ಕೈಗೆ ಶಾಕ್:ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ;ಹೊಸ ಸರ್ವೆ
Team Udayavani, Aug 1, 2018, 10:27 AM IST
ಭೂಪಾಲ್: ವರ್ಷಾಂತ್ಯದೊಳಗೆ ವಿಧಾನಸಭಾ ಚುನಾವಣೆಗೆ ಸಿದ್ದವಾಗಿರುವ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಎಸ್ಪಿ ಮೈತ್ರಿ ಮಾಡಿಕೊಂಡರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎನ್ನುವ ಸಮೀಕ್ಷಾ ವರದಿಯನ್ನು ಸ್ಪಿಕ್ ಮಿಡಿಯಾ ನೆಟ್ವರ್ಕ್ ಬಹಿರಂಗ ಪಡಿಸಿದೆ.
ಬಿಎಸ್ಪಿ- ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಂಡರೆ ಬಿಜೆಪಿ ಪ್ರಬಲ ಸ್ಪರ್ಧೆ ಎದುರಿಸಬೇಕಾಗುತ್ತದೆ, ಆದರೆ 230 ಸದಸ್ಯ ಬಲದ ವಿಧಾನಸಭೆಯಲ್ಲಿ 103 ಸ್ಥಾನಗಳನ್ನು ಮಾತ್ರ ಮೈತ್ರಿ ಕೂಟ ಗೆಲ್ಲುವ ವಾತಾವರಣವಿದೆ ಎಂದಿದೆ. ಬಹುಮತಕ್ಕೆ ಅಗತ್ಯವಾದ ಸ್ಥಾನಗಳು 116.
ಸದ್ಯ ಬಿಜೆಪಿ 147 ಸ್ಥಾನಗಳನ್ನು ಗೆದ್ದು ಭರ್ಜರಿ ಬಹುಮತದೊಂದಿಗೆ ಅಧಿಕಾರ ನಡೆಸುತ್ತಿರುವ ಬಿಜೆಪಿಗೆ ಗುಜಾರಾತ್ ಚುನಾವಣೆಯಲ್ಲಿ ನೀಡಿದಂತಹ ಪ್ರಬಲ ಸ್ಪರ್ಧೆಯನ್ನು ಕಾಂಗ್ರೆಸ್ ಮೈತ್ರಿ ಕೂಟ ನೀಡುವ ಸಾಧ್ಯತೆಗಳಿವೆ ಎಂದು ಸಮೀಕ್ಷೆ ಹೇಳಿದೆ.
ಬಿಜೆಪಿ 126 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳಿವೆ ಎಂದು ತಮಿಳು ನಾಡು ಮೂಲದ ಸ್ಪಿಕ್ ಮಿಡಿಯಾ ನೆಟ್ವರ್ಕ್ ಸಮೀಕ್ಷಾ ವರದಿ ಹೇಳಿದೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ -ಬಿಎಸ್ಪಿ ಮೈತ್ರಿ ಮಾಡಿಕೊಂಡರೆ 29 ರಲ್ಲಿ ಬಿಜೆಪಿ 16 ಸ್ಥಾನಗಳನ್ನು ಮಾತ್ರ ಗೆಲ್ಲಬಹದು. ಹಾಲಿ ಬಿಜೆಪಿ 26 ಸಂಸದರನ್ನು ಹೊಂದಿದ್ದು 10 ಸ್ಥಾನಗಳನ್ನು ಕಳೆದುಕೊಳ್ಳಬೇಕಾಗಬಹುದು ಎಂದು ಸಮೀಕ್ಷೆ ಹೇಳಿದೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 45.79% ಮತಗಳೊಂದಿಗೆ 126 ಸ್ಥಾನ, ಕಾಂಗ್ರೆಸ್-ಬಿಎಸ್ಪಿ ಮೈತ್ರಿ ಕೂಟ 48.37% ಮತಗಳೊಂದಿಗೆ 103 ಸ್ಥಾನ ಮತ್ತು ಇತರರು 1 ಸ್ಥಾನ ಗೆಲ್ಲಬಹುದು ಎಂದು ಸಮೀಕ್ಷಾ ವರದಿಯಲ್ಲಿ ಹೇಳಲಾಗಿದೆ.
2003 ರಲ್ಲಿ ಉಮಾ ಭಾರತಿ ಅವರು ಬಿಜೆಪಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ವರ್ಷದ ಬಳಿಕ ಬಾಬುಲಾಲ್ ಗೌರ್ ಮುಖ್ಯಮಂತ್ರಿಯಾಗಿದ್ದರು. 2005 ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಶಿವರಾಜ್ ಸಿಂಗ್ ಚೌಹಾಣ್ ಅವರು 2008 ಮತ್ತು 2013 ರಲ್ಲಿ ಸತತವಾಗಿ ಗೆಲುವು ಸಾಧಿಸಿ, ನಿರಂತರ 13 ವರ್ಷಗಳಿಂದ ಆಡಳಿತ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ