ಸೋಮನಾಥ ಚಟರ್ಜಿ ಇನ್ನಿಲ್ಲ:  ಬಹು ಅಂಗಾಂಗ ವೈಫ‌ಲ್ಯದಿಂದ ನಿಧನ


Team Udayavani, Aug 14, 2018, 6:00 AM IST

31.jpg

ಕೋಲ್ಕತಾ/ಹೊಸದಿಲ್ಲಿ: “ಭದ್ರಲೋಕ್‌ ಕಮ್ಯೂನಿಸ್ಟ್‌’, “ಹೆಡ್‌ಮಾಸ್ತರ್‌’ ಎಂದೇ ಖ್ಯಾತರಾಗಿದ್ದ ಸೋಮನಾಥ ಚಟರ್ಜಿ ಸೋಮವಾರ ಬೆಳಗ್ಗೆ ಕೋಲ್ಕತಾದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನ ಹೊಂದಿದ್ದಾರೆ. 89 ವರ್ಷ ವಯಸ್ಸಿನ ಸೋಮನಾಥ ಚಟರ್ಜಿ ಅವರಿಗೆ ರವಿವಾರ ಲಘು ಹೃದಯಾಘಾತವಾಗಿತ್ತು. ಸೋಮ ವಾರ ಬೆಳಗ್ಗೆ ಬಹು ಅಂಗಾಂಗ ವೈಫ‌ಲ್ಯದಿಂದ ಕೊನೆಯುಸಿರೆಳೆದಿದ್ದಾರೆ.

ಹತ್ತು ಬಾರಿ ಸಂಸದರಾಗಿದ್ದ ಚಟರ್ಜಿ ಅವರು, ಪತ್ನಿ ರೇಣು, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ಪ. ಬಂಗಾಲ ವಿಧಾನಸಭೆಗೆ ಒಯ್ದು ಸರ ಕಾರಿ ಗೌರವ ಸಲ್ಲಿಸಿದ ಬಳಿಕ ಅವರ ನಿವಾಸಕ್ಕೆ ಒಯ್ಯಲಾಯಿತು. ಇದಾದ ಬಳಿಕ ಎಸ್‌ಎಸ್‌ಕೆಎನ್‌ ಆಸ್ಪತ್ರೆಗೆ ದೇಹ ದಾನ ಮಾಡಲಾಯಿತು. 

ತಮ್ಮ ಜೀವನದುದ್ದಕ್ಕೂ ಎಡಪಂಥೀಯ ಸಿದ್ಧಾಂತ ರೂಢಿಸಿಕೊಂಡಿದ್ದ  ಸೋಮನಾಥ ಚಟರ್ಜಿ ಅವರು ಜ್ಯೋತಿ ಬಸು ಒಡನಾಡಿಯಾಗಿದ್ದರು. ದೇಶದ ಇತಿಹಾಸದಲ್ಲೇ ಮೊತ್ತಮೊದಲ ಬಾರಿಗೆ ಎಡಪಕ್ಷಗಳ ಕಡೆಯಿಂದ ಲೋಕಸಭೆಗೆ ಸ್ಪೀಕರ್‌ ಆದವರು ಚಟರ್ಜಿ. ಈ ಸಂದರ್ಭದಲ್ಲಿ ಯಾವುದೇ ಪಕ್ಷದ ಕೈಗೊಂಬೆಯಾಗದೆ ಕಾರ್ಯ ನಿರ್ವಹಿಸಿದ್ದರಿಂದ ತಮ್ಮ ಪಕ್ಷದಿಂದಲೇ ಉಚ್ಛಾಟನೆಗೂ ಒಳಗಾಗಬೇಕಾಯಿತು. 

 “ಸಂಸದೀಯ ಪ್ರಜಾಪ್ರಭುತ್ವವನ್ನು ಚಟರ್ಜಿ ಶ್ರೀಮಂತಗೊಳಿಸಿದ್ದರು. ಬಡವರು ಮತ್ತು ಸಮಾಜದ ಕಟ್ಟಕಡೆಯವರಿಗಾಗಿ ಧ್ವನಿ ಎತ್ತಿದ್ದರು’ ಎಂದು ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಅವರು ಕೇವಲ ವ್ಯಕ್ತಿಯಾಗಿರಲಿಲ್ಲ, ಬದಲಾಗಿ ಸಂಸ್ಥೆಯಂತಿದ್ದರು. ಪಕ್ಷಭೇದವಿಲ್ಲದೆ ಎಲ್ಲರ ಕಡೆಯಿಂದಲೂ ಗೌರವ ಪಡೆಯುವಂಥ ವ್ಯಕ್ತಿತ್ವ ಇವರದ್ದಾಗಿತ್ತು. ಲೋಕಸಭೆ ಸ್ಪೀಕರ್‌ ಹುದ್ದೆಯ ಘನತೆಯನ್ನು ಎತ್ತಿಹಿಡಿದರು’ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಕಂಬನಿ ಮಿಡಿದಿದ್ದಾರೆ. 

ಲೋಕಸಭೆಯ ಹಾಲಿ ಸ್ಪೀಕರ್‌ ಸುಮಿತ್ರಾ ಮಹಾಜನ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಎಲ್‌.ಕೆ. ಆಡ್ವಾಣಿ, ಪ. ಬಂಗಾಲ ಸಿಎಂ ಮಮತಾ ಬ್ಯಾನರ್ಜಿ, ರಾಜ್ಯಪಾಲ ಕೆ.ಎನ್‌. ತ್ರಿಪಾಠಿ, ಮಾಜಿ ಪ್ರಧಾನಿ ಡಾ| ಮನಮೋಹನ್‌ ಸಿಂಗ್‌, ಅರುಣ್‌ ಜೇತ್ಲಿ, ಸುಷ್ಮಾ ಸ್ವರಾಜ್‌, ನಿರ್ಮಲಾ ಸೀತಾರಾಮನ್‌, ಪಿ. ಚಿದಂಬರಂ, ಶರದ್‌ ಪವಾರ್‌ ಸಹಿತ ಎಲ್ಲ ಪಕ್ಷಗಳ ನಾಯಕರು ಚಟರ್ಜಿ ಅವರ ಸಾವಿಗೆ ಕಂಬನಿ ಮಿಡಿದಿದ್ದಾರೆ. 

ವಾಪಸ್‌ ಸೇರಿಸಿಕೊಳ್ಳದ್ದಕ್ಕೆ ಸಿಪಿಎಂ ವಿಷಾದ
2004-09ರ ವರೆಗೆ ಚಟರ್ಜಿ ಲೋಕಸಭೆಯ ಸ್ಪೀಕರ್‌ ಆಗಿದ್ದರು. ಎಡಪಕ್ಷಗಳು ಯುಪಿಎ-1 ಸರಕಾರಕ್ಕೆ ನೀಡಿದ್ದ ಬೆಂಬಲ ವಾಪಸ್‌ ತೆಗೆದು ಕೊಂಡಿದ್ದವು. ಆಗ ಇವರಿಗೂ ರಾಜೀನಾಮೆ ನೀಡುವಂತೆ ಸೂಚಿಸಲಾಗಿತ್ತು. ಆದರೆ ಅವರು ನಿರಾಕರಿಸಿದ್ದರು. ಸಿಪಿಎಂ ಇವರನ್ನು ಪಕ್ಷದಿಂದಲೇ ಉಚ್ಚಾಟಿಸಿತ್ತು. ಈಗ ಅವರ ಸಾವಿನ ಬಳಿಕ ಸಿಪಿಎಂ ನಾಯಕರು ವಿಷಾದ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.