ಕಾಶ್ಮೀರದಾದ್ಯಂತ ಪ್ರತಿಭಟನೆ
Team Udayavani, Aug 6, 2018, 9:34 AM IST
ಶ್ರೀನಗರ: ಸಂವಿಧಾನದ 35-ಎ ವಿಧಿಯ ಮಾನ್ಯತೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದನ್ನು ಖಂಡಿಸಿ ಪ್ರತ್ಯೇಕತಾವಾದಿಗಳು ಕರೆ ನೀಡಿದ್ದ ಬಂದ್ನಿಂದಾಗಿ ರವಿವಾರ ಜಮ್ಮು-ಕಾಶ್ಮೀರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತ ಗೊಂಡಿತು. ಬಂದ್ನಿಂದಾಗಿ ಕಣಿವೆ ರಾಜ್ಯ ಸಂಪೂರ್ಣ ಸ್ತಬ್ಧಗೊಂಡಿದ್ದು, ಹಲವೆಡೆ ಪ್ರತಿಭಟನೆಗಳು, ರ್ಯಾಲಿಗಳು ನಡೆದವು. ವ್ಯಾಪಾರಿಗಳೂ ಅಂಗಡಿ ಗಳನ್ನು ಮುಚ್ಚಿ ಬಂದ್ಗೆ ಬೆಂಬಲ ನೀಡಿದರು. ಕೆಲವೆಡೆ ಸಣ್ಣಪುಟ್ಟ ಕಲ್ಲು ತೂರಾ ಟದಂಥ ಘಟನೆಗಳೂ ವರದಿಯಾದವು.
ಜಮ್ಮು-ಕಾಶ್ಮೀರದಲ್ಲಿ ಹೊರಗಿನವರು ಸ್ಥಿರ ಆಸ್ತಿ ಖರೀದಿಸುವುದಕ್ಕೆ ನಿರ್ಬಂಧ ಹೇರುವಂಥ 35-ಎ ವಿಧಿಯ ಮಾನ್ಯತೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಸೋಮವಾರ ಸುಪ್ರೀಂನಲ್ಲಿ ನಡೆಯ ಲಿದೆ. ಈ ವಿಧಿಯು ಭಾರತದ ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಸುತ್ತದೆ, ದೇಶದ ಯಾವುದೇ ಭಾಗದಲ್ಲಾದರೂ ವಾಸಿಸುವ ಮತ್ತು ಆಸ್ತಿ ಖರೀದಿಸುವ ಹಕ್ಕನ್ನು ಕಿತ್ತುಕೊಂಡಂತಾಗು ತ್ತದೆ ಎಂದು ಎನ್ಜಿಒವೊಂದು ಅರ್ಜಿಯಲ್ಲಿ ಉಲ್ಲೇಖೀಸಿತ್ತು.
ಏತನ್ಮಧ್ಯೆ, ಈ ವಿಧಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ನಲ್ಲೇನಾದರೂ ವ್ಯತಿರಿಕ್ತ ತೀರ್ಪು ಬಂದರೆ, ಕಣಿವೆ ರಾಜ್ಯದ ಪೊಲೀಸರೇ ಬಂಡೇಳುವ ಹಾಗೂ ಭಾರೀ ಹಿಂಸಾಚಾರ ಸಂಭವಿಸುವ ಸಾಧ್ಯತೆಗಳಿವೆ ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ.
ಯಾತ್ರೆ ಸ್ಥಗಿತ
ರವಿವಾರ, ಸೋಮವಾರ ಬಂದ್ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆ ಯೂ ಸ್ಥಗಿತಗೊಂಡಿದೆ. ರವಿವಾರ ಜಮ್ಮುವಿನಿಂದ ಯಾತ್ರಿಗಳ ತಂಡ ಹೊರ ಡಬೇಕಿತ್ತು. ಆದರೆ, ಮಂಗಳ ವಾರದ ನಂತರ ತೆರಳುವಂತೆ ಸೂಚನೆ ನೀಡಲಾ ಗಿದೆ. ಇದೇ ವೇಳೆ, ರಾಜ್ಯಾ ದ್ಯಂತ ರೈಲು ಸಂಚಾರವನ್ನೂ ರದ್ದು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ