ಬಾಲಿಕಾಶ್ರಮ ಹಗರಣ: ಸಚಿವೆ ಮಂಜು ವರ್ಮಾ ರಾಜೀನಾಮೆ
Team Udayavani, Aug 9, 2018, 6:00 AM IST
ಪಾಟ್ನಾ: ಮುಜಫ್ಫರ್ಪುರ ಬಾಲಿಕಾಶ್ರಮದಲ್ಲಿ ಬಾಲಕಿಯರ ಮೇಲೆ ಲೈಂಗಿಕ ಹಗರಣಕ್ಕೆ ಬಿಹಾರದ ಸಮಾಜ ಕಲ್ಯಾಣ ಸಚಿವೆ ಮಂಜು ವರ್ಮಾ, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಾಲಿಕಾಶ್ರಮದಲ್ಲಿ 34 ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿರುವ ಈ ಪ್ರಕರಣದಲ್ಲಿ ಮಂಜು ವರ್ಮಾ ಪತಿ ಚಂಡೇಶ್ವರ್ ವರ್ಮಾ ಸಹ ಭಾಗಿಯಾಗಿ ರುವ ಆರೋಪಗಳು ಕೇಳಿಬಂದಿದ್ದವು. ತನಿಖೆಯ ವೇಳೆ, ಪ್ರಕರಣದ ಪ್ರಮುಖ ಆರೋಪಿ ಹಾಗೂ ಬಾಲಿಕಾಶ್ರಮ ನಡೆಸು ತ್ತಿದ್ದ ಬ್ರಿಜೇಶ್ ಠಾಕೂರ್ ಅವರ ಮೊಬೈಲ್ ಕರೆಗಳ ವಿವರಗಳಲ್ಲಿ ಚಂಡೇ ಶ್ವರ್ ವರ್ಮಾ ಗೆ ಠಾಕೂರ್ ಜನವರಿಯಿಂದ ಜೂನ್ವರೆಗೆ 17 ಬಾರಿ ಕರೆ ಮಾಡಿರುವುದು ತಿಳಿದು ಬಂದಿತ್ತು. ವಿಚಾರಣೆ ವೇಳೆ ಠಾಕೂರ್, ವರ್ಮಾ ಅವರು ಆಗಾಗ್ಗೆ ಬಾಲಿಕಾಶ್ರಮಕ್ಕೆ ಬಂದು ಉಳಿದುಕೊಳ್ಳು ತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದ. ಈ ಎಲ್ಲಾ ಬೆಳವಣಿಗೆಗಳ ನಂತರ, ಸಮಾಜ ಕಲ್ಯಾಣ ಸಚಿವರ ರಾಜಿನಾಮೆಗೆ ಪ್ರತಿಪಕ್ಷ ಗಳು ಒತ್ತಾಯಿಸುತ್ತಿದ್ದವು. ಬಿಹಾರ ಮುಖ್ಯ ಮಂತ್ರಿ ನಿತೀಶ್ ಕುಮಾರ್ ಸೋಮವಾರ ಸುದ್ದಿಗೋಷ್ಠಿ ನಡೆಸಿ ಪ್ರಕರಣದಲ್ಲಿ ಭಾಗಿ ಆಗಿರುವ ಯಾರೇ ಆಗಲಿಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.
ಪರಿಶೀಲನೆಗೆ ಆದೇಶ: ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿನ ಬಾಲಿಕಾಶ್ರಮಗಳ ಹಗರಣ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 60 ದಿನಗಳ ಒಳಗಾಗಿ ದೇಶಾದ್ಯಂತ ಇರುವ 9 ಸಾವಿರಕ್ಕೂ ಅಧಿಕ ಹೆಣ್ಣು ಮಕ್ಕಳ ಮತ್ತು ಇತರ ಆಶ್ರಮಗಳನ್ನು ಪರಿಶೀಲನೆ ನಡೆಸಿ ಅಲ್ಲಿನ ಸ್ಥಿತಿ ಗತಿ ಬಗ್ಗೆ ವರದಿ ಸಲ್ಲಿಸಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ