ಭಗವಾನ್‌,ಅಲ್ಲಾ ಹೆಸರಲ್ಲಿ ಮಕ್ಕಳು;ರಾಜ್ಯಸಭೆಯಲ್ಲಿ ಜನಸಂಖ್ಯಾ ಸ್ಫೋಟ


Team Udayavani, Aug 6, 2018, 4:27 PM IST

population-explosion-700.jpg

ಹೊಸದಿಲ್ಲಿ : “ಭಗವಾನ್‌, ಅಲ್ಲಾ ಹೆಸರಿನಲ್ಲಿ ನಮ್ಮ ದೇಶದಲ್ಲಿ ಮಕ್ಕಳು ಹುಟ್ಟುತ್ತಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದಾಗ ನಮ್ಮ ಜನಸಂಖ್ಯೆ 36 ಕೋಟಿ ಇತ್ತು; ಇವತ್ತು ಅದು 135 ಕೋಟಿಗೆ ಏರಿದೆ; ವರ್ಷಂಪ್ರತಿ ದೇಶದ ಜನಸಂಖ್ಯೆ ಎರಡು ಕೋಟಿ ಹೆಚ್ಚುತ್ತಿದೆ’ ಎಂದು ಬಿಜೆಪಿ ನಾಯಕ ವಿಜಯ್‌ ಪಾಲ್‌ ಸಿಂಗ್‌ ತೋಮರ್‌ ಅವರಿಂದು ರಾಜ್ಯಸಭೆಯಲ್ಲಿ ‘ದೇಶದಲ್ಲಿ ಜನಸಂಖ್ಯಾ ಸ್ಫೋಟ’ದ ಮೇಲಿನ ಚರ್ಚೆಯಲ್ಲಿ ಉದ್ಗರಿಸಿದರು. 

“ಭೂಮಿಯ ಶೇ.2.4ರಷ್ಟು ಸ್ಥಳವನ್ನು ಮಾತ್ರವೇ ಭಾರತ ಹೊಂದಿದೆ; ಆದರೆ ಅದೇ ವೇಳೆ ವಿಶ್ವ ಜನಸಂಖ್ಯೆಯ ಶೇ.17.5ರಷ್ಟನ್ನು ಭಾರತ ಹೊಂದಿದೆ. ದೇಶದಲ್ಲಿನ ಅಭಿವೃದ್ಧಿ ಕಾರ್ಯಗಳೆಲ್ಲ ಜನಸಂಖ್ಯಾ ಸ್ಫೋಟದಿಂದಾಗಿ ನಿರರ್ಥಕವಾಗುತ್ತಿವೆ’ ಎಂದು ತೋಮರ್‌ ಹೇಳಿದರು. 

ದೇಶದ ಜನಸಂಖ್ಯಾ ಸ್ಫೋಟವನ್ನು ತಡೆಯಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ಚರ್ಚೆ ರಾಜ್ಯಸಭೆಯಲ್ಲಿ ನಡೆಯಿತು. 

ಬಿಜೆಪಿಯ ಅಶೋಕ್‌ ಬಾಜಪೇಯಿ ಅವರು “ಚೀನವನ್ನು ಹಿಂದಿಕ್ಕಿ ಭಾರತ 2022ರಲ್ಲಿ ವಿಶ್ವದ ಅತ್ಯಧಿಕ ಜನಸಂಖ್ಯೆಯ ದೇಶವಾಗಿ ಹೊರಹೊಮ್ಮಲಿದ್ದು  2050ರ ವೇಳೆಗೆ  ನಮ್ಮ ದೇಶ 1.66 ಶತಕೋಟಿ ಜನರಿಗೆ ಮನೆಯಾಗಲಿದೆ’ ಎಂದು ಹೇಳಿದರು. ಜನಸಂಖ್ಯಾ ಸ್ಫೋಟವನ್ನು ತಡೆಯಲು ಖಚಿತ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ ಎಂದವರು ಹೇಳಿದರು. 

ಸಮಾಜವಾದಿ ಪಕ್ಷದ ಸದಸ್ಯ ಜಾವೇದ್‌ ಅಲಿ ಖಾನ್‌ ಅವರು ಮಾತನಾಡಿ, “ಅಲ್ಪಸಂಖ್ಯಾಕರ ಶಿಕ್ಷಣ ಮತ್ತು ಆರ್ಥಿಕ ನೆರವಿಗಾಗಿ ಹಲವಾರು ಸಂಸ್ಥೆಗಳನ್ನು ಸರಕಾರ ಸ್ಥಾಪಿಸಿದೆಯಾದರೂ ಸಕಾಲಿಕ ನೇಮಕಾತಿ ಇಲ್ಲದ ಕಾರಣಕ್ಕೆ ಅವು ಬಹುತೇಕ ನಿಷ್ಕ್ರಿಯವಾಗಿವೆ’ ಎಂದು ಹೇಳಿದರು. 

ಮೌಲಾನಾ ಶಿಕ್ಷಣ ಪ್ರತಿಷ್ಠಾನಕ್ಕೆ ನಿರ್ದೇಶಕರಿಲ್ಲದೆ 3 ವರ್ಷಗಳಾಗಿವೆ; ಕೇವಲ 6 ತಿಂಗಳ ಹಿಂದಷ್ಟೇ ಈ ಹುದ್ದೆಗೆ ನೇಮಕಾತಿ ನಡೆದಿದೆ. ರಾಷ್ಟ್ರೀಯ ಅಲ್ಪಸಂಖ್ಯಾಕ ಅಭಿವೃದ್ಧಿ ಹಣಕಾಸು ನಿಗಮಕ್ಕೆ ಕೂಡ ಅಧ್ಯಕ್ಷರಿಲ್ಲದೆ 3 ವರ್ಷಗಳಾಗಿವೆ; ಕೇವಲ 3 ತಿಂಗಳ ಹಿಂದಷ್ಟೇ ಈ ನೇಮಕಾತಿ ಮಾಡಲಾಗಿದೆ’ ಎಂದು ಖಾನ್‌ ಹೇಳಿದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.