ಎನ್ಡಿಎ ಅಭ್ಯರ್ಥಿಗೆ ಜಯ?
Team Udayavani, Aug 9, 2018, 6:00 AM IST
ಹೊಸದಿಲ್ಲಿ: ರಾಜ್ಯಸಭೆ ಉಪ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ನ ಬಿ.ಕೆ.ಹರಿಪ್ರಸಾದ್ ಮತ್ತು ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ನಡುವೆ ಚುನಾವಣೆ ನಡೆಯಲಿದೆ. ಸರ್ಕಾರದ ಪರವಾಗಿಯೇ ಹೆಚ್ಚಿನ ಮತಗಳು ಚಲಾವಣೆಯಾಗಲಿದೆ. ಇದೇ ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಒಡಿಶಾ ಸಿಎಂ ನವೀನ್ ಪಟ್ನಾಯಕ್ಗೆ ಫೋನ್ ಮಾಡಿ ಎನ್ಡಿಎ ಅಭ್ಯರ್ಥಿಗೇ ಬೆಂ ಬಲ ನೀಡಬೇಕು ಎಂದು ಮನವಿ ಮಾಡಿ ದ್ದರು. ಇದೇ ವೇಳೆ ಮೂತ್ರ ಪಿಂಡ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ ಗುರುವಾರ ಮತದಾನದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.