ಮಳೆ ಅಬ್ಬರ; ಮುನ್ನಾರ್ ರೆಸಾರ್ಟ್ ನಲ್ಲಿ 60 ಪ್ರವಾಸಿಗರು ಅಪಾಯದಲ್ಲಿ
Team Udayavani, Aug 10, 2018, 3:39 PM IST
ಮುನ್ನಾರ್ : ಧಾರಾಕಾರ ಮಳೆ ಸುರಿಯುತ್ತಿರುವ ಕೇರಳದ ಪ್ರಸಿದ್ಧ ಮುನ್ನಾರ್ ಹಿಲ್ ಸ್ಟೇಶನ್ಗೆ ಸಮೀಪದಲ್ಲಿರುವ ಇಡುಕ್ಕಿಯ ಪಳ್ಳಿವಸಳ್ ಧಾಮದಲ್ಲಿ 20 ವಿದೇಶೀ ಪ್ರವಾಸಿಗರ ಸಹಿತ ಒಟ್ಟು 60 ಮಂದಿ ಪ್ರವಾಸಿಗರು ಸಿಕ್ಕಿ ಹಾಕಿಕೊಂಡಿದ್ದಾರೆ.
ನಿರಂತರ ಮಳೆಯಿಂದಾಗಿ ಉಂಟಾಗಿರುವ ಭೂಕುಸಿತದ ಕಾರಣ ಈ ಪ್ರವಾಸೀ ಧಾಮವನ್ನು ಸಂಪರ್ಕಿಸುವ ಎಲ್ಲ ರಸ್ತೆಗಳೂ ಬ್ಲಾಕ್ ಆಗಿವೆ.
ಈ ಪ್ರವಾಸೀ ಧಾಮದಲ್ಲಿ ಪ್ರವಾಸಿಗರು ಕಳೆದ ಎರಡು ದಿನಗಳಿಂದ ಸಿಲುಕಿಕೊಂಡಿದ್ದಾರೆ. ಇವರನ್ನು ಪಾರುಗೊಳಿಸುವ ಪ್ರಯತ್ನದಲ್ಲಿ ರಾಷ್ಟ್ರೀಯ ವಿಪತ್ತು ಸ್ಪಂದನ ದಳ (ಎನ್ಡಿಆರ್ಎಫ್) ಮತ್ತು ಸೇನಾ ಸಿಬಂದಿಗಳು ತೊಡಗಿಕೊಂಡಿದ್ದಾರೆ.
ದಿಢೀರ್ ನೆರೆ ಕಂಡು ಬರುತ್ತಿರುವ ಈ ದಿನಗಳಲ್ಲಿ ಕೇರಳಕ್ಕೆ ಭೇಟಿ ಕೊಡದಂತೆ ಅಮೆರಿಕ ತನ್ನ ಪ್ರಜೆಗಳಿಗೆ ಸೂಚನೆ ಕೊಟ್ಟಿದೆ. ನಿನ್ನೆ ಶುಕ್ರವಾರ ಬಿಡುಗಡೆ ಮಾಡಲಾಗಿರುವ ಅಮೆರಿಕ ಸೂಚನೆಯಲ್ಲಿ ಕೇರಳದಲ್ಲಿ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ನೈಋತ್ಯ ಮಾನ್ಸೂನ್ ಮಳೆಯಿಂದಾಗಿ ವ್ಯಾಪಕ ಭೂಕುಸಿತ ಮತ್ತು ಪ್ರವಾಹ ಉಂಟಾಗುತ್ತಿರುವ ಬಗ್ಗೆ ಎಚ್ಚರಿಕೆಯನ್ನು ಕೊಡಲಾಗಿದೆ.
ಭೂಕುಸಿತ, ನೆರೆ, ಪ್ರವಾಹ, ಜಡಿ ಮಳೆ ಆಗತ್ತಿರುವ ಕೇರಳದ ಯಾವುದೇ ಭಾಗಕ್ಕೂ ಹೋಗಬೇಡಿ ಎಂದು ಅಮೆರಿಕ ತನ್ನ ಪ್ರಜೆಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದೆ.
ಈ ನಡುವೆ ಕೇರಳ ಜಡಿ ಮಳೆಗೆ ಬಲಿಯಾಗಿರುವವರ ಸಂಖ್ಯೆ 26ಕ್ಕೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ