಾತ್ರಿಯೇ ಚೆನ್ನೈಯ ಕಾವೇರಿ ಆಸ್ಪತ್ರೆಗೆ ಅವರ ಪತ್ನಿ ಹಾಗೂ ಕುಟುಂಬ ಸದಸ್ಯರನ್ನು ಕರೆಸಿಕೊಳ್ಳಲಾಯಿತು. 

ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂಬ ಸುದ್ದಿ ಹಬ್ಬುತ್ತಿದ್ದಂತೆ, ಆಸ್ಪತ್ರೆಯ ಹೊರಗೆ ಸಾವಿರಾರು ಮಂದಿ ಜಮಾಯಿಸ ತೊಡಗಿದರು. ಹೀಗಾಗಿ ಆಸ್ಪತ್ರೆಯ ಹೊರಗೆ ಹಾಗೂ ಕರುಣಾನಿಧಿ ಅವರ ಗೋಪಾಲಪುರಂ ನಿವಾಸದ ಹೊರಗೂ
ಭಾರೀ ಭದ್ರತೆ ಒದಗಿಸಲಾಗಿದೆ. ಪ್ರಮುಖ ಡಿಎಂಕೆ ನಾಯಕರು ಕೂಡ ಆಸ್ಪತ್ರೆಯತ್ತ ಧಾವಿಸತೊಡಗಿದ್ದು,
ಮುಖ್ಯಮಂತ್ರಿ ಪಳನಿಸ್ವಾಮಿ ಅವರೂ ಸೇಲಂನಿಂದ ಚೆನ್ನೈಗೆ ವಾಪಸಾದರು. ಇದಕ್ಕೂ ಮುನ್ನ, ಕರುಣಾನಿಧಿ ಅವರು ಆಸ್ಪತ್ರೆಗೆ ದಾಖಲಾದ ಬಳಿಕದ ಮೊದಲ ಫೋಟೋವನ್ನು ಡಿಎಂಕೆ ಬಿಡುಗಡೆ ಮಾಡಿತ್ತು. ಫೋಟೋದಲ್ಲಿ
ವೆಂಟಿಲೇಟರ್‌ ಇಲ್ಲದೇ ಕರುಣಾನಿಧಿ ಮಲಗಿರುವುದನ್ನು ನೋಡಿ ಅಭಿಮಾನಿಗಳು ಸ್ವಲ್ಪಮಟ್ಟಿಗೆ ನಿರಾಳರಾದರು.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೂ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.
ಆಸ್ಪತ್ರೆ ಆಡಳಿತ ಮಂಡಳಿ ರಾತ್ರಿಯೇ ಬುಲೆಟಿನ್‌ ಹೊರಡಿಸಿ, ಕರುಣಾನಿಧಿ ಅವರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ
ಸ್ಪಂದಿಸುತ್ತಿದ್ದಾರೆ ಎಂದು ಮಾಹಿತಿ ನೀಡಿತು. ಆದರೂ ಅಭಿಮಾನಿಗಳು ಸ್ಥಳದಿಂದ ಕದಡಿರಲಿಲ್ಲ.

ಲಘು ಲಾಠಿಚಾರ್ಜ್‌
ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಗಂಭೀರ ಎನ್ನುವ ಸುದ್ದಿ ಹರಿದಾಡಿದ ಹಿನ್ನೆಲೆಯಲ್ಲಿ ರಾತ್ರಿ 10.30ರ ಸುಮಾರಿಗೆ ಕಾವೇರಿ ಆಸ್ಪತ್ರೆ ಸುತ್ತಲೂ ಸಹಸ್ರಾರು ಅಭಿಮಾನಿಗಳು ಸೇರಿದ್ದರು. ನಾಯಕನ ಆರೋಗ್ಯ ಸ್ಥಿತಿ ತಿಳಿದುಕೊಳ್ಳಲು ಆಸ್ಪತ್ರೆ ಬಳಿ ಒಂದು ಹಂತದಲ್ಲಿ ನೂಕುನುಗ್ಗಲೂ ನಡೆಯಿತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ
ನಿಭಾಯಿಸುವುದು ಕಷ್ಟವಾದ ಕಾರಣ ಗುಂಪು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ ಘಟನೆಯೂ ನಡೆಯಿತು. ಇಷ್ಟಾದರೂ ಅಭಿಮಾನಿಗಳ ಗುಂಪು ತಡರಾತ್ರಿಯ ತನಕ ಸ್ಥಳದಿಂದ ಕಾಲ್ಕಿಳಲಿಲ್ಲ. ಇನ್ನು ಕರುಣಾನಿಧಿ ಅವರ ನಿವಾಸದ ಮುಂದೂ ಸಹಸ್ರಾರು ಅಭಿಮಾನಿಗಳು ಸೇರಿದ್ದಾರೆ. ಎರಡೂ ಕಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.