ರಾಜಕೀಯ ಹಿಂಸೆಗೆ ಸಂವಿಧಾನದಲ್ಲಿ ಸ್ಥಾನವಿಲ್ಲ: ರಾಷ್ಟ್ರಪತಿ ಕೋವಿಂದ್
Team Udayavani, Aug 7, 2018, 6:00 AM IST
ತಿರುವನಂತಪುರ/ಕಾಸರಗೋಡು: ಕೇರಳದಲ್ಲಿ ಸಿಪಿಎಂ- ಆರ್ಎಸ್ಎಸ್ ಕಾರ್ಯಕರ್ತರ ನಡುವಿನ ರಾಜಕೀಯ ಹತ್ಯಾ ಘಟನೆಗಳು ನಡೆಯುತ್ತಿರುವಂತೆಯೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೇರಳ ಪ್ರವಾಸ ಆರಂಭಿಸಿದ್ದಾರೆ. ತಿರುವನಂತಪುರದಲ್ಲಿರುವ ಕೇರಳ ವಿಧಾನಸಭೆಯ ವಜ್ರ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಷ್ಟ್ರಪತಿ ಕೋವಿಂದ್, ಸಂವಿಧಾನದಲ್ಲಿ ಹಿಂಸೆಗೆ ಸ್ಥಾನವಿಲ್ಲ. ಪರಸ್ಪರರ ವಾದ, ಅಭಿಪ್ರಾಯ ಗೌರವಿಸುವ ಅಂಶ ಕೇರಳಿ ಗರಲ್ಲಿ ಹೆಚ್ಚಾಗಿಯೇ ಇದೆ. ಇದರ ಹೊರತಾಗಿಯೂ ಕೇರಳ ದಲ್ಲಿ ರಾಜಕೀಯ ಹಿಂಸೆಗಳು ನಡೆಯುತ್ತಿವೆ. ರಾಜಕೀಯ ಹಿಂಸೆಗೆ ಸಂವಿಧಾನದಲ್ಲಿ ಸ್ಥಾನವಿಲ್ಲ’ ಎಂದು ಹೇಳಿದ್ದಾರೆ.
ಅರ್ಚಕನ ಬಂಧನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗವಹಿಸಲಿರುವ ಸೈಂಟ್ ಥಾಮಸ್ ಕಾಲೇಜಿಗೆ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕಿದ ಅರ್ಚಕನನ್ನು ಬಂಧಿಸ ಲಾಗಿದೆ. ಮದ್ಯದ ಅಮಲಿನಲ್ಲಿ ಭಾನುವಾರ ರಾತ್ರಿ 1 ಗಂಟೆಗೆ ಪೊಲೀಸ್ ಕಂಟ್ರೋಲ್ ರೂಮ್ಗೆ ಚೆರಿಕಲ್ ಭಗವತಿ ದೇಗುಲದ ಅರ್ಚಕ ಜಯರಾಮನ್ ಫೋನ್ ಮಾಡಿ ಬೆದರಿಕೆ ಹಾಕಿದ್ದು, ಅವರ ವಿರುದ್ಧ ಕೇಸು ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ