ಮಲೇಶ್ಯ: ಅಪಹೃತ ಭಾರತೀಯರಿಬ್ಬರ ಬಿಡುಗಡೆ: ಸುಶ್ಮಾ ಸ್ವರಾಜ್
Team Udayavani, Aug 8, 2018, 11:23 AM IST
ಹೊಸದಿಲ್ಲಿ : ವಾಣಿಜ್ಯ ಭೇಟಿಗಾಗಿ ಮಲೇಶ್ಯಕ್ಕೆ ತೆರಳಿದ್ದ ವೇಳೆ ಅಪಹೃತರಾಗಿದ್ದ ಇಬ್ಬರು ಭಾರತೀಯರನ್ನು ಪಾರುಗೊಳಿಸಲಾಗಿದೆ ಎಂದು ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್ ದೃಡೀಕರಿಸಿದ್ದಾರೆ.
ವಾಣಿಜ್ಯ ಪ್ರವಾಸಾರ್ಥ ಮಲೇಶ್ಯಕ್ಕೆ ತೆರಳಿದ್ದ ಆರ್ ವಿ ವೈದ್ಯ ಮತ್ತು ಕೆ ಪಿ ವೈದ್ಯ ಅವರನ್ನು ಇದೇ ಆಗಸ್ಟ್ 3ರಂದು ಅಪಹರಿಸಲಾಗಿತ್ತು.
ಮಲೇಶ್ಯದಲ್ಲಿನ ಭಾರತೀಯ ಹೈಕಮಿಶನರ್ ಮೃದುಲ್ ಕುಮಾರ್ ಮತ್ತು ಅವರ ತಂಡದವರು, ಮಲೇಶ್ಯ ಪೊಲೀಸರು ನಡೆಸಿರುವ ಪ್ರಯತ್ನದ ಫಲವಾಗಿ ಇಬ್ಬರೂ ಭಾರತೀಯ ಪ್ರಜೆಗಳನ್ನು ಪಾರುಗೊಳಿಸಲಾಗಿದೆ ಎಂದು ತಿಳಿಸಲು ಸಂತೋಷ ಪಡುತ್ತೇನೆ ಎಂಬುದಾಗಿ ಸುಶ್ಮಾ ಸ್ವರಾಜ್ ಟ್ವಿಟರ್ನಲ್ಲಿ ಹೇಳಿದ್ದಾರೆ.
ಇದೇ ವೇಳೆ ಎಂ ವಿ ಮಹರ್ಷಿ ವಾಮದೇವ ಹಡಗಿನ ಸಿಬಂದಿಗಳಾದ ರೋಹಿತ್ ಪಾಲ್ ಮತ್ತು ರಿಷಬ್ ಗುಪ್ತಾ ಅವರು ಹಡಗಿನಲ್ಲಿ ಎಸಿ ಮತ್ತು ಬೆಳಕು ಇಲ್ಲದಿದ್ದ ಕಾರಣಕ್ಕೆ ಹೀಟ್ ಸ್ಟ್ರೋಕ್ ಗೆ ಗುರಿಯಾಗಿದ್ದು ಅವರನ್ನು ಮರಳಿ ದೇಶಕ್ಕೆ ಕರೆ ತರಲಾಗಿದೆ ಎಂದು ಸಚಿವೆ ಸುಶ್ಮಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
KKR ತಂಡಕ್ಕೆ ಮರಳಲಿರುವ ಅಫ್ಘಾನ್ ಬ್ಯಾಟರ್ ರಹ್ಮಾನುಲ್ಲ ಗುರ್ಬಾಝ್
G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?
Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ
D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ
Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್ ತಂಡ