ದೆಹಲಿಯಲ್ಲಿ ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆಗೆ ಒಪ್ಪಿಗೆ
Team Udayavani, Aug 10, 2018, 6:00 AM IST
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ವ್ಯಾಪ್ತಿಯಲ್ಲಿ ಕನ್ನಡ ಭಾಷೆಯ ಪ್ರಚಾರಕ್ಕಾಗಿ ಅಕಾಡೆಮಿ ಸ್ಥಾಪಿಸಲು ದೆಹಲಿ ಸರ್ಕಾರ ಒಪ್ಪಿಗೆ ನೀಡಿದೆ. ಮಂಗಳವಾರ ದೆಹಲಿ ಅಸೆಂಬ್ಲಿಗೆ ಸಂಸ್ಕೃತಿ ಖಾತೆಯ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಮನೀಷ್ ಸಿಸ್ಸೂಡಿಯಾ ಈ ಮಾಹಿತಿ
ನೀಡಿದ್ದಾರೆ.
ಈ ಬಗ್ಗೆ ನವದೆಹಲಿಯಲ್ಲಿರುವ ಕರ್ನಾಟಕ ಸಂಘ ಕೇಜ್ರಿವಾಲ್ ಸರ್ಕಾರದ ಮೇಲೆ ಒತ್ತಡ ಹೇರಿತ್ತು. ಕನ್ನಡದ ಜತೆಗೆ ಬಂಗಾಳಿ, ಮರಾಠಿ, ಗುಜರಾತಿ,
ತಮಿಳು, ತೆಲುಗು, ಮಲಯಾಳಂ, ಒಡಿಯಾ, ಅಸ್ಸಾಮಿ, ಕಾಶ್ಮೀರಿ, ಮಾರ್ವಾರಿ, ಹರ್ಯಾನ್ವಿ, ಕುಮೌನಿ, ಜೌನ್ಸಾರಿ ಭಾಷೆಗಳ ಪ್ರಚಾರ ಮತ್ತು ಅಭಿವೃದ್ಧಿಗಾಗಿ ಅಕಾಡೆಮಿಗಳನ್ನು ಸ್ಥಾಪಿಸಲು ಒಪ್ಪಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಇದರ ಜತೆಗೆ ವಿದೇಶಿ ಭಾಷೆಗಳ ಪ್ರೋತ್ಸಾಹ ಕ್ಕಾಗಿ ಅವುಗಳಿಗೆ ಸಂಬಂಧಿಸಿದ ಅಕಾಡೆಮಿಗಳನ್ನೂ ಪ್ರಾರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ. ವಿವಿಧ ಭಾಷೆಗಳ ಜನರು ದೆಹಲಿಯಲ್ಲಿ
ಜೀವಿಸುತ್ತಿದ್ದಾರೆ. ಹೀಗಾಗಿ ಅದು ಸಾಂಸ್ಕೃತಿಕವಾಗಿ ಶ್ರೀಮಂತವಾಗಿದೆ ಎಂದು ಸಿಸ್ಸೂಡಿಯಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ