ಕೇರಳ ಸಿಎಂ ಕೊಠಡಿಗೆ ನುಗ್ಗಲು ಯತ್ನಿಸಿದವನ ಬಂಧನ
Team Udayavani, Aug 5, 2018, 3:18 PM IST
ಹೊಸದಿಲ್ಲಿ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇದ್ದ ಕೇರಳ ಭವನದ ಕೊಠಡಿಗೆ ವ್ಯಕ್ತಿಯೊಬ್ಬ ಚೂರಿ ಹಿಡಿದುಕೊಂಡು ನುಗ್ಗಲು ಯತ್ನಿಸಿದ್ದಾನೆ. ಈತನನ್ನು ಆಲಪ್ಪುಳ ಜಿಲ್ಲೆಯ ಚೆಟ್ಟಿಕುಲಂಗರ ಮೂಲದ ವಿಮಲ್ರಾಜ್ ಎಂದು ಗುರುತಿಸಲಾಗಿದೆ. ಅಲ್ಲಿ ಇದ್ದ ಪತ್ರಕರ್ತರು ಮತ್ತು ಇತರರು ಆತನನ್ನು ಹಿಡಿಯಲು ಪ್ರಯತ್ನಿಸಿ ದರಾರದೂ ಯಶಸ್ವಿಯಾಗಲಿಲ್ಲ. ಮುಖ್ಯಮಂತ್ರಿ ಭದ್ರತಾ ಸಿಬಂದಿ ಆತನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸದಿಲ್ಲಿ ಯಲ್ಲಿ ನಡೆಯುತ್ತಿರುವ ಸಿಪಿಎಂ ಪಾಲಿಟ್ಬ್ಯೂರೋ ಸಭೆಯಲ್ಲಿ ಭಾಗವಹಿಸಲು ವಿಜಯನ್ ಶನಿವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ವಿಜಯನ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಸದ್ಯ ಪೊಲೀಸರ ವಶದಲ್ಲಿರುವಾತ ಹೊಸದಿಲ್ಲಿಯಲ್ಲಿಯೇ ನೆಲೆಸಿದ್ದಾನೆ. ಆತ ಮಾನಸಿಕವಾಗಿ ಅಸ್ವಸ್ಥ ಎಂದು ಮೂಲಗಳು ಹೇಳಿವೆ. ಈ ಹಿಂದೆ ಕೂಡ ಆತ ಮುಖ್ಯಮಂತ್ರಿಗೆ ಬೆದರಿಕೆ ಕರೆ ಮಾಡಿದ್ದ. ಉದ್ಯೋಗ ಸಿಗದೇ ಇದ್ದುದರಿಂದ ಆತ ವಿಜಯನ್ ಎದುರು ಆತ್ಮಹತ್ಯೆ ನಡೆಸಲು ಮುಂದಾಗಿದ್ದ. ಪೊಲೀಸರು ಆತನ ವಿಚಾರಣೆ ನಡೆಸಿದ್ದಾರೆ. ವಿಜಯನ್ ಮೇಲಿನ ದಾಳಿ ಯತ್ನವನ್ನು ಕಾಂಗ್ರೆಸ್ ಖಂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ