ಜಾರ್ಖಂಡ್ : ಪ್ರೇಮ ವಿವಾಹ ಮಾಡಿಕೊಂಡಿದ್ದ ಯುವ ಜೋಡಿ ಆತ್ಮಹತ್ಯೆ
Team Udayavani, Aug 1, 2018, 3:53 PM IST
ಜಮ್ಶೇದ್ಪುರ : ಆರು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ಜೋಡಿಯೊಂದು ಸೆರಾಯ್ಕೇಲಾ – ಖರ್ಸವಾನ್ ಜಿಲ್ಲೆಯ ಗ್ರಾಮದಲ್ಲಿನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮನೆಯೊಳಗಿಂದ ಯಾವುದೇ ಉತ್ತರ ಬಾರದಿದ್ದಾಗ ನೆರೆಹೊರೆಯವರು ಪೊಲೀಸರಿಗೆ ಫೋನ್ ಮಾಡಿದರು. ಪೊಲೀಸರು ಧಾವಿಸಿ ಬಂದು ಕೊನೆಗೆ ಮನೆಯ ಬಾಗಿಲನ್ನು ಮುರಿದು ಒಳಪ್ರವೇಶಿಸಿದಾಗ ಅಲ್ಲಿ ಯುವ ದಂಪತಿ ನೇಣಿಗೆ ಶರಣಾಗಿದ್ದುದು ಕಂಡು ಬಂತು. ಅಲ್ಲೇ ಪೊಲೀಸರಿಗೆ ಡೆತ್ ನೋಟ್ ಕೂಡ ಸಿಕ್ಕಿತು.
ಪೊಲೀಸರು ಯುವ ಜೋಡಿಯ ಹೆತ್ತವರಿಗೆ ವಿಷಯ ತಿಳಿಸಿ ಪ್ರಶ್ನಿಸಿದಾಗ, “ಅವರ ಮದುವೆಗೆ ನಮ್ಮದೇನೂ ಆಕ್ಷೇಪ ಇರಲಿಲ್ಲ’ ಎಂದು ಉತ್ತರಿಸಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು